AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಂಪುಟದಲ್ಲಿ ಇಂದು ಸ್ಥಾನ ಪಡೆದಿದ್ದಾರೆ ಏಳು ವಿದ್ಯಾವಂತ ಮಹಿಳೆಯರು; ಸ್ತ್ರೀ ಸಬಲೀಕರಣವೇ ಆದ್ಯತೆ

ಮಹಿಳಾ ಸಬಲೀಕರಣಕ್ಕೆ ಸದಾ ಒತ್ತು ನೀಡುವ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಈಗಾಗಲೇ ಪ್ರಮುಖ ಖಾತೆಗಳನ್ನು ಮಹಿಳೆಯರಿಗೆ ನೀಡಿದ್ದಾರೆ.

ಪ್ರಧಾನಿ ಮೋದಿ ಸಂಪುಟದಲ್ಲಿ ಇಂದು ಸ್ಥಾನ ಪಡೆದಿದ್ದಾರೆ ಏಳು ವಿದ್ಯಾವಂತ ಮಹಿಳೆಯರು; ಸ್ತ್ರೀ ಸಬಲೀಕರಣವೇ ಆದ್ಯತೆ
ಮೀನಾಕ್ಷಿ ಲೇಖಿ ಮತ್ತು ಅನುಪ್ರಿಯಾ ಪಟೇಲ್​
TV9 Web
| Edited By: |

Updated on:Jul 07, 2021 | 9:03 PM

Share

ಇಂದು ನರೇಂದ್ರ ಮೋದಿಯವರು ಸಚಿವ ಸಂಪುಟ ಮರುರಚನೆ ಮಾಡಿದ್ದಾರೆ. ಹಲವು ಹೊಸಬರಿಗೆ ಕೇಂದ್ರದ ಮಂತ್ರಿಪಟ್ಟ ಒಲಿದಿದೆ. ಹಾಗೇ ಏಳು ಮಹಿಳಾ ಸಂಸದರು ಹೊಸದಾಗಿ ಮೋದಿ ಕ್ಯಾಬಿನೆಟ್​ ಸೇರಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಸದಾ ಒತ್ತು ನೀಡುವ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಈಗಾಗಲೇ ಪ್ರಮುಖ ಖಾತೆಗಳನ್ನು ಮಹಿಳೆಯರಿಗೆ ನೀಡಿದ್ದಾರೆ. ಈ ಬಾರಿಯೂ ಏಳು ಮಹಿಳೆಯರು ಮೋದಿ ಕ್ಯಾಬಿನೆಟ್ ಸೇರಿದ್ದಾರೆ.

ಇಲ್ಲಿದೆ ನೋಡಿ ಹೊಸದಾಗಿ ಪ್ರಧಾನಿ ಮೋದಿ ಸಂಪುಟ ಸೇರಿದ ಮಹಿಳಾ ಸಂಸದರು..

ಮೀನಾಕ್ಷಿ ಲೇಖಿ ಮೀನಾಕ್ಷಿ ಲೇಖಿ ವೃತ್ತಿಯಲ್ಲಿ ವಕೀಲರಾಗಿದ್ದು, ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿಯೂ ಕೆಲಸ ಮಾಡಿದ್ದಾರೆ. ದೆಹಲಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಇವರೀಗ ಕೇಂದ್ರ ಮಂತ್ರಿ. ರಾಷ್ಟ್ರೀಯ ಮಹಿಳಾ ಆಯೋಗ ಸೇರಿ ಹಲವು ಸಂಘ-ಸಂಸ್ಥೆಗಳೊಟ್ಟಿಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.

ಅನುಪ್ರಿಯಾ ಸಿಂಗ್​ ಪಟೇಲ್​ ಉತ್ತರಪ್ರದೇಶದ ಬಿಜೆಪಿ ಮೈತ್ರಿ ಪಕ್ಷ ಅಪ್ನಾ ದಳದ ಸಂಸದೆ ಇವರು. 2019ರ ಲೋಕಸಭಾ ಚುನಾವಣೆಯಲ್ಲಿ ಮಿರ್ಜಾಪುರ್​ನಿಂದ ಗೆದ್ದಿದ್ದಾರೆ. ಇವರು ಅಪ್ನಾ ದಳದ ಅಧ್ಯಕ್ಷರಾಗಿದ್ದ ದಿವಂಗತ ಸೋನಿಲಾಲ್​ ಪಟೇಲ್​ರ ಪುತ್ರಿ. ಕೇವಲ 40ವರ್ಷದ ಅನುಪ್ರಿಯಾ ಸಿಂಗ್​ ದೆಹಲಿ ವಿಶ್ವವಿದ್ಯಾಲಯ ಮತ್ತು ಉತ್ತರಪ್ರದೇಶದ ಛತ್ರಪತಿ ಶಹುಜಿ ಮಹಾರಾಜ್​ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದಾರೆ.

ಶೋಭಾ ಕರಂದ್ಲಾಜೆ ಇವರು ಕರ್ನಾಟಕದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ. ಓಪನ್​ ಯೂನಿವರ್ಸಿಟಿಯಲ್ಲಿ ಎಂಎಸ್​ಡಬ್ಲ್ಯೂ ಮಾಡಿದ್ದಾರೆ. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಉನ್ನತ ಇಲಾಖೆಗಳನ್ನು ನಿಭಾಯಿಸಿದ ಅನುಭವಿ ರಾಜಕಾರಣಿ

ದರ್ಶನಾ ವಿಕ್ರಮ್​ ಜರ್ದೋಷ್​ ಇವರು ಗುಜರಾತ್​​ನ ಸೂರತ್ ಲೋಕಸಭಾ ಕ್ಷೇತ್ರದ ಸಂಸದೆ. ಹಾಗೇ, ಹಣಕಾಸು ಸ್ಥಾಯಿಸಮಿತಿ ಸದಸ್ಯೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಮಾಲೋಚನಾ ಸಮಿತಿ ಸದಸ್ಯೆಯೂ ಹೌದು. ಬಿಜೆಪಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದವರು.

ಅನ್ನಪೂರ್ಣಾ ದೇವಿ ಜಾರ್ಖಂಡ್​ನ ಕೊಡೆರ್ಮಾ ಲೋಕಸಭಾ ಕ್ಷೇತ್ರದ ಸಂಸದೆ ಅನ್ನಪೂರ್ಣಾ ದೇವಿಯವರು ಈ ಬಾರಿ ಪ್ರಧಾನಿ ಮೋದಿ ಸಂಪುಟ ಸೇರಿದ್ದಾರೆ. ಇವರು ಮಹಿಳಾ ಸಬಲೀಕರಣ ಸ್ಥಾಯಿ ಸಮಿತಿ ಸದಸ್ಯೆ ಮತ್ತು ವಿದ್ಯುತ್ ಸಚಿವಾಲಯ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯೆಯಾಗಿದ್ದರು. 1998ರಿಂದ 2000ರವರೆಗೆ ಬಿಹಾರ ವಿಧಾನಸಭೆಯ ಸದಸ್ಯೆಯಾಗಿದ್ದರು.

ಪ್ರತಿಮಾ ಭೌಮಿಕ್​ ಪೂರ್ವ ತ್ರಿಪುರಾ ಲೋಕಸಭಾ ಕ್ಷೇತ್ರದ ಸಂಸದೆ ಪ್ರತಿಮಾ ಭೌಮಿಕ್​ ಮೂಲತಃ ಕೃಷಿಕರು. ರಾಜಕೀಯಕ್ಕೆ ಬರುವುದಕ್ಕೂ ಮೊದಲು ಕೃಷಿ ಮಾಡುತ್ತಿದ್ದರು. ಸದ್ಯ ರೈಲ್ವೆ ಇಲಾಖೆ ಸಲಹಾ ಸಮಿತಿಯ ಸದಸ್ಯರಾಗಿದ್ದರು.

ಭಾರತಿ ಪ್ರವೀಣ್​ ಪವಾರ್​ ಭಾರತಿ ಪ್ರವೀಣ್​ ಪವಾರ್​ ಅವರು ಮಹಾರಾಷ್ಟ್ರದ ದಿಂಡೋರಿ ಲೋಕಸಭಾ ಕ್ಷೇತ್ರದ ಸಂಸದೆ. NDMVPS ವೈದ್ಯಕೀಯ ಕಾಲೇಜಿನಲ್ಲಿ ಸರ್ಜರಿಯಲ್ಲಿ ಎಂಬಿಬಿಎಸ್​ ಓದಿದ್ದಾರೆ. ಕೌಶಲಾಭಿವೃದ್ಧಿ ಮತ್ತು ಉದ್ಯಮ ಇಲಾಖೆ ಸಲಹಾ ಸಮಿತಿಯ ಸದಸ್ಯೆಯಾಗಿದ್ದರು.

ಇದನ್ನೂ ಓದಿ: Shobha Karandlaje: ನಗುಮುಖದ ಗಟ್ಟಿಗಿತ್ತಿ, ಹಿಂದುತ್ವ ಪರ ಚಿಂತನೆಯ ಮಹಿಳಾ ದನಿ ಶೋಭಾ ಕರಂದ್ಲಾಜೆ

List of women leaders who inducted as ministers in the PM Narendra Modi Cabinet

Published On - 9:03 pm, Wed, 7 July 21

Follow Us
TV9 Web
TV9 Web

TV9 Kannada

Read More
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?