AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ನೀತಿ ಪ್ರಕರಣ: ಫೆ.26ಕ್ಕೆ ಸಿಬಿಐ ಮುಂದೆ ಹಾಜರಾಗುವಂತೆ ಮನೀಶ್ ಸಿಸೋಡಿಯಾಗೆ ಸಮನ್ಸ್

ಮದ್ಯ ನೀತಿಯ ವಿಚಾರಣೆಗಾಗಿ ಭಾನುವಾರ,ಫೆ. 26ಕ್ಕೆ ಕೇಂದ್ರ ತನಿಖಾ ದಳದ ಮುಂದೆ ಹಾಜರಾಗುವಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತಿಳಿಸಲಾಗಿದೆ.

ಮದ್ಯ ನೀತಿ ಪ್ರಕರಣ: ಫೆ.26ಕ್ಕೆ ಸಿಬಿಐ ಮುಂದೆ ಹಾಜರಾಗುವಂತೆ ಮನೀಶ್ ಸಿಸೋಡಿಯಾಗೆ ಸಮನ್ಸ್
ಮನೀಶ್ ಸಿಸೋಡಿಯಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Feb 20, 2023 | 5:57 PM

Share

ದೆಹಲಿ: ಕೇಂದ್ರೀಯ ಸಂಸ್ಥೆ ತನಿಖೆ (CBI) ನಡೆಸುತ್ತಿರುವ, ದೆಹಲಿ ಈಗ ಹಿಂಪಡೆದಿರುವ ಮದ್ಯ ನೀತಿಯ(Liquor Policy Case) ವಿಚಾರಣೆಗಾಗಿ ಭಾನುವಾರ,ಫೆ. 26ಕ್ಕೆ ಕೇಂದ್ರ ತನಿಖಾ ದಳದ ಮುಂದೆ ಹಾಜರಾಗುವಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಹೇಳಲಾಗಿದೆ. ಸಿಸೋಡಿಯಾ ಅವರನ್ನು ನಿನ್ನೆ (ಭಾನುವಾರ) ಪ್ರಶ್ನಿಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಅವರು  ದೆಹಲಿ ಬಜೆಟ್ ಕಾರ್ಯದಲ್ಲಿ ಬ್ಯುಸಿಯಾಗಿದ್ದರಿಂದ ಅವರು ಹೆಚ್ಚಿನ ಸಮಯವನ್ನು ಕೋರಿದ್ದರು ಸಿಸೋಡಿಯಾ ಅವರು ಅರವಿಂದ ಕೇಜ್ರಿವಾಲ್ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ನಿಭಾಯಿಸುತ್ತಾರೆ.

ಅವರ ಮನವಿಗೆ ಸಮ್ಮತಿಸಿದ ಸಂಸ್ಥೆ, ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ಹೇಳಿತ್ತು.

“ಸಿಬಿಐ ನಾಳೆ ಮತ್ತೆ ನನಗೆ ಕರೆ ಮಾಡಿದೆ. ಅವರು ಸಿಬಿಐ ಮತ್ತು ಇಡಿಯ ಸಂಪೂರ್ಣ ಬಲವನ್ನು ಬಳಸಿದ್ದಾರೆ. ಅವರು ನನ್ನ ಮನೆ ಮೇಲೆ ದಾಳಿ ಮಾಡಿದರು, ನನ್ನ ಬ್ಯಾಂಕ್ ಲಾಕರ್‌ಗಳನ್ನು ಶೋಧಿಸಿದರು ಆದರೆ ನನ್ನ ವಿರುದ್ಧ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ದೆಹಲಿಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಿದ್ದೇನೆ. ಅವರು ನನ್ನ ಪ್ರಯತ್ನಗಳನ್ನು ನಿಲ್ಲಿಸಲು ಬಯಸುತ್ತಾರೆ. ನಾನು ಯಾವಾಗಲೂ ತನಿಖೆಗೆ ಸಹಕರಿಸಿದ್ದೇನೆ ಮತ್ತು ಅದನ್ನು ಮುಂದುವರಿಸುತ್ತೇನೆ ”ಎಂದು ಸಿಸೋಡಿಯಾ ಶನಿವಾರ ಟ್ವೀಟ್ ಮಾಡಿದ್ದರು.

“ಹಣಕಾಸು ಸಚಿವನಾಗಿ ಸಮಯಕ್ಕೆ ಸರಿಯಾಗಿ ಬಜೆಟ್ ಮಂಡಿಸುವುದು ನನ್ನ ಕರ್ತವ್ಯ ಮತ್ತು ಅದಕ್ಕಾಗಿ ನಾನು 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೇನೆ. ಫೆಬ್ರವರಿ ಕೊನೆಯ ವಾರದ ನಂತರ ಬಂದು ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಅವಕಾಶ ನೀಡುವಂತೆ ನಾನು ಸಿಬಿಐಗೆ ಮನವಿ ಮಾಡಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದರು.

ಕಳೆದ ವರ್ಷ ಅಕ್ಟೋಬರ್ 17 ರಂದು ದೆಹಲಿ ಉಪಮುಖ್ಯಮಂತ್ರಿ ಅವರನ್ನು ಪ್ರಶ್ನಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆ ಮತ್ತು ಬ್ಯಾಂಕ್ ಲಾಕರ್‌ಗಳನ್ನೂ ಸಿಬಿಐ ಶೋಧಿಸಿದೆ. ಸಿಸೋಡಿಯಾ ಮತ್ತು ಇತರ ಶಂಕಿತರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಚಾರ್ಜ್ ಶೀಟ್‌ನಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Mon, 20 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ