AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Policy Case: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.17 ರವರೆಗೆ ವಿಸ್ತರಣೆ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏ.17 ರವರೆಗೆ ವಿಸ್ತರಿಸಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Apr 03, 2023 | 5:59 PM

Share

ದೆಹಲಿ: ಮದ್ಯ ನೀತಿ ಪ್ರಕರಣಕ್ಕೆ (Liquor Policy Case) ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಎದುರಿಸುತ್ತಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ನ್ಯಾಯಾಂಗ ಬಂಧನವನ್ನು ಏ.17 ರವರೆಗೆ ವಿಸ್ತರಿಸಿದೆ ಎಂದು ರೋಸ್ ಅವೆನ್ಯೂ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಎಎಪಿ ನಾಯಕನ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತನಿಖೆಯು ಕೊನೆಯ ಹಂತದಲ್ಲಿದೆ ಎಂದು ಹೇಳಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಸುಮಾರು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಫೆಬ್ರವರಿ 26 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಬಂಧಿಸಿತ್ತು. ಇಡಿ ಅವರನ್ನು ಮಾರ್ಚ್ 9 ರಂದು ತಿಹಾರ್ ಜೈಲಿನಲ್ಲಿ ಬಂಧಿಸಿತು, 2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿಬಿಐ ಅವರನ್ನು ಬಂಧಿಸಲಾಗಿತ್ತು.

ಮನೀಷ್ ಸಿಸೋಡಿಯಾ ಅವರು ಸಿಬಿಐ ಕೇಳಿದ ಪ್ರಶ್ನೆಗಳಿಂದ ನುಣುಚಿಕೊಳ್ಳಲು ಸರಿಯಾದ ಉತ್ತರಗಳನ್ನು ನೀಡಿದ್ದರಿಂದ ಮತ್ತು ವ್ಯತಿರಿಕ್ತ ಸಾಕ್ಷ್ಯಾಧಾರಗಳಿದ್ದರು ಕೂಡ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದು, ಉದ್ಯಮಿಗಳಾದ ವಿಜಯ್ ನಾಯರ್, ಅಭಿಷೇಕ್ ಬೋನಪಲ್ಲಿ ಮತ್ತು ಇತರ ಐವರನ್ನು ಆರೋಪಿಗಳೆಂದು ಹೆಸರಿಸಿತ್ತು. ಅಬಕಾರಿ ಇಲಾಖೆಯ ಈ ಪ್ರಕರಣದ ಹೊಣೆ ಹೊತ್ತಿರುವ ಸಿಸೋಡಿಯಾ ಅವರನ್ನು ಆರೋಪಪಟ್ಟಿಯಲ್ಲಿ ಆರೋಪಿ ಎಂದು ಹೆಸರಿಸಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: liquor Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ನ್ಯಾಯಾಲಯ

ದೆಹಲಿ ಸರ್ಕಾರದ ಅಬಕಾರಿ ನೀತಿಯು ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ಅಕ್ರಮವಾಗಿ ಹಣ ಸಂಗ್ರಹಣೆ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ, ಅದಕ್ಕಾಗಿ ಲಂಚ ನೀಡಿದ ಆರೋಪದ ಕೆಲವು ವಿತರಕರನ್ನು ಕೂಡ ಬಂಧಿಸಿದೆ.

Published On - 2:47 pm, Mon, 3 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್