AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಐ ಎನ್​ವಿ ರಮಣ ನಿವೃತ್ತಿ ಹಿನ್ನೆಲೆ; ಸುಪ್ರೀಂ ಕೋರ್ಟ್​ ಇತಿಹಾಸದಲ್ಲೇ ಮೊದಲ ಬಾರಿಗೆ ಕಲಾಪದ ನೇರ ಪ್ರಸಾರ

ಶನಿವಾರ (ಆ. 27) ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಅಧಿಕಾರ ಸ್ವೀಕರಿಸಲಿದ್ದಾರೆ.

ಸಿಜೆಐ ಎನ್​ವಿ ರಮಣ ನಿವೃತ್ತಿ ಹಿನ್ನೆಲೆ; ಸುಪ್ರೀಂ ಕೋರ್ಟ್​ ಇತಿಹಾಸದಲ್ಲೇ ಮೊದಲ ಬಾರಿಗೆ ಕಲಾಪದ ನೇರ ಪ್ರಸಾರ
ಎನ್‌ವಿ ರಮಣ
TV9 Web
| Edited By: |

Updated on: Aug 26, 2022 | 11:27 AM

Share

ನವದೆಹಲಿ: ಭಾರತದ ಸುಪ್ರೀಂ ಕೋರ್ಟ್​ನ (Supreme Court) ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ನ್ಯಾಯಪೀಠದ ಕಲಾಪಗಳನ್ನು ನೇರ ಪ್ರಸಾರ ಮಾಡಲಾಗುತ್ತದೆ. ನ್ಯಾಯಮೂರ್ತಿ ಎನ್​ವಿ ರಮಣ (NV Ramana) ಅವರು ನಿವೃತ್ತಿಯ ವಯಸ್ಸನ್ನು ತಲುಪಿದ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ನಿವೃತ್ತರಾಗಲಿದ್ದಾರೆ. ಇಂದು ಅವರು ನಿಯೋಜಿತ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರೊಂದಿಗೆ ಪೀಠವನ್ನು ಹಂಚಿಕೊಳ್ಳಲಿದ್ದಾರೆ.

ಶನಿವಾರ (ಆ. 27) ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಅಧಿಕಾರ ಸ್ವೀಕರಿಸಲಿದ್ದಾರೆ. ನಿವೃತ್ತಿಯ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ್ದ ನ್ಯಾ. ಎನ್​ವಿ ರಮಣ, ನಾನು ಎಲ್ಲ ರೀತಿಯಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ನನ್ನ ಕರ್ತವ್ಯಗಳನ್ನು ನಿರ್ವಹಿಸಿದ್ದೇನೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಗೆ ಬಹುತೇಕ ಎಲ್ಲ ಹೆಸರನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದ್ದರು. ನಾನು ಮುಖ್ಯ ನ್ಯಾಯಮೂರ್ತಿಯಾಗಿ ನನ್ನ ಕರ್ತವ್ಯವನ್ನು ಸಾಧ್ಯವಿರುವ ರೀತಿಯಲ್ಲಿ ನಿರ್ವಹಿಸಿದ್ದೇನೆ. ಬಾರ್‌ನ ಪ್ರತಿಯೊಬ್ಬ ಸದಸ್ಯರು, ವಿಶೇಷವಾಗಿ ದೆಹಲಿಯಲ್ಲಿ ಒಗ್ಗಟ್ಟಿನಿಂದ ನಿಂತು ನನ್ನನ್ನು ಬೆಂಬಲಿಸುವ ನಿರ್ಣಯವನ್ನು ಅಂಗೀಕರಿಸಿದ್ದಾರೆ. ಇಂತಹ ಬೆಂಬಲವನ್ನು ಪಡೆಯಲು ನನಗೆ ತುಂಬಾ ಹೆಮ್ಮೆ ಮತ್ತು ಸಂತೋಷವಾಗುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಸಿಜೆಐ ಎನ್​ವಿ ರಮಣ ಇಂದು ನಿವೃತ್ತಿ; ಹಲವು ಐತಿಹಾಸಿಕ ತೀರ್ಪು, ಇನ್ನೂ ಹಲವು ಮುಖ್ಯ ಪ್ರಕರಣಗಳು ಬಾಕಿ

ಸುಪ್ರೀಂ ಕೋರ್ಟ್ ಮತ್ತು ಕೊಲಿಜಿಯಂನಲ್ಲಿ ನನ್ನ ಸಹೋದರ ಮತ್ತು ಸಹೋದರಿ ನ್ಯಾಯಾಧೀಶರು ನೀಡಿದ ಬೆಂಬಲಕ್ಕೆ ಧನ್ಯವಾದಗಳು. ನಾವು ಹೈಕೋರ್ಟ್‌ಗಳಲ್ಲಿ ಸುಮಾರು 224 ನ್ಯಾಯಮೂರ್ತಿಗಳನ್ನು ನೇಮಕ ಮಾಡಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಹೇಳಿದ್ದರು.

ಈ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಕೌಲ್, ಇಂದಿರಾ ಬ್ಯಾನರ್ಜಿ, ಸಂಜೀವ್ ಖನ್ನಾ, ಎಸ್ ರವೀಂದ್ರ ಭಟ್ ಮತ್ತು ಹಿಮಾ ಕೊಹ್ಲಿ, ದೆಹಲಿ ಹೈಕೋರ್ಟ್‌ನ ಎಲ್ಲಾ ಮಾಜಿ ನ್ಯಾಯಾಧೀಶರು ಮತ್ತು ಹೈಕೋರ್ಟ್‌ನ ನ್ಯಾಯಾಧೀಶರು ಮತ್ತು ಬಾರ್‌ನ ಸದಸ್ಯರು ಭಾಗವಹಿಸಿದ್ದರು. ನಾವು ಸುಪ್ರೀಂ ಕೋರ್ಟ್‌ನಲ್ಲಿ ದೆಹಲಿಯನ್ನು ಪ್ರತಿನಿಧಿಸುವ ಆರು ಜನರಿದ್ದೇವೆ. ನಾನು ನಿವೃತ್ತಿಯಾಗುತ್ತಿದ್ದರೂ ದೆಹಲಿಯಿಂದ ಇನ್ನೂ ಐವರು ಪ್ರತಿನಿಧಿಗಳಿದ್ದಾರೆ. ಶೀಘ್ರದಲ್ಲೇ ಇನ್ನೂ ಕೆಲವು ಪ್ರತಿನಿಧಿಗಳು ಸೇರುತ್ತಾರೆ ಎಂದು ನನಗೆ ಭರವಸೆಯಿದೆ ಎಂದು ಸಿಜೆಐ ಎನ್​ವಿ ರಮಣ ಹೇಳಿದ್ದರು.

ದೆಹಲಿ ಹೈಕೋರ್ಟ್​ನ ವಿಶಿಷ್ಟ ಲಕ್ಷಣಗಳು ಮತ್ತು ವಿಶೇಷತೆಗಳು ಮತ್ತು ಅದರ ವ್ಯಾಜ್ಯಗಳ ಪ್ರಮಾಣವನ್ನು ಬೇರೆ ಯಾವುದೇ ಹೈಕೋರ್ಟ್‌ನೊಂದಿಗೆ ಹೋಲಿಸಲಾಗುವುದಿಲ್ಲ. ದೆಹಲಿ ಹೈಕೋರ್ಟ್ ನ್ಯಾಯಾಧೀಶರು ರಾತ್ರಿ 7-8 ಗಂಟೆಯವರೆಗೆ ಚೇಂಬರ್‌ನಲ್ಲಿ ಶ್ರಮಿಸುತ್ತಿದ್ದರು. ಅವರು ಬೆಳಿಗ್ಗೆ ಬರುತ್ತಾರೆ, ಕೆಲವೊಮ್ಮೆ ರಾತ್ರಿ 8ರಿಂದ 9 ಗಂಟೆಯವರೆಗೆ ಕೆಲಸ ಮಾಡುತ್ತಾರೆ ಎಂದು ಎನ್​ವಿ ರಮಣ ಶ್ಲಾಘಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?