AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ

ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು.

ಅನಂತ್​ನಾಗ್​ನಲ್ಲಿ ಲಷ್ಕರ್ ಇ ತೊಯ್ಬಾದ ಕಮಾಂಡರ್​​ನನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ: ಇಂಟರ್​ನೆಟ್​ ಸ್ಥಗಿತ
ಎನ್​ಕೌಂಟರ್ ನಡೆಯುತ್ತಿರುವ ಸ್ಥಳ
TV9 Web
| Edited By: |

Updated on:Apr 09, 2022 | 9:19 AM

Share

ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಸಿರ್ಹಾಮಾ ಎಂಬ ಹಳ್ಳಿಯಲ್ಲಿ ಲಷ್ಕರ್ ಇ ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಕಮಾಂಡರ್​​ನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಮೃತ ಉಗ್ರನ ಹೆಸರು ನಿಸಾರ್​ ದಾರ್​ ಎಂಬುದಾಗಿ ಜಮ್ಮು-ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ದಾರೆ. ಸಿರ್ಹಾಮಾದಲ್ಲಿ ಇನ್ನೂ ಕೂಡ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯ ಅನಂತ್​ನಾಗ್​ ಜಿಲ್ಲೆಯ ಹಲವು ಭಾಗಗಳಲ್ಲಿ ಇಂಟರ್​ನೆಟ್​ ಸಂಪರ್ಕ ಕಡಿತಗೊಳಿಸಲಾಗಿದೆ.

ಸಿರ್ಹಾಮಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯನ್ನು ಪಡೆದ ಭದ್ರತಾ ಪಡೆ ಸಿಬ್ಬಂದಿ, ಆ ಸ್ಥಳವನ್ನು ಸುತ್ತುವರಿದಿದ್ದರು. ತಾವು ಅಪಾಯದಲ್ಲಿದ್ದೇವೆ ಎಂದು ಅರಿತ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆಯೇ ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಅದಕ್ಕೆ ಪ್ರತಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ, ಲಷ್ಕರ್​ ಇ ತೊಯ್ಬಾದ ಪ್ರಮುಖ ಉಗ್ರನನ್ನೇ ಕೊಂದು ಹಾಕಿದ್ದಾರೆ. ಹಾಗೇ ಇನ್ನೊಬ್ಬಾತ ಸೆರೆ ಸಿಕ್ಕಿದ್ದಾಗಿಯೂ ಪೊಲೀಸ್ ಅಧಿಕಾರಿ ವಿಜಯ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ವಿವಿಧ ಕಡೆಗಳಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ತೀವ್ರವಾದ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್​ಕೌಂಟರ್​ ನಡೆದಿತ್ತು. ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಇನ್ನೊಂದೆಡೆ ಪುಲ್ವಾಮಾದ ಆವಂತಿಪೋರಾದಲ್ಲಿ ಇಬ್ಬರು ಉಗ್ರರನ್ನೂ ಹತ್ಯೆಗೈಯ್ಯಲಾಗಿತ್ತು.

ಇದನ್ನೂ ಓದಿ: Ranbir- Alia Wedding: ಕೊನೆಗೂ ಬಯಲಾಯ್ತು ಆಲಿಯಾ- ರಣಬೀರ್ ವಿವಾಹದ ದಿನಾಂಕ; ಇಲ್ಲಿದೆ ನೋಡಿ ಲೇಟೆಸ್ಟ್ ಡಿಟೇಲ್ಸ್

Published On - 9:17 am, Sat, 9 April 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ