AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

liquor Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ನ್ಯಾಯಾಲಯ

ಮದ್ಯದ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

liquor Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ನ್ಯಾಯಾಲಯ
ಮನೀಶ್ ಸಿಸೋಡಿಯಾ
ಅಕ್ಷಯ್​ ಪಲ್ಲಮಜಲು​​
|

Updated on:Mar 31, 2023 | 4:44 PM

Share

ದೆಹಲಿ: ಮದ್ಯದ ನೀತಿ ಪ್ರಕರಣಕ್ಕೆ (liquor Policy Case) ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ (Manish Sisodia) ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ವಿಚಾರಣೆಗೆ ಸಂಬಂಧಿಸಿದಂತೆ ತನಿಖೆಯ ಕೊನೆಯ ದಿನದಂದು ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರತಿನಿಧಿಸುವ ವಕೀಲರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕ್ಷಿಪ್ತ ಲಿಖಿತ ಸಲ್ಲಿಕೆಗಳು ಮತ್ತು ವಿಚಾರಣೆ ವರದಿಗಳನ್ನು ಸಲ್ಲಿಸಿದ ನಂತರ ನ್ಯಾಯಲಯದ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಕಳೆದ ವಾರ ಜಾಮೀನಿನ ಮೇಲಿನ ಆದೇಶವನ್ನು ಕಾಯ್ದಿರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರಿ ಮತ್ತು ಹಲವಾರು ಸಾಕ್ಷಿಗಳ ಹೇಳಿಕೆಯನ್ನೂ ಸಿಬಿಐ ಕೋರ್ಟ್​ಗೆ ಸಲ್ಲಿಸಿದೆ.

ಸಿಸೋಡಿಯಾ ಅವರು ತಮ್ಮ ಜಾಮೀನು ಅರ್ಜಿಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ತನಿಖೆಗಳನ್ನು ಈಗಾಗಲೇ ಮಾಡಿರುವುದರಿಂದ ಅವರನ್ನು ಕಸ್ಟಡಿಯಲ್ಲಿಡಲು ಯಾವುದೇ ಕಾರಣವಿಲ್ಲ ಹಾಗೂ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪುರಾವೆ ಪತ್ತೆಯಾಗದ ಕಾರಣ ಅವರನ್ನು ಈ ಪ್ರಕರಣದಿಂದ ಮುಕ್ತಗೊಳಿಸಬೇಕು ಎಂದು ಈ ಹಿಂದೆ ಹೇಳಿದ್ದಾರೆ. ಪ್ರಕರಣದ ಇತರ ಆರೋಪಿಗಳು ಈಗಾಗಲೇ ಜಾಮೀನು ಪಡೆದಿದ್ದಾರೆ ಎಂದು ಸೂಚಿಸಿದ ಅವರು, ಸಿಬಿಐ ಕರೆದ ಎಲ್ಲ ಸಮಯದಲ್ಲೂ ಅವರಿಗೆ ಸಹಕಾರ ನೀಡಿ, ತನಿಖೆಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Liquor Policy Case: 8 ಗಂಟೆಗಳ ವಿಚಾರಣೆ ಬಳಿಕ ಮನೀಶ್ ಸಿಸೋಡಿಯಾರನ್ನು ಬಂಧಿಸಿದ್ದು ಏಕೆ, ಸಿಬಿಐ ಹೇಳಿದ್ದಿಷ್ಟು

ಈ ಬಗ್ಗೆ ಪ್ರಶ್ನಿಸಿದ ಸಿಬಿಐ ಅವರಿಗೆ ಜಾಮೀನು ನೀಡಿದರೆ ಇದು ನಮ್ಮ ತನಿಖೆಗೆ ತೊಂದರೆಯಾಗುತ್ತದೆ. ಜೊತೆಗೆ ಈ ಪ್ರಕರಣಕ್ಕೆ ಬೇಕಾಗಿರುವ ಇನ್ನಷ್ಟು ಮಾಹಿತಿ ಸಿಗದೇ ಇರಬಹುದು. ಇದರಲ್ಲಿ ಪ್ರಭಾವಿಗಳ ಹಸ್ತಕ್ಷೇಪವು ಆಗಬಹುದು ಎಂದು ಸಿಬಿಐ ಪರ ವಕೀಲ ಡಿಪಿ ಸಿಂಗ್, ಸಿಸೋಡಿಯಾ ಅವರ ಮನವಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ಫೋನ್‌ಗಳನ್ನು ಅಪ್‌ಗ್ರೇಡ್ ಮಾಡಲು ಬಯಸಿದ್ದರಿಂದ, ಈಗಾಗಲೇ ಅವರು ಅದರಲ್ಲಿರುವ ದಾಖಲೆಗಳನ್ನು ಡಿಲಿಟ್ ಮಾಡುವ ಸಾಧ್ಯತೆಗಳು ಇದೆ ಎಂದು ಹೇಳಿದರು. ಆದರೆ ಇಲ್ಲಿಯವರೆಗೆ ಆ ರೀತಿಯ ಏನೂ ಆಗಲಿಲ್ಲ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Fri, 31 March 23

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ