AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಕೆನಡಾ ಸಾಕ್ಷಿ ನೀಡಲಿ, ಯಾವ ತನಿಖೆಗೂ ನಾವು ನಿರಾಕರಿಸುವುದಿಲ್ಲ: ಎಸ್​. ಜೈಶಂಕರ್

ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್​ ಅವರು ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ. ಆದರೆ ಭಾರತ ಸರ್ಕಾರದ ಏಜೆಂಟ್​​​​ಗಳು ​​​ಹರ್ದೀಪ್ ಸಿಂಗ್ ನಿಜ್ಜರ್​​ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಭಾರತಕ್ಕೆ ಕೆನಡಾ ಸಾಕ್ಷಿ ನೀಡಲಿ, ಯಾವ ತನಿಖೆಗೂ ನಾವು ನಿರಾಕರಿಸುವುದಿಲ್ಲ: ಎಸ್​. ಜೈಶಂಕರ್
ಸಾಂದರ್ಭಿಕ ಚಿತ್ರ (ಟಿವಿ9 ವೆಬ್​​​​)
TV9 Web
| Edited By: |

Updated on:Nov 16, 2023 | 1:07 PM

Share

ಕೆನಡಾ ಮತ್ತು ಭಾರತದ (India-canada) ನಡುವಿನ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ಶಾಂತವಾಗಿದೆ. ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಭಾರತದ ಮೇಲೆ ಆರೋಪವನ್ನು ಮಾಡಿತ್ತು. ಭಾರತ ಸರ್ಕಾರದ ಏಜೆಂಟ್​​​ಗಳು ಹರ್ದೀಪ್ ಸಿಂಗ್ ನಿಜ್ಜರ್​​ನನ್ನು ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾರತವೇ ಈ ಕೆಲಸವನ್ನು ಮಾಡಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು. ಇದಕ್ಕೆ ಭಾರತ ಕೂಡ ನಾವು ಎಲ್ಲದಕ್ಕೂ ಸಿದ್ಧ ಎಂದು ಹೇಳಿತ್ತು. ಇದೀಗ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ( s jaishankar)​ ಅವರು ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ. ಆದರೆ ಭಾರತ ಸರ್ಕಾರದ ಏಜೆಂಟ್​​​​ಗಳು ​​​ಹರ್ದೀಪ್ ಸಿಂಗ್ ನಿಜ್ಜರ್​​ನನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಬ್ರಿಟನ್​​​​ ಪ್ರವಾಸದಲ್ಲಿರುವ ಎಸ್​​ ಜೈಶಂಕರ್​​​ ಅವರು ಬ್ರಿಟನ್​​​ನಲ್ಲಿ ನಡೆದ ಸಂದರ್ಶನದಲ್ಲಿ ಹಿರಿಯ ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗೆ ಮಾತನಾಡಿದರು. ಭಾರತದ ಮೇಲೆ ಇಂತಹ ಆರೋಪ ಮಾಡುವ ಮುನ್ನ ಸಾಕ್ಷ್ಯಗಳನ್ನು ನೀಡಿ. ನಾವು ಯಾವುದೇ ತನಿಖೆ ನಿರಾಕರಿಸುವುದಿಲ್ಲ. ಇದುವರೆಗೂ ಕೆನಡಾ ಭಾರತಕ್ಕೆ ಈ ಬಗ್ಗೆ ಯಾವುದೇ ಪುರಾವೆಯನ್ನು ನೀಡಿಲ್ಲ ಎಂದು ಹೇಳಿದರು.

ಖಲಿಸ್ತಾನದ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಜೂನ್ 18 ರಂದು ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಮಾಡಲಾಗಿದೆ. ನಂತರ ಈ ಹತ್ಯೆಯನ್ನು ಭಾರತದ ಏಜೆಂಟ್​​​ಗಳು ಮಾಡಿದ್ದಾರೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದರು. ಅಲ್ಲಿಂದ ಭಾರತ ಮತ್ತು ಕೆನಡಾ ಸಂಬಂಧ ಉತ್ತಮವಾಗಿಲ್. ಆದರೆ ಈ ಹಿಂದೆಯೇ ಭಾರತ ಆತನನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಿತ್ತು.

ಪ್ರಧಾನಿ ಟ್ರುಡೊ ಅವರ ಆರೋಪಗಳು ಆಧಾರರಹಿತ: ಭಾರತ

ಪ್ರಧಾನಿ ಟ್ರುಡೊ ಅವರ ಆರೋಪಗಳನ್ನು ಭಾರತ ನಿರಾಧಾರ ಎಂದು ತಳ್ಳಿಹಾಕಿದೆ. ಕೆನಡಾದಲ್ಲಿ ಖಲಿಸ್ತಾನ್ ಪರ ಚಳುವಳಿಗಳನ್ನು ಉಲ್ಲೇಖಿಸಿದ ಜೈಶಂಕರ್ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಕೆಲವು ಜವಾಬ್ದಾರಿಗಳೊಂದಿಗೆ ಬರುತ್ತದೆ. ಹಾಗೂ ಆ ಸ್ವಾತಂತ್ರ್ಯಗಳನ್ನು ದುರುಪಯೋಗಪಡಿಸಿಕೊಳ್ಳುವುದು ಮತ್ತು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್​ ಸಿಂಗ್ ನಿಜ್ಜರ್​ನ ಗುಂಡಿಕ್ಕಿ ಹತ್ಯೆ

ಖಲಿಸ್ತಾನ್ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮವಿಲ್ಲ

ಕೆನಡಾದಲ್ಲಿನ ಭಾರತೀಯ ಹೈಕಮಿಷನ್ ಮತ್ತು ಕಾನ್ಸುಲೇಟ್ ಜನರಲ್ ಮೇಲಿನ ಬಾಂಬ್ ದಾಳಿಗಳ ಬಗ್ಗೆ ಮಾತನಾಡಿದ ಜೈಶಂಕರ್​​​ ಕೆನಡಾದ ಅಧಿಕಾರಿಗಳು ಈ ಕೃತ್ಯವನ್ನು ಮಾಡಿದ ಅಪರಾಧಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಗೊಂಡಿಲ್ಲ. ಇದರ ಜತೆಗೆ ಭಾರತೀಯ ರಾಜತಾಂತ್ರಿಕರನ್ನು ಸಾರ್ವಜನಿಕವಾಗಿ ಬೆದರಿಕೆ ಹಾಕಲಾಗಿತ್ತು. ಆದರೆ ಈ ಯಾವುದರ ಬಗ್ಗೆ ಅಲ್ಲಿ ಪ್ರಧಾನಿ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಭಾರತದ ಮೇಲೆ ಖಲಿಸ್ತಾನ್ ಭಯೋತ್ಪಾದಕರು ನಡೆಸುತ್ತಿರುವ ದಾಳಿ ಬಗ್ಗೆ ಯಾವುದೇ ಮಾತು ಇಲ್ಲ ಎಂದು ಹೇಳೀದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:54 am, Thu, 16 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ