AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್

LK Advani: ಬುಧವಾರ ರಾತ್ರಿ ಅನಾರೋಗ್ಯದಿಂದ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ 96 ವರ್ಷದ ಹಿರಿಯ ಬಿಜೆಪಿ ನಾಯಕ ಎಲ್​ಕೆ ಅಡ್ವಾಣಿ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್
ಎಲ್​ಕೆ ಅಡ್ವಾಣಿ
ಸುಷ್ಮಾ ಚಕ್ರೆ
|

Updated on:Jul 04, 2024 | 6:01 PM

Share

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (ಎಲ್​ಕೆ ಅಡ್ವಾಣಿ) ಬುಧವಾರ ರಾತ್ರಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತುರ್ತು ವಿಭಾಗದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. 96 ವರ್ಷದ ಎಲ್​ಕೆ ಅಡ್ವಾಣಿ ಕಳೆದ 2 ವಾರಗಳಲ್ಲಿ ಇದು 2ನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಾಜಿ ಉಪಪ್ರಧಾನಿ ಎಲ್​ಕೆ ಅಡ್ವಾಣಿ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಡಾ. ವಿನಿತ್ ಸೂರಿ ಚಿಕಿತ್ಸೆ ನೀಡಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: LK Advani Health: ಬಿಜೆಪಿ ಮುಖಂಡ ಎಲ್​ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ದೆಹಲಿಯ ಆಸ್ಪತ್ರೆಗೆ ದಾಖಲು

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 9 ಗಂಟೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅಡ್ವಾಣಿ ಅವರು ಬಳಲುತ್ತಿದ್ದಾರೆ.

ಕಳೆದ ವಾರವೂ ಅನಾರೋಗ್ಯದಿಂದ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಎಲ್​ಕೆ ಅಡ್ವಾಣಿ ಅವರನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಡಿಸ್ಚಾರ್ಜ್ ಮಾಡಲಾಗಿತ್ತು. ಆಸ್ಪತ್ರೆ ಮೂಲಗಳ ಪ್ರಕಾರ, ಜೂನ್ 26 ರಂದು ರಾತ್ರಿ 10.30 ರ ಸುಮಾರಿಗೆ ಅಡ್ವಾಣಿ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ಮೂತ್ರಶಾಸ್ತ್ರ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಸಂಜೆ ಮತ್ತೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Thu, 4 July 24

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ