AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ

ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ
ಎನ್​ಕೌಂಟರ್ ನಡೆಯುತ್ತಿರುವ ಸ್ಥಳ
Follow us
TV9 Web
| Updated By: Lakshmi Hegde

Updated on:Apr 09, 2022 | 9:19 AM

ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಸಿರ್ಹಾಮಾ ಎಂಬ ಹಳ್ಳಿಯಲ್ಲಿ ಲಷ್ಕರ್ ಇ ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಕಮಾಂಡರ್​​ನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಮೃತ ಉಗ್ರನ ಹೆಸರು ನಿಸಾರ್​ ದಾರ್​ ಎಂಬುದಾಗಿ ಜಮ್ಮು-ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ದಾರೆ. ಸಿರ್ಹಾಮಾದಲ್ಲಿ ಇನ್ನೂ ಕೂಡ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯ ಅನಂತ್​ನಾಗ್​ ಜಿಲ್ಲೆಯ ಹಲವು ಭಾಗಗಳಲ್ಲಿ ಇಂಟರ್​ನೆಟ್​ ಸಂಪರ್ಕ ಕಡಿತಗೊಳಿಸಲಾಗಿದೆ.

ಸಿರ್ಹಾಮಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯನ್ನು ಪಡೆದ ಭದ್ರತಾ ಪಡೆ ಸಿಬ್ಬಂದಿ, ಆ ಸ್ಥಳವನ್ನು ಸುತ್ತುವರಿದಿದ್ದರು. ತಾವು ಅಪಾಯದಲ್ಲಿದ್ದೇವೆ ಎಂದು ಅರಿತ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆಯೇ ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಅದಕ್ಕೆ ಪ್ರತಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ, ಲಷ್ಕರ್​ ಇ ತೊಯ್ಬಾದ ಪ್ರಮುಖ ಉಗ್ರನನ್ನೇ ಕೊಂದು ಹಾಕಿದ್ದಾರೆ. ಹಾಗೇ ಇನ್ನೊಬ್ಬಾತ ಸೆರೆ ಸಿಕ್ಕಿದ್ದಾಗಿಯೂ ಪೊಲೀಸ್ ಅಧಿಕಾರಿ ವಿಜಯ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ವಿವಿಧ ಕಡೆಗಳಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ತೀವ್ರವಾದ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು. ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಇನ್ನೊಂದೆಡೆ ಪುಲ್ವಾಮಾದ ಆವಂತಿಪೋರಾದಲ್ಲಿ ಇಬ್ಬರು ಉಗ್ರರನ್ನೂ ಹತ್ಯೆಗೈಯ್ಯಲಾಗಿತ್ತು.

ಇದನ್ನೂ ಓದಿ: Ranbir- Alia Wedding: ಕೊನೆಗೂ ಬಯಲಾಯ್ತು ಆಲಿಯಾ- ರಣಬೀರ್ ವಿವಾಹದ ದಿನಾಂಕ; ಇಲ್ಲಿದೆ ನೋಡಿ ಲೇಟೆಸ್ಟ್ ಡಿಟೇಲ್ಸ್

Published On - 9:17 am, Sat, 9 April 22

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ