AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ

ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ
ಎನ್​ಕೌಂಟರ್ ನಡೆಯುತ್ತಿರುವ ಸ್ಥಳ
TV9 Web
| Edited By: |

Updated on:Apr 09, 2022 | 9:19 AM

Share

ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಸಿರ್ಹಾಮಾ ಎಂಬ ಹಳ್ಳಿಯಲ್ಲಿ ಲಷ್ಕರ್ ಇ ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಕಮಾಂಡರ್​​ನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಮೃತ ಉಗ್ರನ ಹೆಸರು ನಿಸಾರ್​ ದಾರ್​ ಎಂಬುದಾಗಿ ಜಮ್ಮು-ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ದಾರೆ. ಸಿರ್ಹಾಮಾದಲ್ಲಿ ಇನ್ನೂ ಕೂಡ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯ ಅನಂತ್​ನಾಗ್​ ಜಿಲ್ಲೆಯ ಹಲವು ಭಾಗಗಳಲ್ಲಿ ಇಂಟರ್​ನೆಟ್​ ಸಂಪರ್ಕ ಕಡಿತಗೊಳಿಸಲಾಗಿದೆ.

ಸಿರ್ಹಾಮಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯನ್ನು ಪಡೆದ ಭದ್ರತಾ ಪಡೆ ಸಿಬ್ಬಂದಿ, ಆ ಸ್ಥಳವನ್ನು ಸುತ್ತುವರಿದಿದ್ದರು. ತಾವು ಅಪಾಯದಲ್ಲಿದ್ದೇವೆ ಎಂದು ಅರಿತ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆಯೇ ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಅದಕ್ಕೆ ಪ್ರತಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ, ಲಷ್ಕರ್​ ಇ ತೊಯ್ಬಾದ ಪ್ರಮುಖ ಉಗ್ರನನ್ನೇ ಕೊಂದು ಹಾಕಿದ್ದಾರೆ. ಹಾಗೇ ಇನ್ನೊಬ್ಬಾತ ಸೆರೆ ಸಿಕ್ಕಿದ್ದಾಗಿಯೂ ಪೊಲೀಸ್ ಅಧಿಕಾರಿ ವಿಜಯ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ವಿವಿಧ ಕಡೆಗಳಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ತೀವ್ರವಾದ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು. ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಇನ್ನೊಂದೆಡೆ ಪುಲ್ವಾಮಾದ ಆವಂತಿಪೋರಾದಲ್ಲಿ ಇಬ್ಬರು ಉಗ್ರರನ್ನೂ ಹತ್ಯೆಗೈಯ್ಯಲಾಗಿತ್ತು.

ಇದನ್ನೂ ಓದಿ: Ranbir- Alia Wedding: ಕೊನೆಗೂ ಬಯಲಾಯ್ತು ಆಲಿಯಾ- ರಣಬೀರ್ ವಿವಾಹದ ದಿನಾಂಕ; ಇಲ್ಲಿದೆ ನೋಡಿ ಲೇಟೆಸ್ಟ್ ಡಿಟೇಲ್ಸ್

Published On - 9:17 am, Sat, 9 April 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ