AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ 400 ಖಾಸಗಿ ವ್ಯಕ್ತಿಗಳನ್ನು ಸೇವೆಯಿಂದ ವಜಾ ಮಾಡಿದ ಎಲ್​​ಜಿ

ನೇಮಕಾತಿ ಮಾಡುವಾಗ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಚಿಸಿದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಡ್ಡಾಯ ಮೀಸಲಾತಿ ನೀತಿಯನ್ನು ಅನುಸರಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ 400 ಖಾಸಗಿ ವ್ಯಕ್ತಿಗಳನ್ನು ಸೇವೆಯಿಂದ ವಜಾ ಮಾಡಿದ ಎಲ್​​ಜಿ
ವಿಕೆ ಸಕ್ಸೆನಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 03, 2023 | 8:31 PM

Share

ದೆಹಲಿಯ (Delhi) ವಿವಿಧ ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸೊಸೈಟಿಗಳು ಮತ್ತು ಪಿಎಸ್‌ಯುಗಳಲ್ಲಿ ತಜ್ಞರಾಗಿ ತೊಡಗಿಸಿಕೊಂಡಿರುವ ಸುಮಾರು 400 ಖಾಸಗಿ ವ್ಯಕ್ತಿಗಳ ಸೇವೆಯನ್ನು ವಜಾಗೊಳಿಸುವಂತೆ ಲೆಫ್ಟಿನೆಂಟ್ ಗವರ್ನರ್ (Lieutenant governor) ವಿಕೆ ಸಕ್ಸೇನಾ (VK Saxena) ಅವರು ಸೋಮವಾರ ಆದೇಶ ನೀಡಿದ್ದಾರೆ. ಪ್ರಾಧಿಕಾರದ ಕಡ್ಡಾಯ ಅನುಮೋದನೆಗಳಿಲ್ಲದೆ ಪಾರದರ್ಶಕವಲ್ಲದ ರೀತಿಯಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ನೇಮಕಾತಿ ಮಾಡುವಾಗ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಚಿಸಿದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಡ್ಡಾಯ ಮೀಸಲಾತಿ ನೀತಿಯನ್ನು ಅನುಸರಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿ ಸರ್ಕಾರವು ಫೆಲೋಗಳು/ಅಸೋಸಿಯೇಟ್ ಫೆಲೋಗಳು/ಸಲಹೆಗಾರರು/ಉಪ ಸಲಹೆಗಾರರು/ತಜ್ಞರು/ಹಿರಿಯ ಸಂಶೋಧನಾ ಅಧಿಕಾರಿಗಳು/ಸಮಾಲೋಚಕರು ಇತ್ಯಾದಿಯಾಗಿ ತೊಡಗಿಸಿಕೊಂಡಿರುವ ಸುಮಾರು 400 ಖಾಸಗಿ ವ್ಯಕ್ತಿಗಳ ಸೇವೆಗಳನ್ನು ತಕ್ಷಣವೇ ವಜಾಗೊಳಿಸುವ ಸೇವಾ ಇಲಾಖೆಯ ಪ್ರಸ್ತಾವನೆಗೆ ದೆಹಲಿಯ ಎಲ್ ಜಿ, ವಿಕೆ ಸಕ್ಸೇನಾ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಎಲ್ ಜಿ ಕಚೇರಿ ಹೇಳಿಕೆ ತಿಳಿಸಿದೆ.

ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಲಭ್ಯವಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Mon, 3 July 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ