AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Policy Case: ಮದ್ಯ ನೀತಿ ಹಗರಣ ವಿಚಾರಣೆ ಕುರಿತು ಮನೀಶ್ ಸಿಸೋಡಿಯಾ ಮನವಿಗೆ ಒಪ್ಪಿದ ಸಿಬಿಐ

ಮದ್ಯ ನೀತಿ ಹಗರಣದ ವಿಚಾರಣೆ ಕುರಿತಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ ಮನವಿಯನ್ನು ಸಿಬಿಐ ಸ್ವೀಕರಿಸಿದೆ.

Liquor Policy Case: ಮದ್ಯ ನೀತಿ ಹಗರಣ ವಿಚಾರಣೆ ಕುರಿತು ಮನೀಶ್ ಸಿಸೋಡಿಯಾ ಮನವಿಗೆ ಒಪ್ಪಿದ ಸಿಬಿಐ
ಮಿನೀಶ್ ಸಿಸೋಡಿಯಾ
ನಯನಾ ರಾಜೀವ್
|

Updated on:Feb 19, 2023 | 12:14 PM

Share

ಮದ್ಯ ನೀತಿ ಹಗರಣದ ವಿಚಾರಣೆ ಕುರಿತಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ ಮನವಿಯನ್ನು ಸಿಬಿಐ ಸ್ವೀಕರಿಸಿದೆ. ಸದ್ಯದಲ್ಲೇ ಹೊಸದಾಗಿ ಸಮನ್ಸ್ ಜಾರಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಸೋಡಿಯಾ ಅವರು ದೆಹಲಿಯ ಬಜೆಟ್ ಸಿದ್ಧಪಡಿಸುವಲ್ಲಿ ನಿರತರಾಗಿರುವ ಕಾರಣ ಫೆಬ್ರವರಿ ಅಂತ್ಯದವರೆಗೆ ತನಗೆ ಕಾಲಾವಕಾಶ ನೀಡುವಂತೆ ತನಿಖಾ ಸಂಸ್ಥೆಗೆ ಮನವಿ ಮಾಡಿದ್ದರು. ದೆಹಲಿಯ ಬಜೆಟ್ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಮತ್ತು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಹೆಚ್ಚು ಸಮಯಗಳ ಕಾಲ ಕೆಲಸ ಮಾಡುತ್ತಿದ್ದೇನೆ ಎಂದರು.

ಬಂಧನಕ್ಕೆ ಹೆದರುವುದಿಲ್ಲ, ಯಾವುದೇ ಪ್ರಶ್ನೆಗಳಿಂದ ಓಡಿಹೋಗುವುದಿಲ್ಲ ಎಂದಿದ್ದಾರೆ. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಇಲಾಖೆಯ ಉಸ್ತುವಾರಿ ಹೊಂದಿದ್ದಾರೆ. ಈ ಹಿಂದೆ ಕಳೆದ ವರ್ಷ ಅಕ್ಟೋಬರ್ 17ರಂದು ಸಿಸೋಡಿಯಾ ಅವರನ್ನು ವಿಚಾರಣೆ ನಡೆಸಲಾಯಿತು.

ಪ್ರಕರಣದಲ್ಲಿ ಅವರ ಮನೆ ಮತ್ತು ಬ್ಯಾಂಕ್ ಲಾಕರ್​ಗಳನ್ನು ಶೋಧಿಸಲಾಗಿತ್ತು. ದೆಹಲಿ ಅಬಕಾರಿ ನೀತಿ 2021-22ನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ದೊಡ್ಡ ಪಿತೂರಿ ಮತ್ತು ಪ್ರಕರಣದಲ್ಲಿ ಹಣ ಎಲ್ಲಿಂದ ಬಂತು ಎಂಬುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Liquor Policy Case: ಮದ್ಯ ನೀತಿ ಹಗರಣ ವಿಚಾರಣೆ, ಸಿಬಿಐನಿಂದ ಸಮಯ ಕೋರಿದ ಮನೀಶ್ ಸಿಸೋಡಿಯಾ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿದ ಸುಮಾರು ಮೂರು ತಿಂಗಳ ನಂತರ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕರೆಯಲಾಗಿದೆ. ಸಿಸೋಡಿಯಾ ಮತ್ತು ಇತರೆ ಶಂಕಿತರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಚಾರ್ಜ್​ಶೀಟ್​ನಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯ ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗಾಗಿ ಸಿಬಿಐ ಮುಂದೆ ಹಾಜರಾಗಲು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಮಯ ಕೋರಿದ್ದಾರೆ. ಫೆಬ್ರವರಿ 27ರ ನಂತರ ಹಾಜರಾಗುವುದಾಗಿ ಕೇಳಿದ್ದರು. ಇಂದು ಸಿಬಿಐನಿಂದ ವಿಚಾರಣೆಗಾಗಿ ನನಗೆ ನೋಟಿಸ್ ಬಂದಿದೆ, ದೆಹಲಿಯ ಬಜೆಟ್​ ಸಿದ್ಧಪಡಿಸುವ ಕಾರಣ ಫೆಬ್ರವರಿ ನಂತರ ಯಾವುದೇ ದಿನ ಸಮಯ ನೀಡುವಂತೆ ಅವರಿಗೆ ಮವಿ ಮಾಡಿದ್ದೇನೆ ಬಜೆಟ್ ತಯಾರಿ ಅಂತಿಮ ಹಂತದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Sun, 19 February 23

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ