AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಮುಕೇಶ್ ಅಂಬಾನಿಗೆ ಜೀವ ಬೆದರಿಕೆ : ತೆಲಂಗಾಣದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Mukesh Ambani: ಇತ್ತೀಚೆಗಷ್ಟೇ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರಿಗೆ ಬೆದರಿಕೆ ಇಮೇಲ್​​ ಒಂದು ಬಂದಿತ್ತು. ಇದೀಗ ಈ ಇಮೇಲ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂಬಾನಿಗೆ ಹಲವು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದ ಆರೋಪದ ಮೇಲೆ ತೆಲಂಗಾಣದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಈ ವ್ಯಕ್ತಿಯನ್ನು ಗಣೇಶ್ ರಮೇಶ ವನಪರ್ದಿ ಎಂದು ಗುರುತಿಸಲಾಗಿದೆ.

ಉದ್ಯಮಿ ಮುಕೇಶ್ ಅಂಬಾನಿಗೆ ಜೀವ ಬೆದರಿಕೆ : ತೆಲಂಗಾಣದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ಮುಖೇಶ್ ಅಂಬಾನಿ
ಅಕ್ಷಯ್​ ಪಲ್ಲಮಜಲು​​
|

Updated on: Nov 04, 2023 | 5:29 PM

Share

ಇತ್ತೀಚೆಗಷ್ಟೇ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರಿಗೆ ಬೆದರಿಕೆ ಇಮೇಲ್​​ ಒಂದು ಬಂದಿತ್ತು. ಇದೀಗ ಈ ಇಮೇಲ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂಬಾನಿಗೆ ಹಲವು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದ ಆರೋಪದ ಮೇಲೆ ತೆಲಂಗಾಣದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಈ ವ್ಯಕ್ತಿಯನ್ನು ಗಣೇಶ್ ರಮೇಶ ವನಪರ್ದಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್​​​​ 8ವರೆಗೆ ಪೊಲೀಸ್​​​ ಕಸ್ಟಡಿಗೆ ಒಪ್ಪಿಸಲಾಗಿದೆ. ಅಕ್ಟೋಬರ್ 31 ಮುಖೇಶ್ ಅಂಬಾನಿ ಅವರಿಗೆ 400 ಕೋಟಿ ನೀಡುವಂತೆ ಇಮೇಲ್​​ ಬಂದಿತ್ತು. ಒಂದು ವೇಳೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಮೇಲ್​​ನ ಆಧಾರದ ಮೇಲೆ ಅಂಬಾನಿ ಅವರು ಭದ್ರತಾ ಪಡೆ ಪೊಲೀಸರಿಗೆ ದೂರು ನೀಡಿದೆ.

ಈ ದೂರಿನ ಆಧಾರದ ಮೇಲೆ ಗಾಮದೇವಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಅಂಬಾನಿ ಅವರಿಗೆ ಇಂತಹ 5 ಇಮೇಲ್​​ಗಳು ಬಂದಿದೆ. ಮೊದಲು 20 ಕೋಟಿ ನಂತರ 200 ಕೋಟಿ, ಮೂರನೇ ಬಾರಿ 400 ಕೋಟಿ ರೂ, ಬೇಡಿಕೆ ಇಟ್ಟಿದ್ದಾನೆ, ಅದರೆ ಈ ಯಾವುದಕ್ಕೂ ಅಂಬಾನಿ ಅವರ ಭದ್ರತಾ ಪಡೆ ಪ್ರತಿಕ್ರಿಯೆ ನೀಡದ ಕಾರಣ, ನಿರ್ಲಕ್ಷಿಸಿದರೆ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಮೇಲ್​​ ಮಾಡಿದ್ದಾರೆ.

ಇದನ್ನೂ ಓದಿ: ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ, 400 ಕೋಟಿ ರೂ.ಗೆ ಬೇಡಿಕೆ

ಇನ್ನು ಇಂತಹ ಅನೇಕ ಕೃತ್ಯಗಳು ಪ್ರತಿದಿನ ನಡೆಯುತ್ತಿರುತ್ತದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಿದ ಪೊಲೀಸ್​​​ ಸಿಬ್ಬಂದಿ ಈಗ ಒಬ್ಬನ್ನು ಬಂಧಿಸಿ, ಕೋರ್ಟ್​​ಗೆ ಮುಂದೆ ನಿಲ್ಲಿಸಿದ್ದಾರೆ, ಇದೀಗ ಈ ಆರೋಪಿ ನವೆಂಬರ್​​ 8ರವರೆಗೆ ಪೊಲೀಸ್​​​ ಕಸ್ಟಡಿಯಲ್ಲಿ ಇರಿಸಲಾಗಿದೆ. ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆಯ (IPC)ಸೆಕ್ಷನ್​ 387 (ಸಾವಿನ ಭಯ ಅಥವಾ ಸುಲಿಗೆ ಮಾಡುವ ಸಲುವಾಗಿ ವ್ಯಕ್ತಿಯನ್ನು ಬೆದರಿಸುವುದು ಅಥವಾ ಗಾಯಗೊಳಿಸುವುದು) ಮತ್ತು 506(2) (ಕ್ರಿಮಿನಲ್​​ ಬೆದರಿಕೆ)ಯ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ