AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂದಲೆಳೆ ಅಂತರದಿಂದ ಎಲ್​ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಭಾರೀ ಅಪಘಾತದಿಂದ ಪಾರು

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಬಿಹಾರದ ಉಜಿಯಾರ್‌ಪುರದಲ್ಲಿ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಈ ಅವಘಡ ಸಂಭವಿಸಿದ್ದು, ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಕೂದಲೆಳೆ ಅಂತರದಿಂದ ಎಲ್​ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಭಾರೀ ಅಪಘಾತದಿಂದ ಪಾರು
ಚಿರಾಗ್ ಪಾಸ್ವಾನ್
ಸುಷ್ಮಾ ಚಕ್ರೆ
|

Updated on: May 09, 2024 | 7:58 PM

Share

ನವದೆಹಲಿ: ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ (Chirag Paswan) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿಹಾರದ (Bihar) ಉಜಿಯಾರ್‌ಪುರ ಲೋಕಸಭಾ ಕ್ಷೇತ್ರದ ಹೆಲಿಪ್ಯಾಡ್ ಬಳಿ ಸ್ವಲ್ಪದರಲ್ಲೇ ಅಪಘಾತದಿಂದ ಪಾರಾಗಿದೆ. ಲ್ಯಾಂಡಿಂಗ್ ಸಮಯದಲ್ಲಿ ನಡೆದ ದುರಂತದಿಂದ ಪಾರಾದ ಪಾಸ್ವಾನ್ ಮತ್ತು ಅವರ ತಂಡಕ್ಕೆ ಯಾವುದೇ ರೀತಿಯ ಗಾಯಗಳಾಗಿಲ್ಲ. ಅವರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.

ಈ ಘಟನೆಯು ಹೆಲಿಕಾಪ್ಟರ್ ಸುರಕ್ಷತಾ ಪ್ರೋಟೋಕಾಲ್​ಗಳ ಬಗ್ಗೆ ಕಳವಳವನ್ನು ಉಂಟುಮಾಡುವಂತೆ ಮಾಡಿದೆ. ಬಿಹಾರದ ಉಜಿಯಾರ್‌ಪುರ ಲೋಕಸಭಾ ಕ್ಷೇತ್ರದ ಮೊಹದ್ದಿ ನಗರದ ಹೆಲಿಪ್ಯಾಡ್ ಬಳಿ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತವನ್ನು ಸ್ವಲ್ಪದರಲ್ಲೇ ತಪ್ಪಿಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್ ಆಗುವಾಗ ಈ ಆತಂಕಕಾರಿ ಘಟನೆ ಸಂಭವಿಸಿದೆ.

ಇದನ್ನೂ ಓದಿ: ಪೆನ್​ಡ್ರೈವ್ ಹಂಚಿಕೆ ಆರೋಪ, ಚುನಾವಣೆ ಜಂಜಾಟದ ಮಧ್ಯೆ ಚಿಕ್ಕಮಗಳೂರಿನ ರೆಸಾರ್ಟ್​​ನಲ್ಲಿ ಡಿಕೆ ಸಹೋದರರ ವಾಸ್ತವ್ಯ!

ಒಮ್ಮೆಲೆ ಹೆಲಿಕಾಪ್ಟರ್​ ಚಕ್ರಗಳು ಕುಸಿದಿದ್ದರಿಂದ ಕೆಲಕಾಲ ಎಲ್ಲರೂ ಆತಂಕಗೊಂಡಿದ್ದರು. ಇಂತಹ ಕಾರ್ಯಾಚರಣೆಗಳಿಗೆ ಸ್ಥಳದಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡುತ್ತದೆ.

ಅದೃಷ್ಟವಶಾತ್, ಯಾರಿಗೂ ಯಾವುದೇ ರೀತಿಯ ಗಾಯಗಳು ವರದಿಯಾಗಿಲ್ಲ. ಚಿರಾಗ್ ಪಾಸ್ವಾನ್ ಮತ್ತು ಅವರ ತಂಡದವರು ಸುರಕ್ಷಿತವಾಗಿದ್ದಾರೆ. ಅದೇನೇ ಇದ್ದರೂ, ಈ ಘಟನೆಯು ಹೆಲಿಕಾಪ್ಟರ್ ಪ್ರಯಾಣಕ್ಕೆ ಸಂಬಂಧಿಸಿದ ಅಪಾಯಗಳನ್ನು ಒತ್ತಿಹೇಳುತ್ತದೆ. ವಿಶೇಷವಾಗಿ ಲ್ಯಾಂಡಿಂಗ್ ಮತ್ತು ಟೇಕ್‌ಆಫ್‌ನಂತಹ ನಿರ್ಣಾಯಕ ಕ್ಷಣಗಳಲ್ಲಿ ಎಚ್ಚರ ವಹಿಸುವುದು ಎಷ್ಟು ಅಗತ್ಯವೆಂಬ ಚರ್ಚೆ ಶುರುವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ