AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Encounter: ಪುಲ್ವಾಮಾದಲ್ಲಿ ಲಷ್ಕರ್​ ಇ ತೊಯ್ಬಾದ ಕಮಾಂಡರ್​ ಸೇರಿ ಮೂವರು ಉಗ್ರರ ಹತ್ಯೆ

ಉಗ್ರರು ಅಡಗಿದ್ದಾರೆಂಬ ಮಾಹಿತಿ ಬಂದ ತಕ್ಷಣ ಅವರನ್ನು ಹುಡುಕಿ ಬಂಧಿಸಲು ನಾವು ಹೋಗಿದ್ದು. ಆದರೆ ಅಡಗಿದ್ದ ಉಗ್ರರು ಒಂದೇ ಸಮ ನಮ್ಮ ಮೇಲೆ ದಾಳಿ ಮಾಡಲು ಶುರು ಮಾಡಿದರು ಎಂದು ಕಾಶ್ಮೀರ ವಲಯದ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Pulwama Encounter: ಪುಲ್ವಾಮಾದಲ್ಲಿ ಲಷ್ಕರ್​ ಇ ತೊಯ್ಬಾದ ಕಮಾಂಡರ್​ ಸೇರಿ ಮೂವರು ಉಗ್ರರ ಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 14, 2021 | 9:42 AM

Share

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾಗಿ ಕಾಶ್ಮೀರ ವಲಯದ ಪೊಲೀಸರು ಇಂದು ಬೆಳಗ್ಗೆ ಮಾಹಿತಿ ನೀಡಿದ್ದಾರೆ. ಬುಧವಾರ ಮುಂಜಾನೆಯಿಂದಲೂ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಗುಂಡಿನಚಕಮಕಿ ನಡೆಯುತ್ತಿತ್ತು. ಅಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಸ್ಥಳವನ್ನು ಸುತ್ತುವರಿದಿದ್ದರು. ತಮ್ಮನ್ನು ಸೆರೆ ಹಿಡಿಯಲು ಬಂದ ಪೊಲೀಸ್​ ಸಿಬ್ಬಂದಿ ಮೇಲೆ ಭಯೋತ್ಪಾದಕರೂ ಗುಂಡಿನ ದಾಳಿ ನಡೆಸಿದ್ದರು.

ಪಾಕಿಸ್ತಾನದ ಲಷ್ಕರ್​ ಇ ತೊಯ್ಬಾ ಉಗ್ರಸಂಘಟನೆಯ ಕಮಾಂಡರ್​ ಐಜಾಜ್​ ಅಲಿಯಾಸ್​ ಅಬು ಹುರೈರಾ ಮತ್ತು ಇಬ್ಬರು ಸ್ಥಳೀಯ ಭಯೋತ್ಪಾದಕರನ್ನು ಹತ್ಯೆಗೈದಿದ್ದಾಗಿ ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಲಷ್ಕರ್​ ಇ ತೊಯ್ಬಾ ಕಮಾಂಡರ್ ಸತ್ತಿದ್ದಕ್ಕೆ ನಿಜಕ್ಕೂ ರಕ್ಷಣಾ ಪಡೆಗಳಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಕಾಶ್ಮೀರ ವಲಯದ ಐಜಿಪಿ ಟ್ವೀಟ್ ಮಾಡಿದ್ದಾರೆ.

ಉಗ್ರರು ಅಡಗಿದ್ದಾರೆಂಬ ಮಾಹಿತಿ ಬಂದ ತಕ್ಷಣ ಅವರನ್ನು ಹುಡುಕಿ ಬಂಧಿಸಲು ನಾವು ಹೋಗಿದ್ದು. ಆದರೆ ಅಡಗಿದ್ದ ಉಗ್ರರು ಒಂದೇ ಸಮ ನಮ್ಮ ಮೇಲೆ ದಾಳಿ ಮಾಡಲು ಶುರು ಮಾಡಿದರು. ಅನಿವಾರ್ಯವಾಗಿ ನಾವೂ ಅದಕ್ಕೆ ಪ್ರತಿಕ್ರಿಯೆ ನೀಡಬೇಕಾಯಿತು. ಅದು ಎನ್​ಕೌಂಟರ್​ಗೆ ತಿರುಗಿತು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ ಚಂದ್ರನಿಂದ ಭೂಮಿಗೆ ಕಾದಿದೆ ಕಂಟಕ: ವಿಜ್ಞಾನಿಗಳಿಂದ ಎಚ್ಚರಿಕೆ

LeT commander 2 militants killed By encounter In Pulwama

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ