AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್​ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಮನೆಯಲ್ಲಿ ಕಳ್ಳತನ; ರಿವಾಲ್ವರ್​, ಸಿಸಿಟಿವಿ ಫೂಟೇಜ್​​ನ್ನೂ ಬಿಟ್ಟಿಲ್ಲ ಕಳ್ಳರು

ಸೋನಾಲಿ ಫೋಗಾಟ್​ ಹರ್ಯಾಣಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ. ಇದರೊಂದಿಗೆ ದೆಹಲಿ, ಹರ್ಯಾಣ, ಚಂಡೀಘಡ್​, ಪಂಜಾಬ್​ನ ಪರಿಶಿಷ್ಟ ಪಂಗಡ ಮೋರ್ಚಾದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದಾರೆ.

ಬಿಗ್​ಬಾಸ್​ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಮನೆಯಲ್ಲಿ ಕಳ್ಳತನ; ರಿವಾಲ್ವರ್​, ಸಿಸಿಟಿವಿ ಫೂಟೇಜ್​​ನ್ನೂ ಬಿಟ್ಟಿಲ್ಲ ಕಳ್ಳರು
ಸೋನಾಲಿ ಫೋಗಾಟ್​
Lakshmi Hegde
|

Updated on:Feb 17, 2021 | 5:37 PM

Share

ಹಿಸಾರ್​: ಬಿಜೆಪಿ ನಾಯಕಿ, ಬಿಗ್​ಬಾಸ್​ 14ರ ಮಾಜಿ ಸ್ಪರ್ಧಿ ಸೋನಾಲಿ ಫೋಗಾಟ್ ಅವರ ಹರ್ಯಾಣಾದ ಹಿಸಾರ್​ನಲ್ಲಿರುವ ​ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 10 ಲಕ್ಷ ರೂಪಾಯಿ ನಗದು, ಲೈಸೆನ್ಸ್​ ಇರುವ ರಿವಾಲ್ವರ್​, ಎಂಟು ಸಿಡಿಮದ್ದುಗಳು, ಬಂಗಾರ, ಬೆಳ್ಳಿಯ ವಸ್ತುಗಳು, ಆಭರಣ, ಬೆಳ್ಳಿ ಮಡಕೆಯನ್ನು ಕಳ್ಳರು ದೋಚಿದ್ದಾರೆಂದು ಸೋನಾಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ನಾನು ಚಂಡೀಘಡ್​ಗೆ ಹೋಗಿದ್ದೆ. ಫೆ.15ರಂದು ವಾಪಸ್ ಬರುವಷ್ಟರಲ್ಲಿ ಮನೆಯ ಬೀಗ ಮುರಿದಿತ್ತು. ಪಿಸ್ತೂಲ್​ ಸೇರಿ ಅಮೂಲ್ಯ ವಸ್ತುಗಳೆಲ್ಲ ಕಳವಾಗಿದ್ದವು ಎಂದು ತಿಳಿಸಿದ್ದಾರೆ.

ಸೋನಾಲಿ ಮನೆ ಬಳಿ ಇರುವ ಸಿಸಿಟಿವಿಯನ್ನು ಪರಿಶೀಲನೆ ಮಾಡಲಾಗಿದೆ. ಆದರೆ ಅದರಲ್ಲಿನ​ ಆದ ಡಿಜಿಟಲ್​ ವಿಡಿಯೋ ರೆಕಾರ್ಡರ್​ (DVR)ನ್ನು ಕೂಡ ಕಳ್ಳರು ಹೊತ್ತೊಯ್ದಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ಶೀಘ್ರವೇ ಕಳ್ಳರನ್ನು ಪತ್ತೆ ಹಚ್ಚುವುದಾಗಿ ಎಚ್​ಟಿಎಂ ಠಾಣಾಧಿಕಾರಿ ಸುಖ್​ಜಿತ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ವಾರದಲ್ಲಿ 3ದಿನ ಪತ್ನಿಯೊಂದಿಗಿರಿ..3ದಿನ ಗರ್ಲ್​ಫ್ರೆಂಡ್ ಜತೆಗಿರಿ, 1 ದಿನ ರಜಾ ತೆಗೆದುಕೊಳ್ಳಿ’ -ಇನ್ನೊಬ್ಬಳ ಸಂಗ ಮಾಡಿದವನ ಸಮಸ್ಯೆ ಬಗೆಹರಿಸಿದ ಪೊಲೀಸರು !

ಸೋನಾಲಿ ಫೋಗಾಟ್​ ಹರ್ಯಾಣಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ. ಇದರೊಂದಿಗೆ ದೆಹಲಿ, ಹರ್ಯಾಣ, ಚಂಡೀಘಡ್​, ಪಂಜಾಬ್​ನ ಪರಿಶಿಷ್ಟ ಪಂಗಡ ಮೋರ್ಚಾದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದಾರೆ. 2019ರಲ್ಲಿ ಅದಾಂಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಗೆಲ್ಲಲಿಲ್ಲ. ಸೋನಾಲಿ ರಾಜಕೀಯಕ್ಕೆ ಪ್ರವೇಶ ಮಾಡುವುದಕ್ಕೂ ಮೊದಲು ನಟನೆಯಲ್ಲಿ ತೊಡಗಿಕೊಂಡಿದ್ದರು.

Published On - 5:32 pm, Wed, 17 February 21

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ