LK Advani: ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಆರೋಗ್ಯ ಸ್ಥಿರ; ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅನಾರೋಗ್ಯದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. 96 ವರ್ಷದ ಅಡ್ವಾಣಿ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

LK Advani: ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಆರೋಗ್ಯ ಸ್ಥಿರ; ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಎಲ್​ಕೆ ಅಡ್ವಾಣಿ
Follow us
|

Updated on: Jun 27, 2024 | 4:37 PM

ನವದೆಹಲಿ: ಬುಧವಾರ ರಾತ್ರಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್​ಕೆ ಅಡ್ವಾಣಿ) ಇಂದು (ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಎಲ್​ಕೆ ಅಡ್ವಾಣಿ ಅವರ ಆರೋಗ್ಯ ಇದೀಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

96 ವರ್ಷದ ಮಾಜಿ ಉಪಪ್ರಧಾನಿ ಎಲ್​ಕೆ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 10.30ರ ಸುಮಾರಿಗೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್​)ನ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿತ್ತು. “ಎಲ್ ಕೆ ಅಡ್ವಾಣಿ ಅವರು ಸ್ಥಿರವಾಗಿದ್ದಾರೆ. ಮೂತ್ರಶಾಸ್ತ್ರ, ಹೃದ್ರೋಗ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷತೆಗಳ ವೈದ್ಯರ ತಂಡವು ಅವರನ್ನು ಮೌಲ್ಯಮಾಪನ ಮಾಡುತ್ತಿದೆ” ಎಂದು ಮೂಲಗಳು ತಿಳಿಸಿತ್ತು.

ಇದನ್ನೂ ಓದಿ: PM Modi Russia Visit: ಜುಲೈನಲ್ಲಿ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಇದೀಗ ಎಲ್​ಕೆ ಅಡ್ವಾಣಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ಅಡ್ವಾಣಿ ಅವರ ಕಾಯಿಲೆ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರಕ್ಕೇರುವ ಮೊದಲು ನರೇಂದ್ರ ಮೋದಿ ಅವರು ಎಲ್​ಕೆ ಅಡ್ವಾಣಿ ಅವರನ್ನು ಭೇಟಿಯಾಗಿದ್ದರು.

ಜೂನ್ 7ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ದಾಖಲೆಯ ಮೂರನೇ ಅವಧಿಗೆ ಕೇಂದ್ರದಲ್ಲಿ ಮುಂದಿನ ಸರ್ಕಾರವನ್ನು ರಚಿಸಲು ಹಕ್ಕು ಸಾಧಿಸುವ ಮೊದಲು ಅವರು ಭೇಟಿಯಾಗಿದ್ದರು. ಎನ್‌ಡಿಎ ಸಂಸದೀಯ ಪಕ್ಷದ ನಾಯಕರಾಗಿ, ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಮತ್ತು ಲೋಕಸಭೆಯಲ್ಲಿ ಬಿಜೆಪಿ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಪ್ರಧಾನಿ ಮೋದಿ ಅಡ್ವಾಣಿ ಅವರನ್ನು ಭೇಟಿ ಮಾಡಿದ್ದರು.

ಇದನ್ನೂ ಓದಿ: LK Advani Hospitalised: ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

1927ರಲ್ಲಿ ನವೆಂಬರ್ 8ರಂದು ಕರಾಚಿಯಲ್ಲಿ (ಇಂದಿನ ಪಾಕಿಸ್ತಾನ) ಜನಿಸಿದ ಎಲ್​ಕೆ ಅಡ್ವಾಣಿ 1942ರಲ್ಲಿ ಸ್ವಯಂಸೇವಕರಾಗಿ ಆರ್‌ಎಸ್‌ಎಸ್‌ಗೆ ಸೇರಿದರು. 1986ರಿಂದ 1990ರವರೆಗೆ ಅವರು ಬಿಜೆಪಿ ಅಧ್ಯಕ್ಷರಾಗಿ, ನಂತರ 1993ರಿಂದ 1998ರವರೆಗೆ ಮತ್ತು 2004ರಿಂದ 2005ರವರೆಗೆ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ಉಪ ಪ್ರಧಾನಿಯಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ