AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ನೀತಿ ಪ್ರಕರಣ: ಫೆ.26ಕ್ಕೆ ಸಿಬಿಐ ಮುಂದೆ ಹಾಜರಾಗುವಂತೆ ಮನೀಶ್ ಸಿಸೋಡಿಯಾಗೆ ಸಮನ್ಸ್

ಮದ್ಯ ನೀತಿಯ ವಿಚಾರಣೆಗಾಗಿ ಭಾನುವಾರ,ಫೆ. 26ಕ್ಕೆ ಕೇಂದ್ರ ತನಿಖಾ ದಳದ ಮುಂದೆ ಹಾಜರಾಗುವಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತಿಳಿಸಲಾಗಿದೆ.

ಮದ್ಯ ನೀತಿ ಪ್ರಕರಣ: ಫೆ.26ಕ್ಕೆ ಸಿಬಿಐ ಮುಂದೆ ಹಾಜರಾಗುವಂತೆ ಮನೀಶ್ ಸಿಸೋಡಿಯಾಗೆ ಸಮನ್ಸ್
ಮನೀಶ್ ಸಿಸೋಡಿಯಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Feb 20, 2023 | 5:57 PM

Share

ದೆಹಲಿ: ಕೇಂದ್ರೀಯ ಸಂಸ್ಥೆ ತನಿಖೆ (CBI) ನಡೆಸುತ್ತಿರುವ, ದೆಹಲಿ ಈಗ ಹಿಂಪಡೆದಿರುವ ಮದ್ಯ ನೀತಿಯ(Liquor Policy Case) ವಿಚಾರಣೆಗಾಗಿ ಭಾನುವಾರ,ಫೆ. 26ಕ್ಕೆ ಕೇಂದ್ರ ತನಿಖಾ ದಳದ ಮುಂದೆ ಹಾಜರಾಗುವಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ಹೇಳಲಾಗಿದೆ. ಸಿಸೋಡಿಯಾ ಅವರನ್ನು ನಿನ್ನೆ (ಭಾನುವಾರ) ಪ್ರಶ್ನಿಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಅವರು  ದೆಹಲಿ ಬಜೆಟ್ ಕಾರ್ಯದಲ್ಲಿ ಬ್ಯುಸಿಯಾಗಿದ್ದರಿಂದ ಅವರು ಹೆಚ್ಚಿನ ಸಮಯವನ್ನು ಕೋರಿದ್ದರು ಸಿಸೋಡಿಯಾ ಅವರು ಅರವಿಂದ ಕೇಜ್ರಿವಾಲ್ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ನಿಭಾಯಿಸುತ್ತಾರೆ.

ಅವರ ಮನವಿಗೆ ಸಮ್ಮತಿಸಿದ ಸಂಸ್ಥೆ, ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ಹೇಳಿತ್ತು.

“ಸಿಬಿಐ ನಾಳೆ ಮತ್ತೆ ನನಗೆ ಕರೆ ಮಾಡಿದೆ. ಅವರು ಸಿಬಿಐ ಮತ್ತು ಇಡಿಯ ಸಂಪೂರ್ಣ ಬಲವನ್ನು ಬಳಸಿದ್ದಾರೆ. ಅವರು ನನ್ನ ಮನೆ ಮೇಲೆ ದಾಳಿ ಮಾಡಿದರು, ನನ್ನ ಬ್ಯಾಂಕ್ ಲಾಕರ್‌ಗಳನ್ನು ಶೋಧಿಸಿದರು ಆದರೆ ನನ್ನ ವಿರುದ್ಧ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ದೆಹಲಿಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಿದ್ದೇನೆ. ಅವರು ನನ್ನ ಪ್ರಯತ್ನಗಳನ್ನು ನಿಲ್ಲಿಸಲು ಬಯಸುತ್ತಾರೆ. ನಾನು ಯಾವಾಗಲೂ ತನಿಖೆಗೆ ಸಹಕರಿಸಿದ್ದೇನೆ ಮತ್ತು ಅದನ್ನು ಮುಂದುವರಿಸುತ್ತೇನೆ ”ಎಂದು ಸಿಸೋಡಿಯಾ ಶನಿವಾರ ಟ್ವೀಟ್ ಮಾಡಿದ್ದರು.

“ಹಣಕಾಸು ಸಚಿವನಾಗಿ ಸಮಯಕ್ಕೆ ಸರಿಯಾಗಿ ಬಜೆಟ್ ಮಂಡಿಸುವುದು ನನ್ನ ಕರ್ತವ್ಯ ಮತ್ತು ಅದಕ್ಕಾಗಿ ನಾನು 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೇನೆ. ಫೆಬ್ರವರಿ ಕೊನೆಯ ವಾರದ ನಂತರ ಬಂದು ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಅವಕಾಶ ನೀಡುವಂತೆ ನಾನು ಸಿಬಿಐಗೆ ಮನವಿ ಮಾಡಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದರು.

ಕಳೆದ ವರ್ಷ ಅಕ್ಟೋಬರ್ 17 ರಂದು ದೆಹಲಿ ಉಪಮುಖ್ಯಮಂತ್ರಿ ಅವರನ್ನು ಪ್ರಶ್ನಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆ ಮತ್ತು ಬ್ಯಾಂಕ್ ಲಾಕರ್‌ಗಳನ್ನೂ ಸಿಬಿಐ ಶೋಧಿಸಿದೆ. ಸಿಸೋಡಿಯಾ ಮತ್ತು ಇತರ ಶಂಕಿತರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಚಾರ್ಜ್ ಶೀಟ್‌ನಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Mon, 20 February 23

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!