AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ 400 ಖಾಸಗಿ ವ್ಯಕ್ತಿಗಳನ್ನು ಸೇವೆಯಿಂದ ವಜಾ ಮಾಡಿದ ಎಲ್​​ಜಿ

ನೇಮಕಾತಿ ಮಾಡುವಾಗ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಚಿಸಿದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಡ್ಡಾಯ ಮೀಸಲಾತಿ ನೀತಿಯನ್ನು ಅನುಸರಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ 400 ಖಾಸಗಿ ವ್ಯಕ್ತಿಗಳನ್ನು ಸೇವೆಯಿಂದ ವಜಾ ಮಾಡಿದ ಎಲ್​​ಜಿ
ವಿಕೆ ಸಕ್ಸೆನಾ
ರಶ್ಮಿ ಕಲ್ಲಕಟ್ಟ
|

Updated on:Jul 03, 2023 | 8:31 PM

Share

ದೆಹಲಿಯ (Delhi) ವಿವಿಧ ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸೊಸೈಟಿಗಳು ಮತ್ತು ಪಿಎಸ್‌ಯುಗಳಲ್ಲಿ ತಜ್ಞರಾಗಿ ತೊಡಗಿಸಿಕೊಂಡಿರುವ ಸುಮಾರು 400 ಖಾಸಗಿ ವ್ಯಕ್ತಿಗಳ ಸೇವೆಯನ್ನು ವಜಾಗೊಳಿಸುವಂತೆ ಲೆಫ್ಟಿನೆಂಟ್ ಗವರ್ನರ್ (Lieutenant governor) ವಿಕೆ ಸಕ್ಸೇನಾ (VK Saxena) ಅವರು ಸೋಮವಾರ ಆದೇಶ ನೀಡಿದ್ದಾರೆ. ಪ್ರಾಧಿಕಾರದ ಕಡ್ಡಾಯ ಅನುಮೋದನೆಗಳಿಲ್ಲದೆ ಪಾರದರ್ಶಕವಲ್ಲದ ರೀತಿಯಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ನೇಮಕಾತಿ ಮಾಡುವಾಗ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೂಚಿಸಿದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಕಡ್ಡಾಯ ಮೀಸಲಾತಿ ನೀತಿಯನ್ನು ಅನುಸರಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿ ಸರ್ಕಾರವು ಫೆಲೋಗಳು/ಅಸೋಸಿಯೇಟ್ ಫೆಲೋಗಳು/ಸಲಹೆಗಾರರು/ಉಪ ಸಲಹೆಗಾರರು/ತಜ್ಞರು/ಹಿರಿಯ ಸಂಶೋಧನಾ ಅಧಿಕಾರಿಗಳು/ಸಮಾಲೋಚಕರು ಇತ್ಯಾದಿಯಾಗಿ ತೊಡಗಿಸಿಕೊಂಡಿರುವ ಸುಮಾರು 400 ಖಾಸಗಿ ವ್ಯಕ್ತಿಗಳ ಸೇವೆಗಳನ್ನು ತಕ್ಷಣವೇ ವಜಾಗೊಳಿಸುವ ಸೇವಾ ಇಲಾಖೆಯ ಪ್ರಸ್ತಾವನೆಗೆ ದೆಹಲಿಯ ಎಲ್ ಜಿ, ವಿಕೆ ಸಕ್ಸೇನಾ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಎಲ್ ಜಿ ಕಚೇರಿ ಹೇಳಿಕೆ ತಿಳಿಸಿದೆ.

ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಲಭ್ಯವಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:04 pm, Mon, 3 July 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!