AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದಲ್ಲಿ ಮದ್ಯ ನಿಷೇಧ?; ಹೊಸ ಮದ್ಯದಂಗಡಿಗಳ ಕುರಿತು ಅಬಕಾರಿ ಸಚಿವರ ಮಹತ್ವದ ಘೋಷಣೆ

2025ರಲ್ಲಿ ಒಡಿಶಾ ರಾಜ್ಯದಲ್ಲಿ ಅಬಕಾರಿ ನೀತಿಯಲ್ಲಿ ಹಲವು ಬದಲಾವಣೆಗಳನ್ನು ತರಲಾಗುವುದು. ಆದ್ದರಿಂದ ಒಡಿಶಾದಲ್ಲಿ ಯಾವುದೇ ಹೊಸ ಮದ್ಯದ ಅಂಗಡಿಗಳು ಅಥವಾ ಅಕ್ರಮ ಮದ್ಯ ಮಾರಾಟ ಇರುವುದಿಲ್ಲ ಎಂದು ಸಚಿವ ಹರಿಚಂದನ್ ಹೇಳಿದ್ದಾರೆ.

ಒಡಿಶಾದಲ್ಲಿ ಮದ್ಯ ನಿಷೇಧ?; ಹೊಸ ಮದ್ಯದಂಗಡಿಗಳ ಕುರಿತು ಅಬಕಾರಿ ಸಚಿವರ ಮಹತ್ವದ ಘೋಷಣೆ
ಮದ್ಯ
ಸುಷ್ಮಾ ಚಕ್ರೆ
|

Updated on: Aug 08, 2024 | 4:55 PM

Share

ಪುರಿ: ಒಡಿಶಾದ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ರಾಜ್ಯದ ಮದ್ಯ ಉದ್ಯಮಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಒಡಿಶಾದಲ್ಲಿ ಯಾವುದೇ ಹೊಸ ಮದ್ಯದ ಅಂಗಡಿಗಳು ಸ್ಥಾಪನೆಯಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಒಡಿಶಾ ಮಾರುಕಟ್ಟೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವುದು ಒಡಿಶಾದ ಅಬಕಾರಿ ಸಚಿವಾಲಯದ ಪ್ರಮುಖ ಸವಾಲು ಎಂದು ಸಚಿವರು ಹೇಳಿದ್ದಾರೆ. ತೆರಿಗೆ ರಹಿತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸುವುದು ಇದರ ಉದ್ದೇಶವಾಗಿದೆ. ಅಬಕಾರಿ ನಿಯಮಗಳಲ್ಲಿ ಅಸ್ತಿತ್ವದಲ್ಲಿರುವ ಯಾವುದೇ ಲೋಪದೋಷಗಳನ್ನು ಗುರುತಿಸಲು ಮತ್ತು ಮುಚ್ಚುವ ಗುರಿಯನ್ನು ಸಚಿವಾಲಯ ಹೊಂದಿದೆ ಎಂದಿದ್ದಾರೆ.

“ಒಡಿಶಾದಲ್ಲಿ ಹೊಸ ಮದ್ಯದ ಅಂಗಡಿಗಳು ಇರುವುದಿಲ್ಲ” ಎಂದು ಹರಿಚಂದನ್ ಹೇಳಿದ್ದಾರೆ. “ಅಬಕಾರಿ ನೀತಿಯನ್ನು ಸ್ಪಷ್ಟಪಡಿಸುವ ಮೂಲಕ ಒಡಿಶಾದಲ್ಲಿ ಯಾವುದೇ ಹೊಸ ಮದ್ಯದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡುವುದಿಲ್ಲ” ಎಂದು ಅಬಕಾರಿ ಸಚಿವರು ವಿವರಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಸದಸ್ಯತ್ವಕ್ಕೆ ಒಡಿಶಾ ಬಿಜೆಡಿ ನಾಯಕಿ ಮಮತಾ ಮೊಹಾಂತಾ ರಾಜೀನಾಮೆ; ಬಿಜೆಪಿ ಸೇರ್ಪಡೆ ಸಾಧ್ಯತೆ

ಕಾನೂನು ಮತ್ತು ಕಾರ್ಯ ಸಚಿವಾಲಯಗಳ ಜವಾಬ್ದಾರಿಗಳನ್ನು ಹೊಂದಿರುವ ಹರಿಚಂದನ್, “ಅಕ್ರಮ ಮದ್ಯ ಮಾರಾಟವನ್ನು ತಡೆಯಲು ನಾವು ನಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

2025ರಲ್ಲಿ ರಾಜ್ಯದಲ್ಲಿ ಅಬಕಾರಿ ನೀತಿಯಲ್ಲಿ ಹಲವು ಬದಲಾವಣೆಗಳನ್ನು ಕಾಣಲಿದೆ. ಆದ್ದರಿಂದ ಒಡಿಶಾದಲ್ಲಿ ಯಾವುದೇ ಹೊಸ ಮದ್ಯದ ಅಂಗಡಿಗಳು ಅಥವಾ ಅಕ್ರಮ ಮದ್ಯ ಮಾರಾಟ ಇರುವುದಿಲ್ಲ ಎಂದು ಹರಿಚಂದನ್ ಹೇಳಿದ್ದಾರೆ. ಈ ಹಿಂದೆ ಜೂನ್ 15ರಂದು ಒಡಿಶಾ ಪಿಆರ್ ಇಲಾಖೆ ರಾಜ್ಯದಲ್ಲಿ ಮದ್ಯ ನಿಷೇಧದ ಬಗ್ಗೆ ಸುಳ್ಳು ಸುದ್ದಿಗಳ ಪ್ರಸಾರದ ಬಗ್ಗೆ ಸ್ಪಷ್ಟನೆ ನೀಡಿತ್ತು. ನಂತರ ಜುಲೈ 26ರಂದು ಒಡಿಶಾ ಸರ್ಕಾರವು ರಾಜ್ಯದಲ್ಲಿ ಹಂತ ಹಂತವಾಗಿ ಮದ್ಯ ನಿಷೇಧವನ್ನು ಯೋಜಿಸಿದೆ ಎಂದು ವರದಿಯಾಗಿದೆ ಎಂದು ಸಾಮಾಜಿಕ ಭದ್ರತಾ ಸಚಿವ ನಿತ್ಯಾನಂದ ಗೊಂಡ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!