AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Livestream: ಮೊಟ್ಟ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ವಿಚಾರಣೆಗಳ ನೇರಪ್ರಸಾರ

ಸುಪ್ರೀಂ ಕೋರ್ಟ್ ಮೊಟ್ಟ ಮೊದಲ ಬಾರಿಗೆ ಇಂದು ಕೋರ್ಟ್​ನಲ್ಲಿ ನಡೆಯುವ ವಿಚಾರಣೆಗಳನ್ನು ಲೈವ್‌ಸ್ಟ್ರೀಮ್ ನೇರಪ್ರಸಾರ ಮಾಡಲಾಯಿತು. ಸುಪ್ರೀಂನಲ್ಲಿ ಹಗಲಿನಲ್ಲಿ ಲೈವ್‌ಸ್ಟ್ರೀಮ್ ಮಾಡಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಇದನ್ನು ಆನ್‌ಲೈನ್‌ನಲ್ಲಿ ನೋಡಬಹುದು.

Livestream: ಮೊಟ್ಟ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ವಿಚಾರಣೆಗಳ ನೇರಪ್ರಸಾರ
Supreme Court
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 27, 2022 | 2:47 PM

Share

ಮೊಟ್ಟ ಮೊದಲ ಬಾರಿಗೆ ಇಂದು ಸುಪ್ರೀಂ ಕೋರ್ಟ್​ನಲ್ಲಿ ನಡೆಯುವ ವಿಚಾರಣೆಗಳನ್ನು ಲೈವ್‌ಸ್ಟ್ರೀಮ್ ನೇರಪ್ರಸಾರ ಮಾಡಲಾಯಿತು. ಸುಪ್ರೀಂನಲ್ಲಿ ಹಗಲಿನಲ್ಲಿ ಲೈವ್‌ಸ್ಟ್ರೀಮ್ ಮಾಡಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಇದನ್ನು ಆನ್‌ಲೈನ್‌ನಲ್ಲಿ ನೋಡಬಹುದು. ಲೈವ್‌ಸ್ಟ್ರೀಮ್ ಮಾಡಲು ನಿರ್ಧರಿಸಲಾದ ಮೂರು ಪ್ರಕರಣಗಳಲ್ಲಿ, ಒಂದು ಪ್ರಕರಣವು ಮಹಾರಾಷ್ಟ್ರ ಟೀಮ್ ಉದ್ಧವ್ ಠಾಕ್ರೆ ಟೀಮ್ ಏಕನಾಥ್ ಶಿಂಧೆ ವಿರುದ್ಧ – ಶಿವಸೇನೆ ಹೆಸರಿನ ಬಗ್ಗೆ ಈಗಾಗಲೇ ಚುನಾವಣಾ ಆಯೋಗವು ಈ ವಿಷಯದಲ್ಲಿ ಪ್ರಸ್ತಾವನೆಯನ್ನು ಮಾಡಲಾಗಿದ್ದು. ಈ ಪ್ರಕರಣದ ಬಗ್ಗೆ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸುವುದನ್ನು ಕಾಣಬಹುದು – ಇದು ನೇರ ಪ್ರಸಾರವಾದ ಎರಡನೇ ವಿಚಾರಣೆಯಾಗಿದೆ.

ನಾಲ್ಕು ವರ್ಷಗಳ ಹಿಂದೆಯೇ ಲೈವ್ ಸ್ಟ್ರೀಮಿಂಗ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಲೈವ್ ವಾದಗಳನ್ನು ನೋಡಲು ಒಬ್ಬರು ಈ URL ಅನ್ನು ಬಳಸಬಹುದು webcast.gov.in/scindia/. 2018 ರಲ್ಲಿ ಆ ಸಮಯದಲ್ಲಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ನೇರ ಪ್ರಸಾರ ಮಾಡುವಂತೆ ಸೆಪ್ಟೆಂಬರ್ 27 ರಂದು ಮಹತ್ವದ ತೀರ್ಪು ನೀಡಿದ್ದರು. ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರನ್ನು ಒಳಗೊಂಡ ಪೂರ್ಣ ನ್ಯಾಯಾಲಯವು ಸೆಪ್ಟೆಂಬರ್ 20ರಂದು ಈ ವಿಷಯವನ್ನು ಚರ್ಚಿಸಿತು ಮತ್ತು ಈ ವಾರದಿಂದ ಸಾಂವಿಧಾನಿಕ ಪೀಠದ ವಿಚಾರಣೆಯನ್ನು ಲೈವ್-ಸ್ಟ್ರೀಮ್ ಮಾಡಲು ನಿರ್ಧಾರವನ್ನು ತೆಗೆದುಕೊಂಡಿತು. ಫುಲ್ ಕೋರ್ಟ್ ಸಭೆಯ ಅಧ್ಯಕ್ಷತೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಉದಯ್ ಉಮೇಶ್ ಲಲಿತ್ ವಹಿಸಿದ್ದರು, ಇದರಲ್ಲಿ ಎಲ್ಲಾ ನ್ಯಾಯಾಧೀಶರು ಸಾಂವಿಧಾನಿಕ ಪ್ರಕರಣಗಳನ್ನು ಪ್ರಸಾರ ಮಾಡುವ ಮೂಲಕ ನಿಯಮಿತವಾಗಿ ಲೈವ್-ಸ್ಟ್ರೀಮಿಂಗ್ ಪ್ರಾರಂಭಿಸಬೇಕು ಎಂದು ಸರ್ವಾನುಮತ ವ್ಯಕ್ತಪಡಿಸಿದರು.

ಭಾರತದ ನ್ಯಾಯಾಂಗದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನದ ಬಳಕೆಯನ್ನು ಕಾರ್ಯಗತಗೊಳಿಸುವ ಮಹತ್ವಾಕಾಂಕ್ಷೆಯ ಕ್ರಮವಾಗಿದೆ ಇ-ಕೋರ್ಟ್‌ಗಳ ಯೋಜನೆಯ ಮೂರನೇ ಹಂತದ ಭಾಗವಾಗಿ ಸುಪ್ರೀಂ ಕೋರ್ಟ್‌ನ ವಿಚಾರಣೆಗಳನ್ನು ಲೈವ್-ಸ್ಟ್ರೀಮ್ ಮಾಡಲು ವಿಶೇಷ ವೇದಿಕೆಯನ್ನು ಕಲ್ಪಿಸಿದೆ. ಗುಜರಾತ್, ಒರಿಸ್ಸಾ, ಕರ್ನಾಟಕ, ಜಾರ್ಖಂಡ್, ಪಾಟ್ನಾ ಮತ್ತು ಮಧ್ಯಪ್ರದೇಶದ ಕೆಲವು ಹೈಕೋರ್ಟ್‌ಗಳು ಲೈವ್‌ಸ್ಟ್ರೀಮ್ ವಿಚಾರಣೆಗಳನ್ನು ಮಾಡುತ್ತಿದೆ.

Published On - 2:45 pm, Tue, 27 September 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ