AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಮುಕೇಶ್ ಅಂಬಾನಿಗೆ ಜೀವ ಬೆದರಿಕೆ : ತೆಲಂಗಾಣದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Mukesh Ambani: ಇತ್ತೀಚೆಗಷ್ಟೇ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರಿಗೆ ಬೆದರಿಕೆ ಇಮೇಲ್​​ ಒಂದು ಬಂದಿತ್ತು. ಇದೀಗ ಈ ಇಮೇಲ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂಬಾನಿಗೆ ಹಲವು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದ ಆರೋಪದ ಮೇಲೆ ತೆಲಂಗಾಣದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಈ ವ್ಯಕ್ತಿಯನ್ನು ಗಣೇಶ್ ರಮೇಶ ವನಪರ್ದಿ ಎಂದು ಗುರುತಿಸಲಾಗಿದೆ.

ಉದ್ಯಮಿ ಮುಕೇಶ್ ಅಂಬಾನಿಗೆ ಜೀವ ಬೆದರಿಕೆ : ತೆಲಂಗಾಣದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ಮುಖೇಶ್ ಅಂಬಾನಿ
ಅಕ್ಷಯ್​ ಪಲ್ಲಮಜಲು​​
|

Updated on: Nov 04, 2023 | 5:29 PM

Share

ಇತ್ತೀಚೆಗಷ್ಟೇ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರಿಗೆ ಬೆದರಿಕೆ ಇಮೇಲ್​​ ಒಂದು ಬಂದಿತ್ತು. ಇದೀಗ ಈ ಇಮೇಲ್ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂಬಾನಿಗೆ ಹಲವು ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದ ಆರೋಪದ ಮೇಲೆ ತೆಲಂಗಾಣದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಈ ವ್ಯಕ್ತಿಯನ್ನು ಗಣೇಶ್ ರಮೇಶ ವನಪರ್ದಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್​​​​ 8ವರೆಗೆ ಪೊಲೀಸ್​​​ ಕಸ್ಟಡಿಗೆ ಒಪ್ಪಿಸಲಾಗಿದೆ. ಅಕ್ಟೋಬರ್ 31 ಮುಖೇಶ್ ಅಂಬಾನಿ ಅವರಿಗೆ 400 ಕೋಟಿ ನೀಡುವಂತೆ ಇಮೇಲ್​​ ಬಂದಿತ್ತು. ಒಂದು ವೇಳೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಮೇಲ್​​ನ ಆಧಾರದ ಮೇಲೆ ಅಂಬಾನಿ ಅವರು ಭದ್ರತಾ ಪಡೆ ಪೊಲೀಸರಿಗೆ ದೂರು ನೀಡಿದೆ.

ಈ ದೂರಿನ ಆಧಾರದ ಮೇಲೆ ಗಾಮದೇವಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಅಂಬಾನಿ ಅವರಿಗೆ ಇಂತಹ 5 ಇಮೇಲ್​​ಗಳು ಬಂದಿದೆ. ಮೊದಲು 20 ಕೋಟಿ ನಂತರ 200 ಕೋಟಿ, ಮೂರನೇ ಬಾರಿ 400 ಕೋಟಿ ರೂ, ಬೇಡಿಕೆ ಇಟ್ಟಿದ್ದಾನೆ, ಅದರೆ ಈ ಯಾವುದಕ್ಕೂ ಅಂಬಾನಿ ಅವರ ಭದ್ರತಾ ಪಡೆ ಪ್ರತಿಕ್ರಿಯೆ ನೀಡದ ಕಾರಣ, ನಿರ್ಲಕ್ಷಿಸಿದರೆ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಮೇಲ್​​ ಮಾಡಿದ್ದಾರೆ.

ಇದನ್ನೂ ಓದಿ: ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ, 400 ಕೋಟಿ ರೂ.ಗೆ ಬೇಡಿಕೆ

ಇನ್ನು ಇಂತಹ ಅನೇಕ ಕೃತ್ಯಗಳು ಪ್ರತಿದಿನ ನಡೆಯುತ್ತಿರುತ್ತದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಿದ ಪೊಲೀಸ್​​​ ಸಿಬ್ಬಂದಿ ಈಗ ಒಬ್ಬನ್ನು ಬಂಧಿಸಿ, ಕೋರ್ಟ್​​ಗೆ ಮುಂದೆ ನಿಲ್ಲಿಸಿದ್ದಾರೆ, ಇದೀಗ ಈ ಆರೋಪಿ ನವೆಂಬರ್​​ 8ರವರೆಗೆ ಪೊಲೀಸ್​​​ ಕಸ್ಟಡಿಯಲ್ಲಿ ಇರಿಸಲಾಗಿದೆ. ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆಯ (IPC)ಸೆಕ್ಷನ್​ 387 (ಸಾವಿನ ಭಯ ಅಥವಾ ಸುಲಿಗೆ ಮಾಡುವ ಸಲುವಾಗಿ ವ್ಯಕ್ತಿಯನ್ನು ಬೆದರಿಸುವುದು ಅಥವಾ ಗಾಯಗೊಳಿಸುವುದು) ಮತ್ತು 506(2) (ಕ್ರಿಮಿನಲ್​​ ಬೆದರಿಕೆ)ಯ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ