AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ

ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ
ಎನ್​ಕೌಂಟರ್ ನಡೆಯುತ್ತಿರುವ ಸ್ಥಳ
TV9 Web
| Edited By: |

Updated on:Apr 09, 2022 | 9:19 AM

Share

ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಸಿರ್ಹಾಮಾ ಎಂಬ ಹಳ್ಳಿಯಲ್ಲಿ ಲಷ್ಕರ್ ಇ ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಕಮಾಂಡರ್​​ನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಮೃತ ಉಗ್ರನ ಹೆಸರು ನಿಸಾರ್​ ದಾರ್​ ಎಂಬುದಾಗಿ ಜಮ್ಮು-ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ದಾರೆ. ಸಿರ್ಹಾಮಾದಲ್ಲಿ ಇನ್ನೂ ಕೂಡ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯ ಅನಂತ್​ನಾಗ್​ ಜಿಲ್ಲೆಯ ಹಲವು ಭಾಗಗಳಲ್ಲಿ ಇಂಟರ್​ನೆಟ್​ ಸಂಪರ್ಕ ಕಡಿತಗೊಳಿಸಲಾಗಿದೆ.

ಸಿರ್ಹಾಮಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯನ್ನು ಪಡೆದ ಭದ್ರತಾ ಪಡೆ ಸಿಬ್ಬಂದಿ, ಆ ಸ್ಥಳವನ್ನು ಸುತ್ತುವರಿದಿದ್ದರು. ತಾವು ಅಪಾಯದಲ್ಲಿದ್ದೇವೆ ಎಂದು ಅರಿತ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆಯೇ ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಅದಕ್ಕೆ ಪ್ರತಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ, ಲಷ್ಕರ್​ ಇ ತೊಯ್ಬಾದ ಪ್ರಮುಖ ಉಗ್ರನನ್ನೇ ಕೊಂದು ಹಾಕಿದ್ದಾರೆ. ಹಾಗೇ ಇನ್ನೊಬ್ಬಾತ ಸೆರೆ ಸಿಕ್ಕಿದ್ದಾಗಿಯೂ ಪೊಲೀಸ್ ಅಧಿಕಾರಿ ವಿಜಯ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ವಿವಿಧ ಕಡೆಗಳಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ತೀವ್ರವಾದ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು. ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಇನ್ನೊಂದೆಡೆ ಪುಲ್ವಾಮಾದ ಆವಂತಿಪೋರಾದಲ್ಲಿ ಇಬ್ಬರು ಉಗ್ರರನ್ನೂ ಹತ್ಯೆಗೈಯ್ಯಲಾಗಿತ್ತು.

ಇದನ್ನೂ ಓದಿ: Ranbir- Alia Wedding: ಕೊನೆಗೂ ಬಯಲಾಯ್ತು ಆಲಿಯಾ- ರಣಬೀರ್ ವಿವಾಹದ ದಿನಾಂಕ; ಇಲ್ಲಿದೆ ನೋಡಿ ಲೇಟೆಸ್ಟ್ ಡಿಟೇಲ್ಸ್

Published On - 9:17 am, Sat, 9 April 22

Follow Us
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ