Arvind Kejriwal: ತಿಹಾರ್ ಜೈಲಿಗೆ ಅರವಿಂದ್ ಕೇಜ್ರಿವಾಲ್

ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರೂಸ್ ಅವೆನ್ಯೂ ಕೋರ್ಟ್ ಇಂದು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ನಂತರ ಅವರನ್ನು ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ.ಏತನ್ಮಧ್ಯೆ, ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರನ್ನು ಜೈಲಿಗೆ ಹಾಕುವುದೇ ಬಿಜೆಪಿಯ ಉದ್ದೇಶ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಆರೋಪಿಸಿದ್ದಾರೆ.

Arvind Kejriwal: ತಿಹಾರ್ ಜೈಲಿಗೆ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
|

Updated on:Apr 01, 2024 | 5:45 PM

ದೆಹಲಿ ಏಪ್ರಿಲ್ 01: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಇಂದು (ಸೋಮವಾರ) ರೂಸ್ ಅವೆನ್ಯೂ ಕೋರ್ಟ್ ಬಂಧನದ ಅವಧಿ ವಿಸ್ತರಿಸಿದ ನಂತರ, ಅವರನ್ನು ತಿಹಾರ್ ಜೈಲಿಗೆ (Tihar Jail) ಕರೆದೊಯ್ಯಲಾಗಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ (Liquor policy scam) ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸೋಮವಾರ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಏತನ್ಮಧ್ಯೆ, ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರನ್ನು ಜೈಲಿಗೆ ಹಾಕುವುದೇ ಬಿಜೆಪಿಯ ಉದ್ದೇಶ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಆರೋಪಿಸಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ಕೇಜ್ರಿವಾಲ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಹೇಳಿ ಹದಿನೈದು ದಿನಗಳ ನ್ಯಾಯಾಂಗ ಬಂಧನಕ್ಕೆ ಕೇಳಿತ್ತು. ಕೇಜ್ರಿವಾಲ್ ಜೈಲಿನಿಂದ ದೆಹಲಿ ಆಡಳಿತ ನಡೆಸುತ್ತಿದ್ದು, ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಆದೇಶಗಳನ್ನು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ರವಾನಿಸಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಕರೆತರಲಾಯಿತು. ಅವರನ್ನು ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗುವುದು. ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಕರೆದೊಯ್ಯಲಾಯಿತು. ಅವರನ್ನು ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗುವುದು” ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಜ್ರಿವಾಲ್​​ನ್ನು ಜೈಲಿಗೆ ಕರೆತರುತ್ತಿರುವುದು

ಇದೇ ಪ್ರಕರಣದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಂಧಿತರಾಗಿದ್ದ ಎಎಪಿ ನಾಯಕ ಸಂಜಯ್ ಸಿಂಗ್ ಅವರನ್ನು ಈ ಹಿಂದೆ ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗಿತ್ತು. ಆದರೆ ಇತ್ತೀಚೆಗೆ ಜೈಲು ಸಂಖ್ಯೆ 5 ಕ್ಕೆ ಸ್ಥಳಾಂತರಿಸಲಾಯಿತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ  ಕೇಜ್ರಿವಾಲ್ ಅವರ ಮಾಜಿ ಡೆಪ್ಯೂಟಿ ಮನೀಶ್ ಸಿಸೋಡಿಯಾ ಅವರನ್ನು ಜೈಲು ಸಂಖ್ಯೆ 1 ರಲ್ಲಿ ಇರಿಸಲಾಗಿದ್ದು, ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ಮಹಿಳಾ ಜೈಲಿನ ಜೈಲು ಸಂಖ್ಯೆ 6 ರಲ್ಲಿದ್ದಾರೆ.

ಹಿಂದಿನ ದಿನ, ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಡಿ ಕೇಜ್ರಿವಾಲ್ ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿದ್ದು, ಅವರು “ತನಿಖೆಗೆ ಸಹಕರಿಸುವುದಿಲ್ಲ” ಎಂದು ಹೇಳಿದ ನಂತರ ಬಂಧನ ಅವಧಿ ವಿಸ್ತರಿಸಲಾಗಿತ್ತು.

ತಿಹಾರ್ ಜೈಲಿನಲ್ಲಿ ಹೇಗಿರಲಿದೆ ಕೇಜ್ರಿವಾಲ್ ದಿನಚರಿ?

ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರ ದಿನಚರಿ ಅಂದರೆ  ಇತರ ಕೈದಿಗಳಂತೆ, ಕೇಜ್ರಿವಾಲ್ ಬೆಳಿಗ್ಗೆ 6:30 ರ ಸುಮಾರಿಗೆ  ಏಳುತ್ತಾರೆ. ನಂತರ ಕೈದಿಗಳಿಗೆ ಬೆಳಿಗ್ಗೆ 6:40 ರ ಸುಮಾರಿಗೆ ಉಪಹಾರವಾಗಿ ಚಹಾ ಮತ್ತು ಬ್ರೆಡ್  ನೀಡಲಾಗುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬೆಳಗಿನ ಸ್ನಾನ ನಂತರ ಇಡಿ ಕಸ್ಟಡಿಯಿಂದ ದೆಹಲಿ ಸರ್ಕಾರವನ್ನು ನಡೆಸುತ್ತಿರುವ ಕೇಜ್ರಿವಾಲ್ ಅವರು ವಿಚಾರಣೆಯನ್ನು ಹೊಂದಿದ್ದರೆ ಅಥವಾ ಅವರ ವಕೀಲರನ್ನು ಭೇಟಿ ಮಾಡಲು ನಿರ್ಧರಿಸಿದರೆ ನ್ಯಾಯಾಲಯಕ್ಕೆ ಹೋಗುತ್ತಾರೆ.

ಮಧ್ಯಾಹ್ನ 11 ಗಂಟೆಗೆ ಭೋಜನ  ದಾಲ್(ಸಾರು), ಸಬ್ಜಿ (ಪಲ್ಯ), ರೊಟ್ಟಿ ಮತ್ತು ಅನ್ನವನ್ನು ಒಳಗೊಂಡಿರುತ್ತದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ನಂತರ, ಕೈದಿಗಳು ತಮ್ಮ ಸೆಲ್‌ಗಳಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಇರಬೇಕಾಗುತ್ತದೆ.

ಇತರ ಕೈದಿಗಳಂತೆಯೇ ಎಎಪಿ ಸಂಚಾಲಕರಿಗೂ ಮಧ್ಯಾಹ್ನ 3:30 ಕ್ಕೆ ಚಹಾ ಮತ್ತು ಬಿಸ್ಕತ್ತುಗಳನ್ನು ನೀಡಲಾಗುತ್ತದೆ. ಸಂಜೆ 4 ಗಂಟೆಗೆ ವಕೀಲರೊಂದಿಗೆ ಸಭೆ ನಡೆಸಬಹುದು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಂತರ ಊಟ ನೀಡಿ 7 ಗಂಟೆಯ ಸುಮಾರಿಗೆ ಕೈದಿಗಳನ್ನು ಅವರ ಸೆಲ್​​ನೊಳಗೆ ಲಾಕ್ ಮಾಡಲಾಗುತ್ತದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಜೈಲಿನ ಊಟ ತಯಾರಿ ಅಥವಾ ಯಾವುದೇ ಚಟುವಟಿಕೆಗಳನ್ನು ನಿಗದಿಪಡಿಸದಿದ್ದಾಗ ಕೈದಿಗಳು ಬೆಳಿಗ್ಗೆ 5 ರಿಂದ ರಾತ್ರಿ 11 ರವರೆಗೆ ಟಿವಿ ವೀಕ್ಷಿಸಬಹುದು. ಸುದ್ದಿ, ಕ್ರೀಡೆ ಮತ್ತು ಮನರಂಜನೆಯ ಕೆಲವು ಚಾನೆಲ್‌ಗಳು ಮಾತ್ರ ಲಭ್ಯವಿದೆ ಎಂದು ಎನ್​​ಡಿಟಿವಿಹೇಳಿದೆ.

ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಿಬ್ಬಂದಿ ದಿನದ 24 ಗಂಟೆ ಲಭ್ಯವಿರುತ್ತಾರೆ. ಮಧುಮೇಹಿಯಾಗಿರುವ ಕೇಜ್ರಿವಾಲ್ ಅವರು ಜೈಲಿನಲ್ಲಿರುವ ಸಮಯದಲ್ಲಿ ನಿಯಮಿತವಾಗಿ ತಪಾಸಣೆಗೆ ಒಳಗಾಗುತ್ತಾರೆ. ಕೇಜ್ರಿವಾಲ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ವಕೀಲರು ಆಹಾರದ ನಿರ್ಬಂಧಗಳಿಗೆ ಒತ್ತಾಯಿಸಿದ್ದಾರೆ. ದೆಹಲಿ ಸಿಎಂ ವಾರಕ್ಕೆ ಎರಡು ಬಾರಿ ತಮ್ಮ ಕುಟುಂಬವನ್ನು ಭೇಟಿ ಮಾಡಬಹುದು. ಪೂರ್ವ ಅನುಮೋದಿತ ಪಟ್ಟಿಯಲ್ಲಿರುವ ಸದಸ್ಯರನ್ನು ಮಾತ್ರ ಭೇಟಿ ಮಾಡಬಹುದು ಎಂದು ಎನ್‌ಡಿಟಿವಿ ಹೇಳಿದೆ.

ಪತ್ರಕರ್ತೆ ನೀರ್ಜಾ ಚೌಧರಿ ಅವರ ‘ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್’ ಪುಸ್ತಕದ ಜೊತೆಗೆ ಹಿಂದೂ ಪುರಾಣ ಗ್ರಂಥಗಳಾದ ಭಗವದ್ಗೀತೆ ಮತ್ತು ರಾಮಾಯಣಬೇಕು ಎಂದು ಸಿಎಂಗೆ ಕೇಜ್ರಿವಾಲ್ ಪರ ವಕೀಲರು ಸೋಮವಾರ ಅನುಮತಿ ಕೋರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Mon, 1 April 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ