AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್​ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಮನೆಯಲ್ಲಿ ಕಳ್ಳತನ; ರಿವಾಲ್ವರ್​, ಸಿಸಿಟಿವಿ ಫೂಟೇಜ್​​ನ್ನೂ ಬಿಟ್ಟಿಲ್ಲ ಕಳ್ಳರು

ಸೋನಾಲಿ ಫೋಗಾಟ್​ ಹರ್ಯಾಣಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ. ಇದರೊಂದಿಗೆ ದೆಹಲಿ, ಹರ್ಯಾಣ, ಚಂಡೀಘಡ್​, ಪಂಜಾಬ್​ನ ಪರಿಶಿಷ್ಟ ಪಂಗಡ ಮೋರ್ಚಾದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದಾರೆ.

ಬಿಗ್​ಬಾಸ್​ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಮನೆಯಲ್ಲಿ ಕಳ್ಳತನ; ರಿವಾಲ್ವರ್​, ಸಿಸಿಟಿವಿ ಫೂಟೇಜ್​​ನ್ನೂ ಬಿಟ್ಟಿಲ್ಲ ಕಳ್ಳರು
ಸೋನಾಲಿ ಫೋಗಾಟ್​
Follow us
Lakshmi Hegde
|

Updated on:Feb 17, 2021 | 5:37 PM

ಹಿಸಾರ್​: ಬಿಜೆಪಿ ನಾಯಕಿ, ಬಿಗ್​ಬಾಸ್​ 14ರ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಅವರ ಹರ್ಯಾಣಾದ ಹಿಸಾರ್​ನಲ್ಲಿರುವ ​ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 10 ಲಕ್ಷ ರೂಪಾಯಿ ನಗದು, ಲೈಸೆನ್ಸ್​ ಇರುವ ರಿವಾಲ್ವರ್​, ಎಂಟು ಸಿಡಿಮದ್ದುಗಳು, ಬಂಗಾರ, ಬೆಳ್ಳಿಯ ವಸ್ತುಗಳು, ಆಭರಣ, ಬೆಳ್ಳಿ ಮಡಕೆಯನ್ನು ಕಳ್ಳರು ದೋಚಿದ್ದಾರೆಂದು ಸೋನಾಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ನಾನು ಚಂಡೀಘಡ್​ಗೆ ಹೋಗಿದ್ದೆ. ಫೆ.15ರಂದು ವಾಪಸ್ ಬರುವಷ್ಟರಲ್ಲಿ ಮನೆಯ ಬೀಗ ಮುರಿದಿತ್ತು. ಪಿಸ್ತೂಲ್​ ಸೇರಿ ಅಮೂಲ್ಯ ವಸ್ತುಗಳೆಲ್ಲ ಕಳವಾಗಿದ್ದವು ಎಂದು ತಿಳಿಸಿದ್ದಾರೆ.

ಸೋನಾಲಿ ಮನೆ ಬಳಿ ಇರುವ ಸಿಸಿಟಿವಿಯನ್ನು ಪರಿಶೀಲನೆ ಮಾಡಲಾಗಿದೆ. ಆದರೆ ಅದರಲ್ಲಿನ​ ಆದ ಡಿಜಿಟಲ್​ ವಿಡಿಯೋ ರೆಕಾರ್ಡರ್​ (DVR)ನ್ನು ಕೂಡ ಕಳ್ಳರು ಹೊತ್ತೊಯ್ದಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ಶೀಘ್ರವೇ ಕಳ್ಳರನ್ನು ಪತ್ತೆ ಹಚ್ಚುವುದಾಗಿ ಎಚ್​ಟಿಎಂ ಠಾಣಾಧಿಕಾರಿ ಸುಖ್​ಜಿತ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ವಾರದಲ್ಲಿ 3ದಿನ ಪತ್ನಿಯೊಂದಿಗಿರಿ..3ದಿನ ಗರ್ಲ್​ಫ್ರೆಂಡ್ ಜತೆಗಿರಿ, 1 ದಿನ ರಜಾ ತೆಗೆದುಕೊಳ್ಳಿ’ -ಇನ್ನೊಬ್ಬಳ ಸಂಗ ಮಾಡಿದವನ ಸಮಸ್ಯೆ ಬಗೆಹರಿಸಿದ ಪೊಲೀಸರು !

ಸೋನಾಲಿ ಫೋಗಾಟ್​ ಹರ್ಯಾಣಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ. ಇದರೊಂದಿಗೆ ದೆಹಲಿ, ಹರ್ಯಾಣ, ಚಂಡೀಘಡ್​, ಪಂಜಾಬ್​ನ ಪರಿಶಿಷ್ಟ ಪಂಗಡ ಮೋರ್ಚಾದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದಾರೆ. 2019ರಲ್ಲಿ ಅದಾಂಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಗೆಲ್ಲಲಿಲ್ಲ. ಸೋನಾಲಿ ರಾಜಕೀಯಕ್ಕೆ ಪ್ರವೇಶ ಮಾಡುವುದಕ್ಕೂ ಮೊದಲು ನಟನೆಯಲ್ಲಿ ತೊಡಗಿಕೊಂಡಿದ್ದರು.

Published On - 5:32 pm, Wed, 17 February 21

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್