AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Encounter: ಪುಲ್ವಾಮಾದಲ್ಲಿ ಲಷ್ಕರ್​ ಇ ತೊಯ್ಬಾದ ಕಮಾಂಡರ್​ ಸೇರಿ ಮೂವರು ಉಗ್ರರ ಹತ್ಯೆ

ಉಗ್ರರು ಅಡಗಿದ್ದಾರೆಂಬ ಮಾಹಿತಿ ಬಂದ ತಕ್ಷಣ ಅವರನ್ನು ಹುಡುಕಿ ಬಂಧಿಸಲು ನಾವು ಹೋಗಿದ್ದು. ಆದರೆ ಅಡಗಿದ್ದ ಉಗ್ರರು ಒಂದೇ ಸಮ ನಮ್ಮ ಮೇಲೆ ದಾಳಿ ಮಾಡಲು ಶುರು ಮಾಡಿದರು ಎಂದು ಕಾಶ್ಮೀರ ವಲಯದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Pulwama Encounter: ಪುಲ್ವಾಮಾದಲ್ಲಿ ಲಷ್ಕರ್​ ಇ ತೊಯ್ಬಾದ ಕಮಾಂಡರ್​ ಸೇರಿ ಮೂವರು ಉಗ್ರರ ಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 14, 2021 | 9:42 AM

Share

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾಗಿ ಕಾಶ್ಮೀರ ವಲಯದ ಪೊಲೀಸರು ಇಂದು ಬೆಳಗ್ಗೆ ಮಾಹಿತಿ ನೀಡಿದ್ದಾರೆ. ಬುಧವಾರ ಮುಂಜಾನೆಯಿಂದಲೂ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಗುಂಡಿನಚಕಮಕಿ ನಡೆಯುತ್ತಿತ್ತು. ಅಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಸ್ಥಳವನ್ನು ಸುತ್ತುವರಿದಿದ್ದರು. ತಮ್ಮನ್ನು ಸೆರೆ ಹಿಡಿಯಲು ಬಂದ ಪೊಲೀಸ್​ ಸಿಬ್ಬಂದಿ ಮೇಲೆ ಭಯೋತ್ಪಾದಕರೂ ಗುಂಡಿನ ದಾಳಿ ನಡೆಸಿದ್ದರು.

ಪಾಕಿಸ್ತಾನದ ಲಷ್ಕರ್​ ಇ ತೊಯ್ಬಾ ಉಗ್ರಸಂಘಟನೆಯ ಕಮಾಂಡರ್​ ಐಜಾಜ್​ ಅಲಿಯಾಸ್​ ಅಬು ಹುರೈರಾ ಮತ್ತು ಇಬ್ಬರು ಸ್ಥಳೀಯ ಭಯೋತ್ಪಾದಕರನ್ನು ಹತ್ಯೆಗೈದಿದ್ದಾಗಿ ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಲಷ್ಕರ್​ ಇ ತೊಯ್ಬಾ ಕಮಾಂಡರ್ ಸತ್ತಿದ್ದಕ್ಕೆ ನಿಜಕ್ಕೂ ರಕ್ಷಣಾ ಪಡೆಗಳಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಕಾಶ್ಮೀರ ವಲಯದ ಐಜಿಪಿ ಟ್ವೀಟ್ ಮಾಡಿದ್ದಾರೆ.

ಉಗ್ರರು ಅಡಗಿದ್ದಾರೆಂಬ ಮಾಹಿತಿ ಬಂದ ತಕ್ಷಣ ಅವರನ್ನು ಹುಡುಕಿ ಬಂಧಿಸಲು ನಾವು ಹೋಗಿದ್ದು. ಆದರೆ ಅಡಗಿದ್ದ ಉಗ್ರರು ಒಂದೇ ಸಮ ನಮ್ಮ ಮೇಲೆ ದಾಳಿ ಮಾಡಲು ಶುರು ಮಾಡಿದರು. ಅನಿವಾರ್ಯವಾಗಿ ನಾವೂ ಅದಕ್ಕೆ ಪ್ರತಿಕ್ರಿಯೆ ನೀಡಬೇಕಾಯಿತು. ಅದು ಎನ್​ಕೌಂಟರ್​ಗೆ ತಿರುಗಿತು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ ಚಂದ್ರನಿಂದ ಭೂಮಿಗೆ ಕಾದಿದೆ ಕಂಟಕ: ವಿಜ್ಞಾನಿಗಳಿಂದ ಎಚ್ಚರಿಕೆ

LeT commander 2 militants killed By encounter In Pulwama

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!