ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರ ಕಾನೂನು ಜಾರಿ: ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂ ಸರ್ಕಾರವು ಲ್ಯಾಂಡ್ ಜಿಹಾದ್ ಮತ್ತು ಲವ್ ಜಿಹಾದ್ ಅನ್ನು ತಡೆಯುವ ನಿಟ್ಟಿನಲ್ಲಿ ಎರಡು ಕಾನೂನುಗಳನ್ನು ಶೀಘ್ರ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿರುವ ಅವರು, ಚುನಾವಣೆಯ ಸಮಯದಲ್ಲಿ ಲವ್ ಜಿಹಾದ್ ಬಗ್ಗೆ ಮಾತನಾಡಿದ್ದೆವು. ಅಂತಹ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಕಾನೂನನ್ನು ತರುತ್ತೇವೆ ಎಂದಿದ್ದಾರೆ.

ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರ ಕಾನೂನು ಜಾರಿ: ಹಿಮಂತ ಬಿಸ್ವಾ ಶರ್ಮಾ
ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರ ಕಾನೂನು ಜಾರಿ: ಹಿಮಂತ ಬಿಸ್ವಾ ಶರ್ಮಾ
Follow us
|

Updated on: Aug 04, 2024 | 9:54 PM

ಗುವಾಹಟಿ, ಆಗಸ್ಟ್​ 04: ಲವ್ ಜಿಹಾದ್ (Love Jihad) ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನು ಶೀಘ್ರ ಜಾರಿಗೆ ತರಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಅಸ್ಸಾಂನಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರಲು ನಮ್ಮ ಸರ್ಕಾರ ಚಿಂತಿಸಿದೆ ಎಂದು ಹೇಳಿದ್ದಾರೆ. ಆ ಮೂಲಕ ಲವ್ ಜಿಹಾದ್ ವಿರುದ್ಧ ಉತ್ತರ ಪ್ರದೇಶ ಬಳಿಕ ಇದೀಗ ಅಸ್ಸಾಂ ಸರ್ಕಾರ ಕಾನೂನು ತರಲು ಮುಂದಾಗಿದೆ.

ಬಹುತೇಕ ಬಿಜೆಪಿ ಆಡಳಿತದಲ್ಲಿ ರಾಜ್ಯಗಳಲ್ಲಿ ಬಲವಂತದ ಮತಾಂತರದ ವಿರುದ್ಧ ಕಾನೂನುಗಳಿದ್ದರೂ, ಶಿಕ್ಷೆಯ ನಿಬಂಧನೆಗಳನ್ನು ಇನ್ನಷ್ಟು ಕಠಿಣಗೊಳಿಸಲು ಯೋಜನೆಗಳು ಜಾರಿಯಲ್ಲಿವೆ.

ಎಎನ್​ಐ ಟ್ವೀಟ್​

ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿ ಮೊದಲು ಉತ್ತರ ಪ್ರದೇಶ ಕಾನೂನು ರೂಪಿಸಿತು. ಪ್ರತಿಪಕ್ಷಗಳಿಂದ ಭಾರೀ ಟೀಕೆಗೆ ಗುರಿಯಾಗಿರುವ ಕಾನೂನುಬಾಹಿರ ಮತಾಂತರ ನಿಷೇಧ (ತಿದ್ದುಪಡಿ) ಮಸೂದೆ 2024 ಅನ್ನು ಪರಿಷ್ಕರಿಸಲು ಯೋಜಿಸಿದೆ. ಸಮಾಜವಾದಿ ಪಕ್ಷವು ಇದನ್ನು ವಿಭಜಕ ಕ್ರಮವೆಂದು ಕರೆದಿದ್ದು, ಸಮಾಜವಾದಿ ಪಕ್ಷವು ಇದನ್ನು ವಿಭಜಕ ನಡೆ ಎಂದು ಹೇಳಿದೆ.

ಇದನ್ನೂ ಓದಿ: ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ, 3 ಬೋಗಿಗಳು ಅಗ್ನಿಗಾಹುತಿ

ಲವ್ ಜಿಹಾದ್ ವಿರುದ್ಧ ಕಾನೂನಿನೊಂದಿಗೆ ಶೀಘ್ರದಲ್ಲೇ ಹೊಸ ವಸತಿ ನೀತಿಯನ್ನು ಪರಿಚಯಿಸಲಾಗುವುದು. ಆ ಮೂಲಕ ಅಸ್ಸಾಂನಲ್ಲಿ ಜನಿಸಿದವರು ಮಾತ್ರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ. ಅಲ್ಲದೆ ಮುಸ್ಲಿಂ ವ್ಯಕ್ತಿಯು ಹಿಂದೂಗಳ ಅಥವಾ ಹಿಂದೂ ವ್ಯಕ್ತಿ ಮುಸ್ಲಿಂರ ಭೂಮಿಯನ್ನು ಖರೀದಿಸಲು ಬಯಸಿದರೆ ಮೊದಲು ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ಈ ತಿಂಗಳ ಕೊನೆಯಲ್ಲಿ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಈ ಹೊಸ ಕಾನೂನುಗಳನ್ನು ತರುವ ಸಾಧ್ಯತೆ ಇದೆ ಎಂದು ಶರ್ಮಾ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ