AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಂಪುಟದಲ್ಲಿ ಇಂದು ಸ್ಥಾನ ಪಡೆದಿದ್ದಾರೆ ಏಳು ವಿದ್ಯಾವಂತ ಮಹಿಳೆಯರು; ಸ್ತ್ರೀ ಸಬಲೀಕರಣವೇ ಆದ್ಯತೆ

ಮಹಿಳಾ ಸಬಲೀಕರಣಕ್ಕೆ ಸದಾ ಒತ್ತು ನೀಡುವ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಈಗಾಗಲೇ ಪ್ರಮುಖ ಖಾತೆಗಳನ್ನು ಮಹಿಳೆಯರಿಗೆ ನೀಡಿದ್ದಾರೆ.

ಪ್ರಧಾನಿ ಮೋದಿ ಸಂಪುಟದಲ್ಲಿ ಇಂದು ಸ್ಥಾನ ಪಡೆದಿದ್ದಾರೆ ಏಳು ವಿದ್ಯಾವಂತ ಮಹಿಳೆಯರು; ಸ್ತ್ರೀ ಸಬಲೀಕರಣವೇ ಆದ್ಯತೆ
ಮೀನಾಕ್ಷಿ ಲೇಖಿ ಮತ್ತು ಅನುಪ್ರಿಯಾ ಪಟೇಲ್​
TV9 Web
| Edited By: |

Updated on:Jul 07, 2021 | 9:03 PM

Share

ಇಂದು ನರೇಂದ್ರ ಮೋದಿಯವರು ಸಚಿವ ಸಂಪುಟ ಮರುರಚನೆ ಮಾಡಿದ್ದಾರೆ. ಹಲವು ಹೊಸಬರಿಗೆ ಕೇಂದ್ರದ ಮಂತ್ರಿಪಟ್ಟ ಒಲಿದಿದೆ. ಹಾಗೇ ಏಳು ಮಹಿಳಾ ಸಂಸದರು ಹೊಸದಾಗಿ ಮೋದಿ ಕ್ಯಾಬಿನೆಟ್​ ಸೇರಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಸದಾ ಒತ್ತು ನೀಡುವ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಈಗಾಗಲೇ ಪ್ರಮುಖ ಖಾತೆಗಳನ್ನು ಮಹಿಳೆಯರಿಗೆ ನೀಡಿದ್ದಾರೆ. ಈ ಬಾರಿಯೂ ಏಳು ಮಹಿಳೆಯರು ಮೋದಿ ಕ್ಯಾಬಿನೆಟ್ ಸೇರಿದ್ದಾರೆ.

ಇಲ್ಲಿದೆ ನೋಡಿ ಹೊಸದಾಗಿ ಪ್ರಧಾನಿ ಮೋದಿ ಸಂಪುಟ ಸೇರಿದ ಮಹಿಳಾ ಸಂಸದರು..

ಮೀನಾಕ್ಷಿ ಲೇಖಿ ಮೀನಾಕ್ಷಿ ಲೇಖಿ ವೃತ್ತಿಯಲ್ಲಿ ವಕೀಲರಾಗಿದ್ದು, ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿಯೂ ಕೆಲಸ ಮಾಡಿದ್ದಾರೆ. ದೆಹಲಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಇವರೀಗ ಕೇಂದ್ರ ಮಂತ್ರಿ. ರಾಷ್ಟ್ರೀಯ ಮಹಿಳಾ ಆಯೋಗ ಸೇರಿ ಹಲವು ಸಂಘ-ಸಂಸ್ಥೆಗಳೊಟ್ಟಿಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.

ಅನುಪ್ರಿಯಾ ಸಿಂಗ್​ ಪಟೇಲ್​ ಉತ್ತರಪ್ರದೇಶದ ಬಿಜೆಪಿ ಮೈತ್ರಿ ಪಕ್ಷ ಅಪ್ನಾ ದಳದ ಸಂಸದೆ ಇವರು. 2019ರ ಲೋಕಸಭಾ ಚುನಾವಣೆಯಲ್ಲಿ ಮಿರ್ಜಾಪುರ್​ನಿಂದ ಗೆದ್ದಿದ್ದಾರೆ. ಇವರು ಅಪ್ನಾ ದಳದ ಅಧ್ಯಕ್ಷರಾಗಿದ್ದ ದಿವಂಗತ ಸೋನಿಲಾಲ್​ ಪಟೇಲ್​ರ ಪುತ್ರಿ. ಕೇವಲ 40ವರ್ಷದ ಅನುಪ್ರಿಯಾ ಸಿಂಗ್​ ದೆಹಲಿ ವಿಶ್ವವಿದ್ಯಾಲಯ ಮತ್ತು ಉತ್ತರಪ್ರದೇಶದ ಛತ್ರಪತಿ ಶಹುಜಿ ಮಹಾರಾಜ್​ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದಾರೆ.

ಶೋಭಾ ಕರಂದ್ಲಾಜೆ ಇವರು ಕರ್ನಾಟಕದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ. ಓಪನ್​ ಯೂನಿವರ್ಸಿಟಿಯಲ್ಲಿ ಎಂಎಸ್​ಡಬ್ಲ್ಯೂ ಮಾಡಿದ್ದಾರೆ. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಉನ್ನತ ಇಲಾಖೆಗಳನ್ನು ನಿಭಾಯಿಸಿದ ಅನುಭವಿ ರಾಜಕಾರಣಿ

ದರ್ಶನಾ ವಿಕ್ರಮ್​ ಜರ್ದೋಷ್​ ಇವರು ಗುಜರಾತ್​​ನ ಸೂರತ್ ಲೋಕಸಭಾ ಕ್ಷೇತ್ರದ ಸಂಸದೆ. ಹಾಗೇ, ಹಣಕಾಸು ಸ್ಥಾಯಿಸಮಿತಿ ಸದಸ್ಯೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಮಾಲೋಚನಾ ಸಮಿತಿ ಸದಸ್ಯೆಯೂ ಹೌದು. ಬಿಜೆಪಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದವರು.

ಅನ್ನಪೂರ್ಣಾ ದೇವಿ ಜಾರ್ಖಂಡ್​ನ ಕೊಡೆರ್ಮಾ ಲೋಕಸಭಾ ಕ್ಷೇತ್ರದ ಸಂಸದೆ ಅನ್ನಪೂರ್ಣಾ ದೇವಿಯವರು ಈ ಬಾರಿ ಪ್ರಧಾನಿ ಮೋದಿ ಸಂಪುಟ ಸೇರಿದ್ದಾರೆ. ಇವರು ಮಹಿಳಾ ಸಬಲೀಕರಣ ಸ್ಥಾಯಿ ಸಮಿತಿ ಸದಸ್ಯೆ ಮತ್ತು ವಿದ್ಯುತ್ ಸಚಿವಾಲಯ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯೆಯಾಗಿದ್ದರು. 1998ರಿಂದ 2000ರವರೆಗೆ ಬಿಹಾರ ವಿಧಾನಸಭೆಯ ಸದಸ್ಯೆಯಾಗಿದ್ದರು.

ಪ್ರತಿಮಾ ಭೌಮಿಕ್​ ಪೂರ್ವ ತ್ರಿಪುರಾ ಲೋಕಸಭಾ ಕ್ಷೇತ್ರದ ಸಂಸದೆ ಪ್ರತಿಮಾ ಭೌಮಿಕ್​ ಮೂಲತಃ ಕೃಷಿಕರು. ರಾಜಕೀಯಕ್ಕೆ ಬರುವುದಕ್ಕೂ ಮೊದಲು ಕೃಷಿ ಮಾಡುತ್ತಿದ್ದರು. ಸದ್ಯ ರೈಲ್ವೆ ಇಲಾಖೆ ಸಲಹಾ ಸಮಿತಿಯ ಸದಸ್ಯರಾಗಿದ್ದರು.

ಭಾರತಿ ಪ್ರವೀಣ್​ ಪವಾರ್​ ಭಾರತಿ ಪ್ರವೀಣ್​ ಪವಾರ್​ ಅವರು ಮಹಾರಾಷ್ಟ್ರದ ದಿಂಡೋರಿ ಲೋಕಸಭಾ ಕ್ಷೇತ್ರದ ಸಂಸದೆ. NDMVPS ವೈದ್ಯಕೀಯ ಕಾಲೇಜಿನಲ್ಲಿ ಸರ್ಜರಿಯಲ್ಲಿ ಎಂಬಿಬಿಎಸ್​ ಓದಿದ್ದಾರೆ. ಕೌಶಲಾಭಿವೃದ್ಧಿ ಮತ್ತು ಉದ್ಯಮ ಇಲಾಖೆ ಸಲಹಾ ಸಮಿತಿಯ ಸದಸ್ಯೆಯಾಗಿದ್ದರು.

ಇದನ್ನೂ ಓದಿ: Shobha Karandlaje: ನಗುಮುಖದ ಗಟ್ಟಿಗಿತ್ತಿ, ಹಿಂದುತ್ವ ಪರ ಚಿಂತನೆಯ ಮಹಿಳಾ ದನಿ ಶೋಭಾ ಕರಂದ್ಲಾಜೆ

List of women leaders who inducted as ministers in the PM Narendra Modi Cabinet

Published On - 9:03 pm, Wed, 7 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ