AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರನ್ನೇ ಮರೆಯಿತೇ ಬಿಸಿಸಿಐ

ಐಸಿಸಿ ವಿಶ್ವಕಪ್ 2023(World Cup 2023) ಫೈನಲ್ ಪಂದ್ಯವು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಈ ಅಂತಿಮ ಪಂದ್ಯಕ್ಕೆ ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್(Sharad Pawar) ​ರನ್ನು ಆಹ್ವಾನಿಸಲು ಬಿಸಿಸಿಐ ಮರೆಯಿತೇ ಎನ್ನುವ ಪ್ರಶ್ನೆಗಳು ಎದ್ದಿವೆ. ICC ವಿಶ್ವಕಪ್ 2023ನಲ್ಲಿ ಹೆಸರು ಮಾಡುವ ಟೀಂ ಇಂಡಿಯಾದ ಆಸೆ ಈ ವರ್ಷವೂ ಈಡೇರಲಿಲ್ಲ. ಟೀಂ ಇಂಡಿಯಾವನ್ನು ಸೋಲಿಸಿದ ಕಾಂಗರೂಗಳು ಆರನೇ ಬಾರಿಗೆ ವಿಶ್ವಕಪ್ ಗೆದ್ದಿದ್ದಾರೆ. ಈ ವರ್ಷ ವಿಶ್ವಕಪ್ ಅನ್ನು ಭಾರತ ಆಯೋಜಿಸಿತ್ತು . 2023 ರ ವಿಶ್ವಕಪ್ ಎಷ್ಟು ರೋಚಕವಾಗಿತ್ತೋ, ಹಾಗೆಯೇ ಕೆಲವು ಕಾರಣಗಳಿಂದ ಇದು ವಿವಾದದಲ್ಲಿ ಮುಳುಗಿದೆ.

ICC World Cup 2023: ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರನ್ನೇ ಮರೆಯಿತೇ ಬಿಸಿಸಿಐ
ಶರದ್ ಪವಾರ್
Follow us
ನಯನಾ ರಾಜೀವ್
|

Updated on:Nov 21, 2023 | 3:15 PM

ಐಸಿಸಿ ವಿಶ್ವಕಪ್ 2023(World Cup 2023) ಫೈನಲ್ ಪಂದ್ಯವು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ(November 19) ನಡೆಯಿತು. ಈ ಅಂತಿಮ ಪಂದ್ಯಕ್ಕೆ ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್(Sharad Pawar) ​ರನ್ನು ಆಹ್ವಾನಿಸಲು ಬಿಸಿಸಿಐ ಮರೆಯಿತೇ ಎನ್ನುವ ಪ್ರಶ್ನೆಗಳು ಎದ್ದಿವೆ. ICC ವಿಶ್ವಕಪ್ 2023ನಲ್ಲಿ ಹೆಸರು ಮಾಡುವ ಟೀಂ ಇಂಡಿಯಾದ ಆಸೆ ಈ ವರ್ಷವೂ ಈಡೇರಲಿಲ್ಲ. ಟೀಂ ಇಂಡಿಯಾವನ್ನು ಸೋಲಿಸಿದ ಕಾಂಗರೂಗಳು ಆರನೇ ಬಾರಿಗೆ ವಿಶ್ವಕಪ್ ಗೆದ್ದಿದ್ದಾರೆ. ಈ ವರ್ಷ ವಿಶ್ವಕಪ್ ಅನ್ನು ಭಾರತ ಆಯೋಜಿಸಿತ್ತು . 2023 ರ ವಿಶ್ವಕಪ್ ಎಷ್ಟು ರೋಚಕವಾಗಿತ್ತೋ, ಹಾಗೆಯೇ ಕೆಲವು ಕಾರಣಗಳಿಂದ ಇದು ವಿವಾದದಲ್ಲಿ ಮುಳುಗಿದೆ.

ವಿಶ್ವಕಪ್‌ಗೆ ಸಂಬಂಧಿಸಿದಂತೆ ಸದ್ಯದ ವಿವಾದ ಏನೆಂದರೆ ವಿಶ್ವಕಪ್‌ನ ಫೈನಲ್‌ಗೆ ದೇಶ-ವಿದೇಶದ ಹಲವು ಗಣ್ಯರು ಆಗಮಿಸಿದ್ದರು. ಆದರೆ, ದೇಶಕ್ಕೆ ಮೊದಲ ವಿಶ್ವಕಪ್ ಗೆದ್ದುಕೊಟ್ಟ ಭಾರತ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರನ್ನು ಆಹ್ವಾನಿಸಿರಲಿಲ್ಲ. ಇದರಿಂದಾಗಿ ಬಿಸಿಸಿಐ ಯೋಜನೆ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಈ ಮೂಲಕ ವಿಶ್ವಕಪ್ ಫೈನಲ್‌ಗೆ ಆಹ್ವಾನಿತರಲ್ಲದವರ ಪಟ್ಟಿಯಲ್ಲಿ ಕಪಿಲ್ ದೇವ್ ಜೊತೆಗೆ ಮತ್ತೋರ್ವ ಹೆಸರು ಸೇರಿದೆ ಎನ್ನಲಾಗುತ್ತಿದೆ.

ಈ ಕುರಿತು ಕಪಿಲ್ ದೇವ್ ಮಾತನಾಡಿ, ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ. ಅವರು ನನ್ನನ್ನು ಆಹ್ವಾನಿಸಲಿಲ್ಲ, ಹಾಗಾಗಿ ನಾನು ಹೋಗಲಿಲ್ಲ. ನನ್ನೊಂದಿಗೆ 1983 ರ ಸಂಪೂರ್ಣ ತಂಡವನ್ನು ಫೈನಲ್ ವೀಕ್ಷಿಸಲು ನಾನು ಬಯಸುತ್ತೇನೆ ಎಂದು ಹೇಳಿದ್ದರು. ಕಪಿಲ್ ದೇವ್ ಜತೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ ಆ ಹೆಸರು ಶರದ್ ಪವಾರ್, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ.

ಮತ್ತಷ್ಟು ಓದಿ: Crime News: ನೀನು ಮಟನ್ ತಿಂದಿದ್ದರಿಂದ ಭಾರತ ಸೋತಿತು ಎಂದ ತಮ್ಮನನ್ನೇ ಕೊಂದ ಅಣ್ಣ

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ವಿಶ್ವಕಪ್ 2023 ಫೈನಲ್‌ಗೆ ಆಹ್ವಾನಿಸಲಾಗಿಲ್ಲ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಶರದ್ ಪವಾರ್ ಬಿಸಿಸಿಐ ಮತ್ತು ಐಸಿಸಿ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದಾರೆ. ಹಾಗಾಗಿ ಬಿಸಿಸಿಐ ಅವರನ್ನು ಆಹ್ವಾನಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬಿಸಿಸಿಐ ಶರದ್ ಪವಾರ್ ಅವರನ್ನು ಫೈನಲ್‌ಗೆ ಆಹ್ವಾನಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 240 ರನ್ ಗಳಿಸಿತ್ತು. ಈ ಗುರಿಯನ್ನು ಆಸ್ಟ್ರೇಲಿಯಾ ಆರಾಮವಾಗಿ ಬೆನ್ನಟ್ಟಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದಿದೆ. ಟೀಂ ಇಂಡಿಯಾ 1983 ಮತ್ತು 2011ರಲ್ಲಿ ಎರಡು ಬಾರಿ ವಿಶ್ವಕಪ್ ಗೆದ್ದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:13 pm, Tue, 21 November 23

ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ