AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard: ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದ ಚಿರತೆ, 16 ತಿಂಗಳ ಮಗುವನ್ನು ಕೊಂದ ಇನ್ನೊಂದು ಚಿರತೆಗಾಗಿ ಶೋಧ

ಅರಣ್ಯಾಧಿಕಾರಿಗಳು ಹಾಕಿದ್ದ ಬೋನಿಗೆ ಚಿರತೆಯೊಂದು ಬಿದ್ದಿದೆ. ಈ ಚಿರತೆ 16 ತಿಂಗಳ ಮಗುವನ್ನು ಕೊಂದಿದೆ ಎಂದು ಶಂಕಿಸಲಾಗಿದೆ. ಮುಂಬೈನ ಆರೆ ಕಾಲೋನಿಯಲ್ಲಿ ಅರಣ್ಯಾಧಿಕಾರಿಗಳು ಹಾಕಿದ್ದ ಬಲೆಗೆ ಬುಧವಾರ ಚಿರತೆಯೊಂದು ಬಿದಿದ್ದೆ

Leopard: ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದ ಚಿರತೆ, 16 ತಿಂಗಳ ಮಗುವನ್ನು ಕೊಂದ ಇನ್ನೊಂದು ಚಿರತೆಗಾಗಿ ಶೋಧ
Leopard that fell into forest officials' cage, search for another leopard that killed a 16-month-old child
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 26, 2022 | 3:44 PM

Share

ಮುಂಬೈ: ಅರಣ್ಯಾಧಿಕಾರಿಗಳು ಹಾಕಿದ್ದ ಬೋನಿಗೆ ಚಿರತೆಯೊಂದು ಬಿದ್ದಿದೆ. ಈ ಚಿರತೆ 16 ತಿಂಗಳ ಮಗುವನ್ನು ಕೊಂದಿದೆ ಎಂದು ಶಂಕಿಸಲಾಗಿದೆ. ಮುಂಬೈನ ಆರೆ ಕಾಲೋನಿಯಲ್ಲಿ ಅರಣ್ಯಾಧಿಕಾರಿಗಳು ಹಾಕಿದ್ದ ಬಲೆಗೆ ಬುಧವಾರ ಚಿರತೆಯೊಂದು ಬಿದಿದ್ದೆ. ಈ ಚಿರತೆಯೂ 16 ತಿಂಗಳ ಬಾಲಕಿಯನ್ನು ಕೊಂದಿದೆ ಎಂದು ಶಂಕಿಸಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಅರಣ್ಯಾಧಿಕಾರಿಗಳು ಹಾಕಿದ್ದ ಬೋನಿನೊಳಗೆ ಈ ಚಿರತೆ ಬಿದ್ದಿದೆ. ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನ (ಎಸ್‌ಜಿಎನ್‌ಪಿ) ಅಧಿಕಾರಿಗಳು, ತಿಳಿಸಿರುವಂತೆ ಚಿರತೆಯನ್ನು ಹಿಡಿಯಲು ಮೂರು ಬೋನ್‌ಗಳನ್ನು ಇಟ್ಟಿದ್ದರು. ಇಂದು ಬೆಳಿಗ್ಗೆ 6 ಗಂಟೆಗೆ ಅಧಿಕಾರಿಗಳು ಪರಿಶೀಲಿಸಿದಾಗ ಅವರು ಹಾಕಿದ್ದ ಒಂದು ಬೋನಿನಲ್ಲಿ ಚಿರತೆ ಕಂಡುಬಂದಿದೆ.

C55 ಎಂದು ಗುರುತಿಸಲಾದ ಮೂರು ವರ್ಷದ ಗಂಡು ಚಿರತೆಯನ್ನು ಕೆಲವು ವೈದ್ಯಕೀಯ ಪರೀಕ್ಷೆಗಳಿಗಾಗಿ SGNP ಗೆ ಕರೆದೊಯ್ದಿದ್ದು, ಆರೆ ಅರಣ್ಯ ಪ್ರದೇಶದಲ್ಲಿ ಅನೇಕ ಕಡೆ ಈ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದೀಗ ಬೋನಿಗೆ ಬಿದ್ದಿರುವ ಚಿರತೆಯ ಒಡಹುಟ್ಟಿದ ಸಿ 56 ಎಂಬ ಇನ್ನೊಂದು ಗಂಡು ಚಿರತೆಯ ಚಲನವಲನದ ಮೇಲೆ ನಿಗಾ ಇಟ್ಟಿದ್ದೇವೆ. 16 ತಿಂಗಳ ಮಗುವಿನ ಮೇಲೆ ಈ ಗಂಡು ಚಿರತೆ ನಡೆಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇದೀಗ ಒಂದು ಚಿರತೆಯನ್ನು ಸೆರೆಹಿಡಿಯಲಾಗಿದೆ. ಇನ್ನೊಂದು ಗಂಡು ಚಿರತೆಯ ಚಲನವಲನಗಳ ಬಗ್ಗೆ ಗಮನಿಸಲಾಗುತ್ತಿದೆ, ಅದನ್ನು ತಕ್ಷಣದಲ್ಲಿ ಪತ್ತೆ ಮಾಡಲಾಗುವುದು ಎಂದು ಅರಣ್ಯ ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಐತಿಕಾ ಅಖಿಲೇಶ್ ಎಂದು ಗುರುತಿಸಲಾದ 16 ತಿಂಗಳ ಹೆಣ್ಣು ಮಗುವಿನ ಮೇಲೆ ಚಿರತೆ ಗಂಭೀರ ಗಾಯಗಳನ್ನು ಮಾಡಿದೆ. ಮಗುವನ್ನು ಸೆವೆನ್ ಹಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಮಗುವನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಪೋಸ್ಟ್‌ಮಾರ್ಟಮ್ ವರದಿಯ ಪ್ರಕಾರ, ಮಗು ತೀವ್ರ ರಕ್ತಸ್ರಾವದಿಂದ ಬಲಿಯಾಗಿದೆ, ಏಕೆಂದರೆ ಚಿರತೆಯ ದಾಳಿಯಿಂದ ಮಗುವಿನ ಮೈ ಮೇಲೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿ: Video: ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಕರಿ ಚಿರತೆ

ಚಿರತೆ ಚಟುವಟಿಕೆಗಳ ಮೇಲೆ ನಿಗಾ ಇಡಲು ಘಟನೆ ನಡೆದ ಪ್ರದೇಶದಲ್ಲಿ ಸುಮಾರು 12 ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ರಾತ್ರಿ ಮತ್ತು ಮುಂಜಾನೆ ಮಕ್ಕಳನ್ನು ಹೊರಗೆ ಕಳುಹಿಸದಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಚಿರತೆ ಈ ಪ್ರದೇಶದಲ್ಲಿ ಮನುಷ್ಯರ ಮೇಲೆ ದಾಳಿ ಮಾಡಿರುವುದು ಇದು ಎರಡನೇ ಬಾರಿ. ಸುಮಾರು ಮೂರು ವಾರಗಳ ಹಿಂದೆ, 9 ವರ್ಷದ ಬಾಲಕ ತನ್ನ ತಂದೆಯೊಂದಿಗೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ಚಿರತೆ ದಾಳಿ ಮಾಡಿತ್ತು.

Published On - 3:44 pm, Wed, 26 October 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?