AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಎಸ್ಕೇಪ್

ಅತ್ಯಾಚಾರ ಹಾಗೂ ಕೊಲೆ(Murder) ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಗೋವಿಂದಚಾಮಿ, ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. 2011ರಲ್ಲಿ ಈತ ಓರ್ವ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಬೆಳಗಿನ ಜಾವ ಆತನ ಸೆಲ್​ಗೆ ನಿಯಮಿತ ತಪಾಸಣೆಗೆಂದು ಬಂದಾಗ ಆತ ಇಲ್ಲದಿರುವುದು ತಿಳಿಸುಬಂದಿದೆ.ಜೈಲು ಅಧಿಕಾರಿಗಳು ತಕ್ಷಣ ಜೈಲು ಆವರಣದಲ್ಲಿ ಮತ್ತು ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಕೇರಳ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಎಸ್ಕೇಪ್
ಅಪರಾಧಿImage Credit source: India Today
ನಯನಾ ರಾಜೀವ್
|

Updated on: Jul 25, 2025 | 10:40 AM

Share

ತಿರುವನಂತಪುರಂ, ಜುಲೈ 25: ಅತ್ಯಾಚಾರ ಹಾಗೂ ಕೊಲೆ(Murder) ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಗೋವಿಂದಚಾಮಿ, ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. 2011ರಲ್ಲಿ ಈತ ಓರ್ವ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ.

ಬೆಳಗಿನ ಜಾವ ಆತನ ಸೆಲ್​ಗೆ ನಿಯಮಿತ ತಪಾಸಣೆಗೆಂದು ಬಂದಾಗ ಆತ ಇಲ್ಲದಿರುವುದು ತಿಳಿಸುಬಂದಿದೆ.ಜೈಲು ಅಧಿಕಾರಿಗಳು ತಕ್ಷಣ ಜೈಲು ಆವರಣದಲ್ಲಿ ಮತ್ತು ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಕೈದಿ ಎಲ್ಲಿಯೂ ಪತ್ತೆಯಾಗಲಿಲ್ಲ. ಬೆಳಗ್ಗೆ 7 ಗಂಟೆಗೆ ಪರಾರಿಯಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಣ್ಣೂರು ಪಟ್ಟಣ ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಹುಡುಕಾಟ ನಡೆಯುತ್ತಿದೆ.

ಫೆಬ್ರವರಿ 1, 2011 ರಂದು ಎರ್ನಾಕುಲಂನಿಂದ ಶೋರನೂರಿಗೆ ಹೋಗುವ ಪ್ಯಾಸೆಂಜರ್ ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಶೋರ್ನೂರ್ ಬಳಿಯ ಮಂಜಕ್ಕಾಡ್‌ನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ. . ಅವನು ಹೇಗೆ ತಪ್ಪಿಸಿಕೊಂಡಿದ್ದಾನೆ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮತ್ತಷ್ಟು ಓದಿ: ತಾಯಿಗಾದ ಅವಮಾನಕ್ಕೆ 10 ವರ್ಷಗಳ ಬಳಿಕ ಕೊಲೆ ಮಾಡಿ ಸೇಡು ತೀರಿಸಿಕೊಂಡ ಮಗ

ಸಂತ್ರಸ್ತೆಯ ತಾಯಿ , ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ, ಜೈಲಿನಲ್ಲಿ ಇಷ್ಟು ದೊಡ್ಡ ಪ್ರಮಾದ ಹೇಗೆ ನಡೆಯುತ್ತೆ ಎಂದು ಪ್ರಶ್ನಿಸಿದ್ದಾರೆ.ಕಣ್ಣೂರು ಜೈಲು ತುಂಬಾ ದೊಡ್ಡದಾಗಿದೆ. ಅಲ್ಲಿಂದ ಆತ ಹೇಗೆ ಹಾರಿ ತಪ್ಪಿಸಿಕೊಳ್ಳಲು ಸಾಧ್ಯ? ಬೆಂಬಲವಿಲ್ಲದೆ ಅವನು ಅದನ್ನು ಮಾಡಲು ಸಾಧ್ಯವಿಲ್ಲ. ಅದು ಅಸಾಧ್ಯ. ಒಳಗೆ ಯಾರೋ ಅವನಿಗೆ ಸಹಾಯ ಮಾಡುತ್ತಿದ್ದಾರೆ. ಆತನನ್ನು ಹುಡುಕಲೇಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಅವರು ಜೈಲು ವ್ಯವಸ್ಥೆಯಲ್ಲಿ ಗಂಭೀರ ಲೋಪಗಳಿವೆ ಎಂದು ಆರೋಪಿಸಿದರು. ಅಪರಾಧಿ ಮಧ್ಯರಾತ್ರಿ 1 ಗಂಟೆಗೆ ಪರಾರಿಯಾಗಿದ್ದಾನೆ. ಜೈಲು ಅಧಿಕಾರಿಗಳಿಗೆ ಬೆಳಗ್ಗೆ 5 ಗಂಟೆಗೆ ಈ ವಿಷಯ ತಿಳಿಯಿತು. ಬೆಳಗ್ಗೆ 7 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಗೋಡೆಯ ಮೇಲೆ ವಿದ್ಯುತ್ ಬೇಲಿ ಹಾಕಲಾಗಿತ್ತು.

ಅವನು ಜೈಲಿನಿಂದ ಪರಾರಿಯಾಗುವಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಎಲ್ಲವೂ ನಿಗೂಢ. ಅವನು ತಪ್ಪಿಸಿಕೊಂಡಿದ್ದಾನೋ ಅಥವಾ ತಪ್ಪಿಸಿಕೊಳ್ಳಲು ಸಹಾಯ ಮಾಡಲಾಗಿತ್ತೋ? ಎಂದು ಸುರೇಂದ್ರನ್ ಕೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್