AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಂದರ್ಶನಕ್ಕಾಗಿ 45 ಗಂಟೆಗಳ ಕಾಲ ಉಪವಾಸ ಮಾಡಿದ ಲೆಕ್ಸ್ ಫ್ರೀಡ್​​ಮ್ಯಾನ್

ಪ್ರಧಾನಿ ನರೇಂದ್ರ ಮೋದಿ ಅವರು ಸಂದರ್ಶನಕ್ಕಾಗಿ ಅಮೆರಿಕನ್ ಪೋಡ್​ಕ್ಯಾಸ್ಟರ್ ಹಾಗೂ ಸಂಶೋಧಕ ವಿಜ್ಞಾನಿ ಲೆಕ್ಸ್ ಫ್ರೀಡ್​​ಮ್ಯಾನ್ 45 ಗಂಟೆ ಅಂದರೆ ಎರಡು ದಿನ ನೀರು ಸೇವಿಸುವುದರ ಮೂಲಕ ಉಪವಾಸ ಮಾಡಿರುವುದಾಗಿ ಹೇಳಿದ್ದಾರೆ. ಇದು ಪ್ರಧಾನಿ ಮೋದಿ ಅವರನ್ನು ಅಚ್ಚರಿಗೊಳಿಸಿದೆ. ಇದಕ್ಕೆ ಪ್ರತಿಯಾಗಿ ಮೋದಿ ಲೆಕ್ಸ್ ಫ್ರೀಡ್​​ಮ್ಯಾನ್​ಗೆ ಕೃತಜ್ಞತೆ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸಂದರ್ಶನಕ್ಕಾಗಿ 45 ಗಂಟೆಗಳ ಕಾಲ ಉಪವಾಸ ಮಾಡಿದ ಲೆಕ್ಸ್ ಫ್ರೀಡ್​​ಮ್ಯಾನ್
ಪ್ರಧಾನಿ ಮೋದಿ ಸಂದರ್ಶನಕ್ಕಾಗಿ 45 ಗಂಟೆಗಳ ಕಾಲ ಉಪವಾಸ ಮಾಡಿದ ಲೆಕ್ಸ್ ಫ್ರೀಡ್​​ಮ್ಯಾನ್
ಗಂಗಾಧರ​ ಬ. ಸಾಬೋಜಿ
|

Updated on: Mar 16, 2025 | 9:23 PM

Share

ನವದೆಹಲಿ, ಮಾರ್ಚ್ 16: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಅಮೆರಿಕನ್ ಪೋಡ್​​ಕ್ಯಾಸ್ಟರ್ ಲೆಕ್ಸ್ ಫ್ರೀಡ್​​ಮ್ಯಾನ್ (Lex Fridman)​ ಮೂರು ಗಂಟೆ ಹದಿನೇಳು ನಿಮಿಷಗಳ ಸುದೀರ್ಘ ಸಂದರ್ಶನ ಮಾಡಿದ್ದಾರೆ. ಮೊದಲಿಗೆ ಮಾತು ಆರಂಭಿಸಿದ ಲೆಕ್ಸ್ ಫ್ರೀಡ್​​ಮ್ಯಾನ್, ಈ ಒಂದು ಸಂದರ್ಶನಕ್ಕಾಗಿ ಸುಮಾರು 45 ಗಂಟೆಗಳು ಅಂದರೆ ಎರಡು ದಿನ ಕೇವಲ ನೀರು ಸೇವಿಸುವುದರ ಮೂಲಕ ಉಪವಾಸ ಮಾಡಿರುವುದಾಗಿ ಹೇಳಿದ್ದಾರೆ. ಇದು ಪ್ರಧಾನಿ ಮೋದಿ ಅವರ ಅಚ್ಚರಿಗೂ ಕಾರಣವಾಗಿದೆ. ನೀವು ನನ್ನ ಮೇಲಿನ ಗೌರವಾರ್ಥವಾಗಿ ಉಪವಾಸ ಮಾಡುತ್ತಿದ್ದೀರಿ ಅನಿಸುತ್ತದೆ ಎಂದು ಮೋದಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಉಪವಾಸದ ಬಗ್ಗೆ ಪ್ರಧಾನಿ ಮೋದಿ ಮಾತು

ಈ ವೇಳೆ ಉಪವಾಸದ ಬಗ್ಗೆ ಪ್ರಧಾನಿ ಮೋದಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಇಂದ್ರಿಯಗಳನ್ನು ಚುರುಕುಗೊಳಿಸುವುದು, ಮಾನಸಿಕ ಸ್ಥಿರತೆ ಹೆಚ್ಚಿಸುವುದು ಮತ್ತು ಶಿಸ್ತನ್ನು ಬೆಳೆಸುವಲ್ಲಿ ಬಹಳ ಪ್ರಯೋಜವಾಗಿದೆ. ಉಪವಾಸವು ಕೇವಲ ಆಹಾರವನ್ನು ತ್ಯಜಿಸುವುದಕ್ಕಿಂತ ವೈಜ್ಞಾನಿಕ ಪ್ರಕ್ರಿಯೆಯಾಗಿದೆ. ಸಾಂಪ್ರದಾಯಿಕ ಮತ್ತು ಆಯುರ್ವೇದ ಪದ್ಧತಿಗಳೊಂದಿಗೆ ಆಳವಾಗಿ ಸಂಪರ್ಕ ಹೊಂದಿದೆ ಎಂದು ವಿವರಿಸಿದರು.

ಇದನ್ನೂ ಓದಿ: ತಮ್ಮ ಜೀವನದಲ್ಲಿ ಆರೆಸ್ಸೆಸ್, ಸ್ವಾಮಿ ವಿವೇಕಾನಂದ, ಗಾಂಧೀಜಿಯ ಪ್ರಭಾವ ಹೇಗೆ? ಪೋಡ್​ಕ್ಯಾಸ್ಟ್​​ನಲ್ಲಿ ಕುತೂಹಲಕಾರಿ ವಿಚಾರ ಬಿಚ್ಚಿಟ್ಟ ನರೇಂದ್ರ ಮೋದಿ

ದೇಹದ ನಿರ್ವಿಶೀಕರಣಕ್ಕೆ ಸಹಾಯ ಮಾಡಲು ಉಪವಾಸದ ಮೊದಲು ಅವರು ಚೆನ್ನಾಗಿ ಹೈಡ್ರೇಟ್ ಮಾಡುತ್ತಾರೆ. ಆಲಸ್ಯ ಅನುಭವಿಸುವ ಬದಲು, ಉಪವಾಸವು ಅವರನ್ನು ಹೆಚ್ಚು ಶಕ್ತಿಯುತವಾಗಿಸುತ್ತದೆ ಮತ್ತು ಇನ್ನಷ್ಟು ಕಠಿಣ ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಲೆಕ್ಸ್ ಫ್ರೀಡ್​​ಮ್ಯಾನ್ ಪೋಡ್​​ಕ್ಯಾಸ್ಟ್​ನಲ್ಲಿ ಪ್ರಧಾನಿ ಮೋದಿ ಅವರು, ತಮ್ಮ ರಾಜಕೀಯ ಜೀವನ, ಗುಜರಾತ್​ ಅಭಿವೃದ್ಧಿ, ಗಲಭೆಗಳು ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ತಮ್ಮ ಬಾಲ್ಯದ ಘಟನೆಗಳನ್ನು ಕೂಡ ಹಂಚಿಕೊಂಡಿದ್ದಾರೆ.

ತಮ್ಮ ಬಾಲ್ಯದ ಬುತ್ತಿ ಬಿಚ್ಚಿಟ್ಟ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ತಮ್ಮ ಮುದ್ದಾದ ಬಾಲ್ಯವನ್ನು ನೆನಪಿಸಿಕೊಂಡಿದ್ದು, ಬಡತನದಲ್ಲಿ ಬೆಳೆದರೂ ಅದರ ಭಾರವನ್ನು ಅವರು ಎಂದಿಗೂ ಅನುಭವಿಸಲಿಲ್ಲ. ಕಷ್ಟಗಳ ನಡುವೆಯೂ ಎಂದಿಗೂ ವಿಚಲಿತರಾಗಲಿಲ್ಲ. ತಮ್ಮ ಚಿಕ್ಕಪ್ಪ ಒಮ್ಮೆ ತಮಗೆ ಬಿಳಿ ಕ್ಯಾನ್ವಾಸ್ ಬೂಟುಗಳನ್ನು ಉಡುಗೊರೆಯಾಗಿ ನೀಡಿದ್ದರು ಎಂದರು.

ಇದನ್ನೂ ಓದಿ: ಲೆಕ್ಸ್ ಫ್ರೀಡ್​ಮ್ಯಾನ್ ಪಾಡ್‌ಕ್ಯಾಸ್ಟ್‌ನಲ್ಲಿ ಗೋಧ್ರಾ ದುರಂತದ ಅಸಲಿಯತ್ತು ಬಿಚ್ಚಿಟ್ಟ ಪ್ರಧಾನಿ ಮೋದಿ

ಅದನ್ನು ಶಾಲೆಯಲ್ಲಿ ಬಿಸಾಡಿದ ಸೀಮೆಸುಣ್ಣವನ್ನು ಬಳಸಿ ಪಾಲಿಶ್ ಮಾಡುತ್ತಿದ್ದೆ. ಜೀವನದ ಪ್ರತಿಯೊಂದು ಹಂತವನ್ನು ಕೃತಜ್ಞತೆಯಿಂದ ಸ್ವೀಕರಿಸಿದ್ದೇನೆ ಮತ್ತು ಬಡತನವನ್ನು ಎಂದಿಗೂ ಹೋರಾಟವೆಂದು ನೋಡಿಲ್ಲ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ