AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತಿ ದೊಡ್ಡ ಮೃಗಾಲಯ ಸ್ಥಾಪನೆಗೆ ಕೇಂದ್ರ ಸರಕಾರದ ಲೈಸೆನ್ಸ್ ಪಡೆದ ರಿಲಯನ್ಸ್

ಗುಜರಾತ್​ನ ಜಾಮ್​ನಗರದಲ್ಲಿ ವಿಶ್ವದ ಅತಿ ದೊಡ್ಡ ಮೃಗಾಲಯವನ್ನು ನಿರ್ಮಿಸಲು ರಿಲಯನ್ಸ್ ಇಂಡಸ್ಟ್ರಿ ಕೆಂದ್ರ ಸರಕಾರದಿಂದ ಪರವಾನಿಗೆಯನ್ನು ಮಡೆದಿದೆ. ಇನ್ನು 2 ವರ್ಷಗಳಲ್ಲಿ ಕಾಮಗಾರಿ ಸಂಪೂರ್ಣಗೊಳ್ಳುವುದಾಗಿ ರಿಲಯನ್ಸ್​ ತಿಳಿಸಿದೆ

ವಿಶ್ವದ ಅತಿ ದೊಡ್ಡ ಮೃಗಾಲಯ ಸ್ಥಾಪನೆಗೆ ಕೇಂದ್ರ ಸರಕಾರದ ಲೈಸೆನ್ಸ್ ಪಡೆದ ರಿಲಯನ್ಸ್
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 20, 2020 | 7:07 PM

Share

ಗಾಂಧಿನಗರ: ವಿಶ್ವದ ಅತಿದೊಡ್ಡ ಮೃಗಾಲಯವನ್ನು ನಿರ್ಮಿಸಲು ಗುಜರಾತ್​ನ ಜಾಮ್​ನಗರದಲ್ಲಿ ಕೇಂದ್ರ ಸರಕಾರದಿಂದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಪರವಾನಿಗೆ ಪಡೆದಿದೆ. ಇನ್ನು 2 ವರ್ಷಗಳಲ್ಲಿ ಮೃಗಾಲಯ ಸಿದ್ಧವಾಗಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿ ವೀಕ್ಷಿಸಲು ಅವಕಾಶ ಮಾಡಿಕೊಡುತ್ತದೆ ಎಂದು ರಿಲಯನ್ಸ್ ಅಧಿಕಾರಿ ಹೇಳಿದ್ದಾರೆ.

ಮೃಗಾಲಯದ ಸಂಪೂರ್ಣ ಜವಾಬ್ದಾರಿಯನ್ನು ರಿಲಯನ್ಸ್ ಇಂಡಸ್ಟ್ರಿ ವಹಿಸಿಕೊಂಡಿದೆ. ಕೋವಿಡ್​-19 ಸಾಂಕ್ರಾಮಿಕ ರೋಗದಿಂದಾಗಿ ಈ ಯೋಜನೆ ಕಿಂಚಿತ್ತು ವಿಳಂಬವಾಗಿದೆ. ಇನ್ನು 2 ವರ್ಷಗಳಲ್ಲಿ ಕಾಮಗಾರಿ ಸಂಪೂರ್ಣಗೊಳ್ಳುತ್ತದೆ ಎಂದು ಭಾವಿಸುತ್ತೇವೆ ಎಂದು ಕಾರ್ಪೋರೇಟ್ ವ್ಯವಹಾರ ನಿರ್ದೇಶಕ ಮತ್ತು ರಾಜ್ಯಸಭಾ ಸಂಸದ ಪರಿಮಲ್ ನಥ್ವಾನಿ ಹೇಳಿದ್ದಾರೆ.

ಶುಕ್ರವಾರ ಅಸೋಚಾಮ್ ಫೌಂಡೇಷನ್ ಸಪ್ತಾಹದ ವರ್ಚುವಲ್ ಕಾನ್ಫರೆನ್ಸ್​ನಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಕಚೇರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಕೆ ದಾಸ್, ಜಾಮ್​​ನಗರದಲ್ಲಿ ವಿಶ್ವದ ಅತಿದೊಡ್ಡ ಮೃಗಾಲಯವು ಸಿದ್ಧವಾಗಲಿದೆ ಎಂದು ತಿಳಿಸಿದ್ದಾರೆ.

ಜಾಮ್​ನಗರದ ಮೃಗಾಲಯವನ್ನು 250 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು. ಇದು ವಿಶ್ವದ ಅತಿ ದೊಡ್ಡ ಮೃಗಾಲಯ ಆಗಬೇಕಂತೇನಿಲ್ಲ. ವೈವಿಧ್ಯಮಯ ಪಕ್ಷಿಗಳು ಮತ್ತು ಪ್ರಾಣಿಗಳನ್ನು ಇದು ಒಳಗೊಂಡಿರುತ್ತದೆ ಎಂದು ಹಿರಿಯ ಅಧಿಕಾರಿಗಳು ಮೃಗಾಲಯದ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ