AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ ಹಾಕಲು ಯುವಕನೊಬ್ಬ ತನ್ನ ಪ್ರೇಯಸಿ ತಂದೆಯ ಮೊಬೈಲ್ ಕದ್ದಿದ್ದ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​(Yogi Adityanath) ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಕಾನ್ಪುರದಲ್ಲಿ ಬಂಧಿಸಲಾಗಿದೆ.

ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ ಹಾಕಲು ಯುವಕನೊಬ್ಬ ತನ್ನ ಪ್ರೇಯಸಿ ತಂದೆಯ ಮೊಬೈಲ್ ಕದ್ದಿದ್ದ
ಯೋಗಿ ಆದಿತ್ಯನಾಥ್
ನಯನಾ ರಾಜೀವ್
|

Updated on: Apr 26, 2023 | 8:41 AM

Share

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​(Yogi Adityanath) ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಕಾನ್ಪುರದಲ್ಲಿ ಬಂಧಿಸಲಾಗಿದೆ. ಆರೋಪಿಯು 112ಗೆ ಸಂದೇಶ ಕಳುಹಿಸುವ ಮೂಲಕ ಕೊಲೆ ಬೆದರಿಕೆ ಹಾಕಿದ್ದರು. ಬಳಿಕ ಲಕ್ನೋದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು, ಬಳಿಕ ಕಾನ್ಪುರದಲ್ಲಿ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿದಾಗ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ತನ್ನ ಪ್ರೇಯಸಿಯನ್ನು ಮದುವೆಯಾಗಲು ಬಯಸಿದ್ದ, ಪ್ರೇಯಸಿ ತಂದೆ ಜೈಲಿಗೆ ಹೋದರೆ ತಮ್ಮ ಮದುವೆ ಸುಗಮವಾಗುತ್ತದೆ ಎಂದು ಪ್ರೇಯಸಿಯ ತಂದೆಯ ಫೋನ್ ಕದ್ದು ಅದರಿಂದ ಸಂದೇಶ ಕಳುಹಿಸಿದ್ದ ಎನ್ನುವ ವಿಚಾರ ಬಹಿರಂಗಗೊಂಡಿದೆ.

ಮತ್ತಷ್ಟು ಓದಿ: ಬಿಜೆಪಿ ಕೇಂದ್ರ ನಾಯಕರ ಪ್ರಚಾರದ ಭರಾಟೆ: ಇಂದು ರಾಜ್ಯಕ್ಕೆ ಯೋಗಿ, ರಾಜನಾಥ್​​​ ಸಿಂಗ್​​, ನಿರ್ಮಲಾ ಭೇಟಿ

ಬಾಬುಪುರದ ನಿವಾಸಿ ಅಮೀನ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 10 ದಿನಗಳ ಹಿಂದೆ ತನ್ನ ಫೋನ್ ಕಳ್ಳತನವಾಗಿದೆ ಎಂದು ಫೋನ್ ಮಾಲೀಕರು ತಿಳಿಸಿದ್ದರು. ಹುಡುಗಿಯ ತಂದೆಗೆ ಇವರಿಬ್ಬರ ಪ್ರೀತಿ ಇಷ್ಟವಿರಲಿಲ್ಲ. ಅದಕ್ಕಾಗಿ ಕೋಪಗೊಂಡ ಯುವಕ ಪ್ರೇಯಸಿ ತಮದೆಯನ್ನು ಜೈಲಿಗಟ್ಟಲು ತಯಾರಿ ನಡೆಸಿದ್ದ.

ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506 ಮತ್ತು 507 ಮತ್ತು ಐಟಿ ಕಾಯ್ದೆ 66 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ರೀತಿ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ, ಯೋಗಿ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹಲವು ಬಾರಿ ಬೆದರಿಕೆ ಎದುರಿಸಿದ್ದಾರೆ. ವಾರದ ಹಿಂದೆಯೂ ಫೇಸ್ ಬುಕ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಪೋಸ್ಟ್‌ನಲ್ಲಿ ಸಿಎಂ ಯೋಗಿಗೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಲಾಗಿತ್ತು, ನಂತರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕ್ರಮ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ