ಭಾರತಕ್ಕೆ ಕೆನಡಾ ಸಾಕ್ಷಿ ನೀಡಲಿ, ಯಾವ ತನಿಖೆಗೂ ನಾವು ನಿರಾಕರಿಸುವುದಿಲ್ಲ: ಎಸ್​. ಜೈಶಂಕರ್

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 16, 2023 | 1:07 PM

ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್​ ಅವರು ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ. ಆದರೆ ಭಾರತ ಸರ್ಕಾರದ ಏಜೆಂಟ್​​​​ಗಳು ​​​ಹರ್ದೀಪ್ ಸಿಂಗ್ ನಿಜ್ಜರ್​​ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಭಾರತಕ್ಕೆ ಕೆನಡಾ ಸಾಕ್ಷಿ ನೀಡಲಿ, ಯಾವ ತನಿಖೆಗೂ ನಾವು ನಿರಾಕರಿಸುವುದಿಲ್ಲ: ಎಸ್​. ಜೈಶಂಕರ್
ಸಾಂದರ್ಭಿಕ ಚಿತ್ರ (ಟಿವಿ9 ವೆಬ್​​​​)
Follow us on

ಕೆನಡಾ ಮತ್ತು ಭಾರತದ (India-canada) ನಡುವಿನ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ಶಾಂತವಾಗಿದೆ. ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಭಾರತದ ಮೇಲೆ ಆರೋಪವನ್ನು ಮಾಡಿತ್ತು. ಭಾರತ ಸರ್ಕಾರದ ಏಜೆಂಟ್​​​ಗಳು ಹರ್ದೀಪ್ ಸಿಂಗ್ ನಿಜ್ಜರ್​​ನನ್ನು ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾರತವೇ ಈ ಕೆಲಸವನ್ನು ಮಾಡಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು. ಇದಕ್ಕೆ ಭಾರತ ಕೂಡ ನಾವು ಎಲ್ಲದಕ್ಕೂ ಸಿದ್ಧ ಎಂದು ಹೇಳಿತ್ತು. ಇದೀಗ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ( s jaishankar)​ ಅವರು ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ. ಆದರೆ ಭಾರತ ಸರ್ಕಾರದ ಏಜೆಂಟ್​​​​ಗಳು ​​​ಹರ್ದೀಪ್ ಸಿಂಗ್ ನಿಜ್ಜರ್​​ನನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಬ್ರಿಟನ್​​​​ ಪ್ರವಾಸದಲ್ಲಿರುವ ಎಸ್​​ ಜೈಶಂಕರ್​​​ ಅವರು ಬ್ರಿಟನ್​​​ನಲ್ಲಿ ನಡೆದ ಸಂದರ್ಶನದಲ್ಲಿ ಹಿರಿಯ ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗೆ ಮಾತನಾಡಿದರು. ಭಾರತದ ಮೇಲೆ ಇಂತಹ ಆರೋಪ ಮಾಡುವ ಮುನ್ನ ಸಾಕ್ಷ್ಯಗಳನ್ನು ನೀಡಿ. ನಾವು ಯಾವುದೇ ತನಿಖೆ ನಿರಾಕರಿಸುವುದಿಲ್ಲ. ಇದುವರೆಗೂ ಕೆನಡಾ ಭಾರತಕ್ಕೆ ಈ ಬಗ್ಗೆ ಯಾವುದೇ ಪುರಾವೆಯನ್ನು ನೀಡಿಲ್ಲ ಎಂದು ಹೇಳಿದರು.

ಖಲಿಸ್ತಾನದ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಜೂನ್ 18 ರಂದು ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಮಾಡಲಾಗಿದೆ. ನಂತರ ಈ ಹತ್ಯೆಯನ್ನು ಭಾರತದ ಏಜೆಂಟ್​​​ಗಳು ಮಾಡಿದ್ದಾರೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದರು. ಅಲ್ಲಿಂದ ಭಾರತ ಮತ್ತು ಕೆನಡಾ ಸಂಬಂಧ ಉತ್ತಮವಾಗಿಲ್. ಆದರೆ ಈ ಹಿಂದೆಯೇ ಭಾರತ ಆತನನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಿತ್ತು.

ಪ್ರಧಾನಿ ಟ್ರುಡೊ ಅವರ ಆರೋಪಗಳು ಆಧಾರರಹಿತ: ಭಾರತ

ಪ್ರಧಾನಿ ಟ್ರುಡೊ ಅವರ ಆರೋಪಗಳನ್ನು ಭಾರತ ನಿರಾಧಾರ ಎಂದು ತಳ್ಳಿಹಾಕಿದೆ. ಕೆನಡಾದಲ್ಲಿ ಖಲಿಸ್ತಾನ್ ಪರ ಚಳುವಳಿಗಳನ್ನು ಉಲ್ಲೇಖಿಸಿದ ಜೈಶಂಕರ್ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಕೆಲವು ಜವಾಬ್ದಾರಿಗಳೊಂದಿಗೆ ಬರುತ್ತದೆ. ಹಾಗೂ ಆ ಸ್ವಾತಂತ್ರ್ಯಗಳನ್ನು ದುರುಪಯೋಗಪಡಿಸಿಕೊಳ್ಳುವುದು ಮತ್ತು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್​ ಸಿಂಗ್ ನಿಜ್ಜರ್​ನ ಗುಂಡಿಕ್ಕಿ ಹತ್ಯೆ

ಖಲಿಸ್ತಾನ್ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮವಿಲ್ಲ

ಕೆನಡಾದಲ್ಲಿನ ಭಾರತೀಯ ಹೈಕಮಿಷನ್ ಮತ್ತು ಕಾನ್ಸುಲೇಟ್ ಜನರಲ್ ಮೇಲಿನ ಬಾಂಬ್ ದಾಳಿಗಳ ಬಗ್ಗೆ ಮಾತನಾಡಿದ ಜೈಶಂಕರ್​​​ ಕೆನಡಾದ ಅಧಿಕಾರಿಗಳು ಈ ಕೃತ್ಯವನ್ನು ಮಾಡಿದ ಅಪರಾಧಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಗೊಂಡಿಲ್ಲ. ಇದರ ಜತೆಗೆ ಭಾರತೀಯ ರಾಜತಾಂತ್ರಿಕರನ್ನು ಸಾರ್ವಜನಿಕವಾಗಿ ಬೆದರಿಕೆ ಹಾಕಲಾಗಿತ್ತು. ಆದರೆ ಈ ಯಾವುದರ ಬಗ್ಗೆ ಅಲ್ಲಿ ಪ್ರಧಾನಿ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಭಾರತದ ಮೇಲೆ ಖಲಿಸ್ತಾನ್ ಭಯೋತ್ಪಾದಕರು ನಡೆಸುತ್ತಿರುವ ದಾಳಿ ಬಗ್ಗೆ ಯಾವುದೇ ಮಾತು ಇಲ್ಲ ಎಂದು ಹೇಳೀದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:54 am, Thu, 16 November 23