AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ. ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ […]

ರಾಮ ಮಂದಿರ ಭೂಮಿ ಪೂಜೆಗೆ ‘ಹಿರಿಯರಾದ’ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ!?
KUSHAL V
|

Updated on:Aug 01, 2020 | 2:54 PM

Share

ದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ದೇವಸ್ಥಾನದ ಭೂಮಿ ಪೂಜೆ ಸಮಾರಂಭವು ಆಗಸ್ಟ್​ 5ಕ್ಕೆ ಆಯೋಜಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದ್ದಂತೆ ದೇಶದ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ.

ಆದರೆ, ಉನ್ನತ ಮೂಲಗಳ ಪ್ರಕಾರ ಬಿಜೆಪಿ ಪಕ್ಷದ ವರಿಷ್ಠ ಲಾಲ್​ ಕೃಷ್ಣ ಅಡ್ವಾಣಿ ಹಾಗೂ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್​ ಜೋಶಿ ಅವರಿಗೆ ಈವರೆಗೆ ಆಮಂತ್ರಣ ಪತ್ರ ನೀಡಿಲ್ಲವಂತೆ. ಆದರೆ, ಪಕ್ಷದ ಇತರೆ ನಾಯಕರಾದ ಉಮಾ ಭಾರತಿ ಹಾಗೂ ಮಾಜಿ ಸಿಎಂ ಕಲ್ಯಾಣ್​ ಸಿಂಗ್​ರಿಗೆ ಆಮಂತ್ರಣ ನೀಡಲಾಗಿದೆ.

ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ವಾಣಿ ಕಳೆದ ವಾರ ಲಕ್ನೋನಲ್ಲಿರುವ CBI ನ್ಯಾಯಾಲಯದಲ್ಲಿ ನಡೆಯುತ್ತಿರುವ ಕೇಸ್​ಗೆ ಹಾಜರಾಗಿದ್ದರು. ಜೊತೆಗೆ, ಈ ಪ್ರಕರಣದಲ್ಲಿ ಮುರಳಿ ಮನೋಹರ್​ ಜೋಶಿ ಹಾಗೂ ಉಮಾ ಭಾರತಿಯವರ ಹೆಸರು ಸಹ ತಳುಕು ಹಾಕಲಾಗಿತ್ತು.

ಆದರೆ, ಕೇಂದ್ರ ಸರ್ಕಾರದ ಕೊವಿಡ್​ ನಿಯಮಾವಳಿಯ ಪ್ರಕಾರ 65ಕ್ಕಿಂತ ಹೆಚ್ಚು ವಯೋಮಿತಿಯವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಉಲ್ಲೇಖಿಸಲಾಗಿದೆಯಂತೆ. ಈ ಕಾರಣಕ್ಕಾಗಿ ಹಿರಿಯರಾದ ಅಡ್ವಾಣಿ (92) ಮತ್ತು ಜೋಶಿಗೆ (86) ಆಮಂತ್ರಣ ನೀಡಲಾಗಿಲ್ಲ ಎಂಬ ಮಾತೂ ಸಹ ಕೇಳಿಬಂದಿದೆ.

Published On - 2:49 pm, Sat, 1 August 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು