AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ. ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ […]

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?
KUSHAL V
|

Updated on:Aug 01, 2020 | 2:54 PM

Share

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ.

ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ ಆಮಂತ್ರಣ ನೀಡಲಾಗಿದೆ.

ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ವಾಣಿ ಕಳೆದ ವಾರ ಲಕ್ನೋನಲ್ಲಿರುವ CBI ನ್ಯಾಯಾಲಯದಲ್ಲಿ ನಡೆಯುತ್ತಿರುವ ಕೇಸ್​ಗೆ ಹಾಜರಾಗಿದ್ದರು. ಜೊತೆಗೆ, ಈ ಪ್ರಕರಣದಲ್ಲಿ ಮುರಳಿ ಮನೋಹರ್​ ಜೋಶಿ ಹಾಗೂ ಉಮಾ ಭಾರತಿಯವರ ಹೆಸರು ಸಹ ತಳುಕು ಹಾಕಲಾಗಿತ್ತು.

ಆದರೆ, ಕೇಂದ್ರ ಸರ್ಕಾರದ ಕೊವಿಡ್​ ನಿಯಮಾವಳಿಯ ಪ್ರಕಾರ 65ಕ್ಕಿಂತ ಹೆಚ್ಚು ವಯೋಮಿತಿಯವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಉಲ್ಲೇಖಿಸಲಾಗಿದೆಯಂತೆ. ಈ ಕಾರಣಕ್ಕಾಗಿ ಹಿರಿಯರಾದ ಅಡ್ವಾಣಿ (92) ಮತ್ತು ಜೋಶಿಗೆ (86) ಆಮಂತ್ರಣ ನೀಡಲಾಗಿಲ್ಲ ಎಂಬ ಮಾತೂ ಸಹ ಕೇಳಿಬಂದಿದೆ.

Published On - 2:49 pm, Sat, 1 August 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ