AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ

ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ
ಎನ್​ಕೌಂಟರ್ ನಡೆಯುತ್ತಿರುವ ಸ್ಥಳ
TV9 Web
| Edited By: |

Updated on:Apr 09, 2022 | 9:19 AM

Share

ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಸಿರ್ಹಾಮಾ ಎಂಬ ಹಳ್ಳಿಯಲ್ಲಿ ಲಷ್ಕರ್ ಇ ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಕಮಾಂಡರ್​​ನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಮೃತ ಉಗ್ರನ ಹೆಸರು ನಿಸಾರ್​ ದಾರ್​ ಎಂಬುದಾಗಿ ಜಮ್ಮು-ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ದಾರೆ. ಸಿರ್ಹಾಮಾದಲ್ಲಿ ಇನ್ನೂ ಕೂಡ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯ ಅನಂತ್​ನಾಗ್​ ಜಿಲ್ಲೆಯ ಹಲವು ಭಾಗಗಳಲ್ಲಿ ಇಂಟರ್​ನೆಟ್​ ಸಂಪರ್ಕ ಕಡಿತಗೊಳಿಸಲಾಗಿದೆ.

ಸಿರ್ಹಾಮಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯನ್ನು ಪಡೆದ ಭದ್ರತಾ ಪಡೆ ಸಿಬ್ಬಂದಿ, ಆ ಸ್ಥಳವನ್ನು ಸುತ್ತುವರಿದಿದ್ದರು. ತಾವು ಅಪಾಯದಲ್ಲಿದ್ದೇವೆ ಎಂದು ಅರಿತ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆಯೇ ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಅದಕ್ಕೆ ಪ್ರತಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ, ಲಷ್ಕರ್​ ಇ ತೊಯ್ಬಾದ ಪ್ರಮುಖ ಉಗ್ರನನ್ನೇ ಕೊಂದು ಹಾಕಿದ್ದಾರೆ. ಹಾಗೇ ಇನ್ನೊಬ್ಬಾತ ಸೆರೆ ಸಿಕ್ಕಿದ್ದಾಗಿಯೂ ಪೊಲೀಸ್ ಅಧಿಕಾರಿ ವಿಜಯ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ವಿವಿಧ ಕಡೆಗಳಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ತೀವ್ರವಾದ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು. ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಇನ್ನೊಂದೆಡೆ ಪುಲ್ವಾಮಾದ ಆವಂತಿಪೋರಾದಲ್ಲಿ ಇಬ್ಬರು ಉಗ್ರರನ್ನೂ ಹತ್ಯೆಗೈಯ್ಯಲಾಗಿತ್ತು.

ಇದನ್ನೂ ಓದಿ: Ranbir- Alia Wedding: ಕೊನೆಗೂ ಬಯಲಾಯ್ತು ಆಲಿಯಾ- ರಣಬೀರ್ ವಿವಾಹದ ದಿನಾಂಕ; ಇಲ್ಲಿದೆ ನೋಡಿ ಲೇಟೆಸ್ಟ್ ಡಿಟೇಲ್ಸ್

Published On - 9:17 am, Sat, 9 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ