AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ

ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ
ಎನ್​ಕೌಂಟರ್ ನಡೆಯುತ್ತಿರುವ ಸ್ಥಳ
TV9 Web
| Updated By: Lakshmi Hegde|

Updated on:Apr 09, 2022 | 9:19 AM

Share

ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಸಿರ್ಹಾಮಾ ಎಂಬ ಹಳ್ಳಿಯಲ್ಲಿ ಲಷ್ಕರ್ ಇ ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಕಮಾಂಡರ್​​ನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಮೃತ ಉಗ್ರನ ಹೆಸರು ನಿಸಾರ್​ ದಾರ್​ ಎಂಬುದಾಗಿ ಜಮ್ಮು-ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ದಾರೆ. ಸಿರ್ಹಾಮಾದಲ್ಲಿ ಇನ್ನೂ ಕೂಡ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯ ಅನಂತ್​ನಾಗ್​ ಜಿಲ್ಲೆಯ ಹಲವು ಭಾಗಗಳಲ್ಲಿ ಇಂಟರ್​ನೆಟ್​ ಸಂಪರ್ಕ ಕಡಿತಗೊಳಿಸಲಾಗಿದೆ.

ಸಿರ್ಹಾಮಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯನ್ನು ಪಡೆದ ಭದ್ರತಾ ಪಡೆ ಸಿಬ್ಬಂದಿ, ಆ ಸ್ಥಳವನ್ನು ಸುತ್ತುವರಿದಿದ್ದರು. ತಾವು ಅಪಾಯದಲ್ಲಿದ್ದೇವೆ ಎಂದು ಅರಿತ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆಯೇ ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಅದಕ್ಕೆ ಪ್ರತಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ, ಲಷ್ಕರ್​ ಇ ತೊಯ್ಬಾದ ಪ್ರಮುಖ ಉಗ್ರನನ್ನೇ ಕೊಂದು ಹಾಕಿದ್ದಾರೆ. ಹಾಗೇ ಇನ್ನೊಬ್ಬಾತ ಸೆರೆ ಸಿಕ್ಕಿದ್ದಾಗಿಯೂ ಪೊಲೀಸ್ ಅಧಿಕಾರಿ ವಿಜಯ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ವಿವಿಧ ಕಡೆಗಳಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ತೀವ್ರವಾದ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು. ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಇನ್ನೊಂದೆಡೆ ಪುಲ್ವಾಮಾದ ಆವಂತಿಪೋರಾದಲ್ಲಿ ಇಬ್ಬರು ಉಗ್ರರನ್ನೂ ಹತ್ಯೆಗೈಯ್ಯಲಾಗಿತ್ತು.

ಇದನ್ನೂ ಓದಿ: Ranbir- Alia Wedding: ಕೊನೆಗೂ ಬಯಲಾಯ್ತು ಆಲಿಯಾ- ರಣಬೀರ್ ವಿವಾಹದ ದಿನಾಂಕ; ಇಲ್ಲಿದೆ ನೋಡಿ ಲೇಟೆಸ್ಟ್ ಡಿಟೇಲ್ಸ್

Published On - 9:17 am, Sat, 9 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?