AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LK Advani Birthday ಎಲ್ ಕೆ ಅಡ್ವಾಣಿ ಅವರಿಗೆ 94ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ, ಬಿಜೆಪಿ ನಾಯಕರಿಂದ ಶುಭ ಹಾರೈಕೆ

"ಗೌರವಾನ್ವಿತ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ. ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸಲು ಅವರ ಹಲವಾರು ಪ್ರಯತ್ನಗಳಿಗಾಗಿ ರಾಷ್ಟ್ರವು ಅವರಿಗೆ ಋಣಿಯಾಗಿದೆ ಎಂದು ಮೋದಿ ಟ್ವೀಟ್.

LK Advani Birthday ಎಲ್ ಕೆ ಅಡ್ವಾಣಿ ಅವರಿಗೆ 94ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ, ಬಿಜೆಪಿ ನಾಯಕರಿಂದ ಶುಭ ಹಾರೈಕೆ
ಎಲ್.ಕೆ.ಅಡ್ವಾಣಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 08, 2021 | 11:53 AM

Share

ದೆಹಲಿ: ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಸುದೀರ್ಘ ಅವಧಿಯ ಅಧ್ಯಕ್ಷ ಎಲ್.ಕೆ.ಅಡ್ವಾಣಿ (LK Advani) ಸೋಮವಾರ 94ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವು ನಾಯಕರು ಅಡ್ವಾಣಿ ಅವರಿಗೆ ಶುಭಾಶಯ ಕೋರಿದ್ದು ದೇಶ ಮತ್ತು ಪಕ್ಷಕ್ಕೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದರು. “ಗೌರವಾನ್ವಿತ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ. ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸಲು ಅವರ ಹಲವಾರು ಪ್ರಯತ್ನಗಳಿಗಾಗಿ ರಾಷ್ಟ್ರವು ಅವರಿಗೆ ಋಣಿಯಾಗಿದೆ. ಅವರ ವಿದ್ವತ್ಪೂರ್ಣ ಅನ್ವೇಷಣೆಗಳು ಮತ್ತು ಶ್ರೀಮಂತ ಬುದ್ಧಿಶಕ್ತಿಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಡುತ್ತಾರೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಅಡ್ವಾಣಿ ಅವರನ್ನು ಸ್ಫೂರ್ತಿ ಮತ್ತು ಮಾರ್ಗದರ್ಶಕ ಎಂದು ಶ್ಲಾಘಿಸಿದರು. ಅವರ ಪಾಂಡಿತ್ಯ, ದೂರದೃಷ್ಟಿ ಮತ್ತು ಬುದ್ಧಿಶಕ್ತಿಯನ್ನು ಎಲ್ಲರೂ ಒಪ್ಪಿಕೊಳ್ಳುವ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಅವರನ್ನು ಪರಿಗಣಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಹಿರಿಯ ನಾಯಕರಾದ ಅಡ್ವಾಣಿ ಪಕ್ಷವನ್ನು ಜನಸಾಮಾನ್ಯರತ್ತ ಕೊಂಡೊಯ್ಯುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಅವರು ದೀರ್ಘಾಯುಷ್ಯ ಮತ್ತು ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದ ಅವರು, ಪಕ್ಷೇತರ ನಾಯಕ ಕೋಟ್ಯಂತರ ಪಕ್ಷದ ಕಾರ್ಯಕರ್ತರಿಗೆ ಸ್ಪೂರ್ತಿಯಾಗಿದ್ದಾರೆ ಎಂದರು.

80 ರ ದಶಕದ ಉತ್ತರಾರ್ಧದಲ್ಲಿ ರಾಮ ಜನ್ಮಭೂಮಿ ಆಂದೋಲನದೊಂದಿಗೆ ಮುನ್ನಲೆಗೆ ಬಂದ ಅಡ್ವಾಣಿ ಬಿಜೆಪಿಯ ಪ್ರಮುಖ ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಬೆಳವಣಿಗೆಯ ಪ್ರಮುಖ ವಾಸ್ತುಶಿಲ್ಪಿ. ಅಡ್ವಾಣಿ ಅವರು ಹಿಂದುತ್ವದ ರಾಜಕೀಯವನ್ನು ರೂಪಿಸಿದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜೊತೆಗೆ ದಶಕಗಳ ಕಾಲ ಪಕ್ಷ ಮತ್ತು ಅದರ ಮುಂಚೂಣಿಯಲ್ಲಿರುವ ಜನಸಂಘವನ್ನು ಮುನ್ನಡೆಸಿದರು. ಅವಿಭಜಿತ ಭಾರತದಲ್ಲಿ ಕರಾಚಿಯಲ್ಲಿ ಜನಿಸಿದ ಅವರು ಆರ್‌ಎಸ್‌ಎಸ್ ಮತ್ತು ನಂತರ ಜನಸಂಘಕ್ಕೆ ಸೇರಿದರು.

ಇದನ್ನೂ ಓದಿ: Shri Ramayana Yatra ದೆಹಲಿಯಿಂದ ಶ್ರೀ ರಾಮಾಯಣ ಯಾತ್ರೆಯ ವಿಶೇಷ ರೈಲು ಆರಂಭಿಸಿದ ಐಆರ್​​ಸಿಟಿಸಿ; ದರ, ವೇಳಾಪಟ್ಟಿ ಇಲ್ಲಿವೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್