AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್ ಕೇಜ್ರಿವಾಲ್​ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತ

ಅರವಿಂದ್​ ಕೇಜ್ರಿವಾಲ್(Arvind Kejriwal)​ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ. ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ರನ್ನು ಬಂಧಿಸಿರುವ ಕಾರಣ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅರ್ಹರಲ್ಲ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ಅರವಿಂದ್ ಕೇಜ್ರಿವಾಲ್​ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತ
ಅರವಿಂದ್ ಕೇಜ್ರಿವಾಲ್ Image Credit source: India Today
Follow us
ನಯನಾ ರಾಜೀವ್
|

Updated on:May 13, 2024 | 12:12 PM

ಅರವಿಂದ್​ ಕೇಜ್ರಿವಾಲ್(Arvind Kejriwal)​ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ. ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ರನ್ನು ಬಂಧಿಸಿರುವ ಕಾರಣ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅರ್ಹರಲ್ಲ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಕೇಜ್ರಿವಾಲ್ ಅವರನ್ನು ಕೇಳುವ ಯಾವುದೇ ಕಾನೂನು ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅರ್ಜಿದಾರರಾದ ಎಎಪಿ ಮಾಜಿ ಶಾಸಕ ಸಂದೀಪ್ ಕುಮಾರ್ ಅವರಿಗೆ ಛೀಮಾರಿ ಹಾಕಿದ್ದ ದೆಹಲಿ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಅಲ್ಲದೆ, ನ್ಯಾಯಾಲಯವು ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡವನ್ನೂ ವಿಧಿಸಿತ್ತು. ನ್ಯಾಯಾಂಗ ವ್ಯವಸ್ಥೆಯನ್ನು ಗೇಲಿ ಮಾಡಬೇಡಿ ಎಂದು ಕಟ್ಟುನಿಟ್ಟಿನ ಧ್ವನಿಯಲ್ಲಿ ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

ಯಾವುದೇ ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಯಾವುದೇ ಅವಕಾಶವಿದೆಯೇ ಎಂದು ದೆಹಲಿ ಹೈಕೋರ್ಟ್ ಅರ್ಜಿದಾರರನ್ನು ಕೇಳಿತ್ತು. ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ಸಮಯವನ್ನು ಹಾಳು ಮಾಡುತ್ತಿದ್ದೀರಿ ಎಂದು ಪೀಠ ಹೇಳಿತ್ತು. ನಾವು ನಿಮಗೆ ಭಾರೀ ದಂಡವನ್ನು ವಿಧಿಸುತ್ತಿದ್ದೇವೆ.

ಮತ್ತಷ್ಟು ಓದಿ: ಉಚಿತ ವಿದ್ಯುತ್, ಆರೋಗ್ಯ, ಶಿಕ್ಷಣ; ಆಮ್ ಆದ್ಮಿ ಪಕ್ಷದ 10 ಗ್ಯಾರಂಟಿಗಳಿವು

ನ್ಯಾಯಾಲಯದ ಒಳಗೆ ರಾಜಕೀಯ ಭಾಷಣ ಮಾಡಬೇಡಿ, ಭಾಷಣ ಮಾಡಲು ಬೀದಿಯ ಯಾವುದೋ ಮೂಲೆಗೆ ಹೋಗಿ ಎಂದು ಖಾರವಾಗಿ ನುಡಿದಿತ್ತು.

ನಿಮ್ಮ ಅರ್ಜಿದಾರರು ರಾಜಕೀಯ ವ್ಯಕ್ತಿಗಳಾಗಿರುತ್ತಾರೆ, ಆದರೆ ನ್ಯಾಯಾಲಯವು ರಾಜಕೀಯ ಮಹತ್ವಾಕಾಂಕ್ಷೆಗಳ ಆಧಾರದ ಮೇಲೆ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:07 pm, Mon, 13 May 24

ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ