ಟೀಂ ಇಂಡಿಯಾದಂತೆ ಒಂದಾಗಿ ಕೆಲಸ ಮಾಡೋಣ; ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಕರೆ
ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಟೀಂ ಇಂಡಿಯಾವಾಗಿ ಕೆಲಸ ಮಾಡಿದರೆ ಯಾವುದೇ ಗುರಿ ಸಾಧಿಸುವುದು ಅಸಾಧ್ಯವಲ್ಲ ಎಂದು ಅವರು ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಮತ್ತು ಪಾಕಿಸ್ತಾನದೊಂದಿಗಿನ ಭಾರತದ ಹಗೆತನದ ನಂತರ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರ ಮೊದಲ ಸಭೆ ಇದಾಗಿದೆ.

ನವದೆಹಲಿ, ಮೇ 24: ವಿಕಸಿತ ಭಾರತ ಪ್ರತಿಯೊಬ್ಬ ಭಾರತೀಯನ ಗುರಿ. ಪ್ರತಿಯೊಂದು ರಾಜ್ಯವೂ ವಿಕಸಿತವಾಗಿದ್ದರೆ, ಭಾರತವೂ ವಿಕಸಿತವಾಗಿರುತ್ತದೆ. ಇದು ಭಾರತದ 140 ಕೋಟಿ ನಾಗರಿಕರ ಆಕಾಂಕ್ಷೆಯಾಗಿದೆ. ಆಪರೇಷನ್ ಸಿಂಧೂರ್ (Operation Sindoor) ಮತ್ತು ಪಾಕಿಸ್ತಾನದೊಂದಿಗಿನ ಭಾರತದ ಹಗೆತನದ ನಂತರ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ನೀತಿ ಆಯೋಗದ (NITI Aayog) ಸಭೆ ನಡೆಸಿದ್ದಾರೆ. ನೀತಿ ಆಯೋಗ ಸಭೆಯಲ್ಲಿ ಮಹಿಳೆಯರನ್ನು ಕಾರ್ಯಪಡೆಯಲ್ಲಿ ಸೇರಿಸಿಕೊಳ್ಳಲು ಕೆಲಸ ಮಾಡಬೇಕು ಮತ್ತು ಮಹಿಳೆಯರನ್ನು ಗೌರವಯುತವಾಗಿ ಕಾರ್ಯಪಡೆಯಲ್ಲಿ ಸೇರಿಸಲು ಕಾನೂನುಗಳನ್ನು ರೂಪಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
2047ರ ಮೊದಲು ದೇಶವನ್ನು ವಿಕಸಿತ ಭಾರತವನ್ನಾಗಿ ಮಾಡುವ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡ ಪ್ರಧಾನಿ ಮೋದಿ, ಪ್ರತಿಯೊಂದು ರಾಜ್ಯ ಮತ್ತು ಅದರ ಪ್ರತಿಯೊಂದು ಸಣ್ಣ ಭಾಗವನ್ನು ‘ವಿಕಸಿತ’ವನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. ಭಾರತದ ರಾಜ್ಯಗಳು ಜಾಗತಿಕ ಮಾನದಂಡಗಳಿಗೆ ಸಮನಾಗಿ ಕನಿಷ್ಠ ಒಂದು ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸುವಂತೆ ಮೋದಿ ಮನವ ಮಾಡಿದರು. ದೇಶಾದ್ಯಂತ ಪ್ರವಾಸೋದ್ಯಮದ ದೊಡ್ಡ ಅಭಿಯಾನದಲ್ಲಿ, ಪ್ರಧಾನಿ ಮೋದಿ “ಒಂದು ರಾಜ್ಯ, ಒಂದು ಜಾಗತಿಕ ತಾಣ” ಎಂಬ ಕಲ್ಪನೆಯನ್ನು ಮುಂದಿಟ್ಟರು.
Prime Minister Narendra Modi with Tamil Nadu CM MK Stalin, and Andhra Pradesh CM N Chandrababu Naidu at today’s NITI Aayog meeting. pic.twitter.com/47k3cnL3nS
— ANI (@ANI) May 24, 2025
ಇದನ್ನೂ ಓದಿ: Monsoon 2025: ಕೇರಳಕ್ಕೆ ಮುಂಗಾರು ಪ್ರವೇಶ; 2009ರ ಬಳಿಕ ಮೊದಲ ಬಾರಿ ಬೇಗ ಮಳೆಗಾಲ ಶುರು
“ರಾಜ್ಯಗಳು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಮತ್ತು ಎಲ್ಲಾ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರತಿ ರಾಜ್ಯಕ್ಕೆ ಕನಿಷ್ಠ ಒಂದು ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಬೇಕು. ಇದು ನೆರೆಯ ನಗರಗಳನ್ನು ಪ್ರವಾಸಿ ಸ್ಥಳಗಳಾಗಿ ಅಭಿವೃದ್ಧಿಪಡಿಸಲು ಕಾರಣವಾಗುತ್ತದೆ” ಎಂದು ಅವರು ಹೇಳಿದರು. ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲಿನ ದಾಳಿಯ ಹೊರತಾಗಿಯೂ ಸರ್ಕಾರವು ಧೈರ್ಯದಿಂದ ಉಳಿದಿದೆ ಎಂದು ಪ್ರವಾಸೋದ್ಯಮ ಕುರಿತಾದ ಈ ಹೇಳಿಕೆ ತೋರಿಸುತ್ತದೆ.
PM Modi at Niti aayog meet in Delhi earlier today: pic.twitter.com/vP9iCPBDJs
— Sidhant Sibal (@sidhant) May 24, 2025
ಇಂದು ನಡೆದ ನೀತಿ ಆಯೋಗದ ಸಭೆಯಲ್ಲಿ ಪುದುಚೇರಿ, ಕರ್ನಾಟಕ ಮತ್ತು ಕೇರಳದ ಮುಖ್ಯಮಂತ್ರಿಗಳು ಗೈರುಹಾಜರಾಗಿದ್ದರು. ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣ ಮುಖ್ಯಮಂತ್ರಿಗಳಾದ ಎನ್. ಚಂದ್ರಬಾಬು ನಾಯ್ಡು, ಎಂ.ಕೆ. ಸ್ಟಾಲಿನ್ ಮತ್ತು ರೇವಂತ್ ರೆಡ್ಡಿ ಉಪಸ್ಥಿತರಿದ್ದರು. ಜಮ್ಮು ಮತ್ತು ಕಾಶ್ಮೀರದ ಒಮರ್ ಅಬ್ದುಲ್ಲಾ ಮತ್ತು ಹಿಮಾಚಲ ಪ್ರದೇಶದ ಸುಖವಿಂದರ್ ಸುಖು ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮೋದಿ ಜೊತೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಕೇಂದ್ರ ಸಚಿವರು ಉಪಸ್ಥಿತರಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:14 pm, Sat, 24 May 25




