’ಸಿಎಂ ಯೋಗಿ ಆದಿತ್ಯನಾಥ್​ ಕೂಡ ಪ್ರಧಾನಿ ಮೋದಿಯವರಂತೆ.. 4 ವರ್ಷಗಳಲ್ಲಿ ಒಂದಿನವೂ ರಜೆ ಪಡೆದಿಲ್ಲ‘

ಯಾರು ತಮ್ಮ ಸ್ವಂತಕ್ಕಾಗಿ ಏನನ್ನೂ ಮಾಡಿಕೊಳ್ಳದೆ, ಸಮಾಜಕ್ಕಾಗಿ ದುಡಿಯುತ್ತಾರೋ ಅವರೇ ನಿಜವಾದ ದೇಶಭಕ್ತರು. ಅಂಥವರಿಂದಲೇ ಬದಲಾವಣೆ ಸಾಧ್ಯ ಎಂದು ದಿನೇಶ್​ ಶರ್ಮಾ ಹೇಳಿದ್ದಾರೆ.

’ಸಿಎಂ ಯೋಗಿ ಆದಿತ್ಯನಾಥ್​ ಕೂಡ ಪ್ರಧಾನಿ ಮೋದಿಯವರಂತೆ.. 4 ವರ್ಷಗಳಲ್ಲಿ ಒಂದಿನವೂ ರಜೆ ಪಡೆದಿಲ್ಲ‘
ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಪ್ರಧಾನಿ ಮೋದಿ
Follow us
| Updated By: Lakshmi Hegde

Updated on:Sep 13, 2021 | 10:06 AM

ಲಖನೌ: ಪ್ರಧಾನಿ ನರೇಂದ್ರ ಮೋದಿ (Narendra Modi)ಯವರು ಪ್ರಧಾನಿಯಾಗಿ ಕಳೆದ ಏಳುವರ್ಷಗಳಲ್ಲಿ ಒಂದು ದಿನವೂ ರಜೆ ಪಡೆಯಲಿಲ್ಲ. ಹಾಗೇ, ನಮ್ಮ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಮುಖ್ಯಮಂತ್ರಿಯಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್​ ಶರ್ಮಾ (UP Deputy CM)  ಹೇಳಿದ್ದಾರೆ. ಗ್ರೇಟರ್ ಇಂಡಿಯಾದಲ್ಲಿ ಭಾನುವಾರ ನಡೆದ ಪ್ರಬುದ್ಧ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿ, ಪ್ರಧಾನಿ ಮೋದಿಯವರಿಂದಾಗಿ ಇಡೀ ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದೆ. ಹಾಗೇ, ಉತ್ತರಪ್ರದೇಶ ಅಭಿವೃದ್ಧಿಯಾಗಿದ್ದು ಯೋಗಿ ಆದಿತ್ಯನಾಥ್​ರಿಂದ ಎಂದು ಹೇಳಿದರು.  

ಯಾರು ತಮ್ಮ ಸ್ವಂತಕ್ಕಾಗಿ ಏನನ್ನೂ ಮಾಡಿಕೊಳ್ಳದೆ, ಸಮಾಜಕ್ಕಾಗಿ ದುಡಿಯುತ್ತಾರೋ ಅವರೇ ನಿಜವಾದ ದೇಶಭಕ್ತರು. ಅಂಥವರಿಂದಲೇ ಬದಲಾವಣೆ ಸಾಧ್ಯ. ಬಿಜೆಪಿ ಯಾವತ್ತೂ ಜಾತಿ-ಪಂಥದ ಹೆಸರಲ್ಲಿ ಬೇಧ-ಭಾವ ಮಾಡಿಲ್ಲ. ಈ ಬಿಜೆಪಿ ಸರ್ಕಾರದ ಯೋಜನೆಗಳೆಲ್ಲವೂ ಸಮಾಜದ ಪ್ರತಿ ವಿಭಾಗದ ಜನರಿಗ ಸೇರುವಂಥದ್ದಾಗಿದೆ. ಪ್ರತಿಯೊಬ್ಬರಿಗೂ ಅನುಕೂಲವಾಗುವಂಥದ್ದೇ ಆಗಿದೆ ಎಂದು ಶರ್ಮಾ ಹೇಳಿದ್ದಾರೆ.

ಬಿಜೆಪಿ ಎಂದಿಗೂ ಹಿಂದು ಮತ್ತು ಮುಸ್ಲಿಂ ನಡುವೆ ತಾರತಮ್ಯ ಮಾಡಿಲ್ಲ. ಉತ್ತರ ಪ್ರದೇಶದಲ್ಲಿ ಇಷ್ಟು ದಿನದ ಯೋಗಿ ಆದಿತ್ಯನಾಥ್​ ಆಡಳಿತದಲ್ಲಿ ಒಂದೇ ಒಂದು ಬಾರಿಯೂ ಮುಸ್ಲಿಮರ ಧಂಗೆ ನಡೆದಿಲ್ಲ ಎಂದು ಹೇಳಿದ್ದಾರೆ. ಅದಕ್ಕೂ ಮೊದಲು ಟ್ವೀಟ್ ಮಾಡಿದ್ದ ಅವರು, ನಮ್ಮ ಬಿಜೆಪಿ ಪಕ್ಷ ಎಲ್ಲರನ್ನೂ ಒಳಗೊಂಡು ಮುಂದೆ ಸಾಗುವುದರಲ್ಲಿ ನಂಬಿಕೆ ಇಟ್ಟಿದೆ. ಈಗಾಗಲೇ ರೈತರ ಜತೆ ಮಾತುಕತೆ ನಡೆಸಲಾಗಿದೆ. ನಂತರ ಹಿಂದುಳಿದ ವರ್ಗಗಳ ಜತೆಯೂ ಸಂವಾದ ನಡೆಸಲಾಗಿತ್ತು. ಇದೀಗ ಪ್ರಬುದ್ಧ ವರ್ಗದವರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬೆಲೆ ಏರಿಕೆ ಖಂಡಿಸಿ ‘ಕೈ’ ನಾಯಕರ ಎತ್ತಿನಗಾಡಿ ಚಲೋ

ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚಾಯ್ತು ಸಿರಿವಂತರ ಜಾಲಿ ರೈಡ್​; ಅತಿ ವೇಗದಲ್ಲಿ ಓಡಾಡಿದ ಉದ್ಯಮಿಯ ಬೆನ್ಜ್​ ಕಾರು ಪೊಲೀಸರ ವಶಕ್ಕೆ

Published On - 9:57 am, Mon, 13 September 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್