Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ LDF ವಿಜಯೋತ್ಸವ; ಇದು ಜನರ ಗೆಲುವು ಎಂದ ಪಿಣರಾಯಿ ವಿಜಯನ್

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್​​ಡಿಎಫ್​ನ ಗೆಲುವು ಜನರ ಗೆಲುವು ಆಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳದಲ್ಲಿ LDF ವಿಜಯೋತ್ಸವ; ಇದು ಜನರ ಗೆಲುವು ಎಂದ ಪಿಣರಾಯಿ ವಿಜಯನ್
ಮಲಪ್ಪುರಂನಲ್ಲಿ ಎಲ್​​ಡಿಎಫ್ ಕಾರ್ಯಕರ್ತರ ಸಂಭ್ರಮಾಚರಣೆ
Follow us
ರಶ್ಮಿ ಕಲ್ಲಕಟ್ಟ
|

Updated on:Dec 16, 2020 | 7:30 PM

ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಲ್​​ಡಿಎಫ್ ಅಧಿಪತ್ಯ ಸ್ಥಾಪಿಸಿದೆ. ಗ್ರಾಮ ಪಂಚಾಯತಿಗಳಲ್ಲಿಯೂ ಬ್ಲಾಕ್, ಜಿಲ್ಲಾ ಪಂಚಾಯತಿ ಮತ್ತು ಕಾರ್ಪೊರೇಷನ್​ಗಳಲ್ಲಿ ಎಲ್​​ಡಿಎಫ್ ಮುನ್ನಡೆ ಸಾಧಿಸಿದೆ. ಮುನ್ಸಿಪಾಲಿಟಿಗಳಲ್ಲಿ ಯುಡಿಎಫ್- ಎಲ್​​ಡಿಎಫ್ ನಡುವೆ ಜಿದ್ದಾಜಿದ್ದಿ ಪೈಪೋಟಿ ನಡೆದಿತ್ತು.

941 ಗ್ರಾಮ ಪಂಚಾಯತಿ​​ಗಳ ಪೈಕಿ 517 ಸೀಟುಗಳಲ್ಲಿ ಎಲ್​​ಡಿಎಫ್ ಮುನ್ನಡೆ ಸಾಧಿಸಿದೆ. ಯುಡಿಎಫ್ 374, ಎನ್​​ಡಿಎ 22, ಸ್ವತಂತ್ರ ಅಭ್ಯರ್ಥಿಗಳು ಮತ್ತು ಇತರ ಪಕ್ಷಗಳು 28 ಸೀಟುಗಳಲ್ಲಿ ಮುನ್ನಡೆ ಸಾಧಿಸಿವೆ. ಬ್ಲಾಕ್ ಪಂಚಾಯತ್​​ನ 152 ಸೀಟುಗಳ ಪೈಕಿ ಎಲ್​​ಡಿಎಫ್ 107, ಯುಡಿಎಫ್ 45 ಸೀಟುಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಒಟ್ಟು 14 ಜಿಲ್ಲಾ ಪಂಚಾಯತಿಗಳಲ್ಲಿ 10 ಸೀಟುಗಳಲ್ಲಿ ಎಲ್​​ಡಿಎಫ್ ಮತ್ತು ಯುಡಿಎಫ್ 4 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಮುನ್ಸಿಪಾಲಿಟಿಗಳಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಯೇರ್ಪಟ್ಟಿದ್ದು 86 ಸೀಟುಗಳ ಪೈಕಿ 45 ಸೀಟುಗಳಲ್ಲಿ ಯುಡಿಎಫ್ ಮತ್ತು 35 ಸೀಟುಗಳಲ್ಲಿ ಎಲ್​​ಡಿಎಫ್ ಮುನ್ನಡೆ ಇದೆ.

ಕಾರ್ಪೊರೇಷನ್  ಚುನಾವಣೆ ತಿರುವನಂತಪುರಂ (43), ಕೊಲ್ಲಂ (38), ಕೋಯಿಕ್ಕೋಡ್ (47) ಮಹಾನಗರಪಾಲಿಕೆಗಳಲ್ಲಿ ಎಲ್​​ಡಿಎಫ್ ಮುನ್ನಡೆ ಸಾಧಿಸಿದೆ. ಕೊಚ್ಚಿ ಕಾರ್ಪೊರೇಷನ್​ನಲ್ಲಿ ಎಲ್​​ಡಿಎಫ್ ಅಧಿಕಾರಕ್ಕೇರುವುದು ನಿಚ್ಚಳವಾಗಿದೆ. ಕಣ್ಣೂರು (2), ತ್ರಿಶ್ಶೂರ್ (23) ಸೀಟುಗಳಲ್ಲಿ ಯುಡಿಎಫ್ ಮುನ್ನಡೆ ಸಾಧಿಸಿದೆ. ತಿರುವನಂತಪುರಂನಲ್ಲಿ ಕಳೆದ ವರ್ಷ ಎಲ್​​ಡಿಎಫ್ 42 ಸೀಟು ಗಳಿಸಿತ್ತು. ಈ ಹಿಂದೆ 20 ಸೀಟುಗಳಿಸಿದ್ದ ಯುಡಿಎಫ್​ಗೆ ಈ ಬಾರಿ 9 ಸೀಟುಗಳಲ್ಲಷ್ಟೇ ಜಯ ಸಾಧಿಸಲು ಸಾಧ್ಯವಾಗಿದ್ದು. ಕಳೆದ ಬಾರಿ 35 ಸೀಟುಗಳಿಸಿದ್ದ ಎನ್​ಡಿಎ ಈ ಬಾರಿ 27 ಸೀಟುಗಳಲ್ಲಿ ಮುನ್ನಡೆ ಗಳಿಸಿದೆ.

ಬಿಜೆಪಿಗೆ ಈ ಬಾರಿ ಹೆಚ್ಚಿನ ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಪಾಲಕ್ಕಾಡ್ ಮುನ್ಸಿಪಾಲಿಟಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿರುವ ಬಿಜೆಪಿಗೆ ಈ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಲು ಸಾಧ್ಯವಾಗಿದೆ. ತ್ರಿಶ್ಶೂರ್ ಕಾರ್ಪೊರೇಷನ್​ನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ನೇತಾರ ಬಿ.ಗೋಪಾಲಕೃಷ್ಣ ಅವರ ಸೋಲು ಬಿಜೆಪಿಗೆ ದೊಡ್ಡ ಹೊಡೆತವನ್ನು ನೀಡಿದೆ.

ರಾಜಕೀಯ ಪಕ್ಷಗಳ ವಿರುದ್ಧ ಸಂಘಟಿತವಾದ ಟ್ವೆಂಟಿ- 20 ಪಕ್ಷವು ಕಿಳಕ್ಕಂಬಲಂ, ಐಕ್ಕರನಾಡಿನಲ್ಲಿ ಗೆಲುವು ಸಾಧಿಸಿದೆ. ಮುಳುವನ್ನೂರ್, ಕುನ್ನತ್ತುನಾಡ್​ನಲ್ಲಿ ಟ್ವೆಂಟಿ – 20 ಹೆಚ್ಚಿನ ಸೀಟುಗಳನ್ನು ಗೆದ್ದುಕೊಂಡಿದೆ. ಪಾಲಾ ನಗರಸಭೆಯಲ್ಲಿ ಜೋಸ್ ಕೆ. ಮಾಣಿ ಪಕ್ಷದ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಕೋಟ್ಟಯಂ ಜಿಲ್ಲಾ ಪಂಚಾಯತ್ ನಲ್ಲಿ ಎಲ್​​ಡಿಎಫ್ ಹೆಚ್ಚಿನ ಸೀಟುಗಳಿಸುವಲ್ಲಿ ಯಶಸ್ವಿಯಾಗಿದೆ.

ಇದು ಜನರ ಗೆಲುವು: ಸಿಎಂ ಪಿಣರಾಯಿ ವಿಜಯನ್ ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್​​ಡಿಎಫ್​ನ ಗೆಲುವು ಜನರ ಗೆಲುವು ಆಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯನ್, ಕೇರಳದಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸಲು ಪ್ರಯತ್ನಿಸುವವರಿಗೆ ನಾಡಿನ ಜನರು ನೀಡಿದ ಉತ್ತರವಾಗಿದೆ ಈ ಚುನಾವಣಾ ಫಲಿತಾಂಶ ಎಂದಿದ್ದಾರೆ.

ದಲ್ಲಾಳಿಗಳಿಗೂ, ಅಪಪ್ರಚಾರ ಮಾಡುತ್ತಿರುವವರಿಗೂ ಕೇರಳಿಗರು ಸೂಕ್ತ ಉತ್ತರವನ್ನೇ ನೀಡಿದ್ದಾರೆ. ಕೇರಳ ರಾಜಕೀಯದಲ್ಲಿ ಯುಡಿಎಫ್ ಹೇಳಹೆಸರಿಲ್ಲದಂತಾಗುತ್ತಿದೆ. ಬಿಜೆಪಿಯ ಕುತಂತ್ರಗಳು ಮತ್ತೊಮ್ಮೆ ವಿಫಲವಾಗಿದೆ. ಕೇರಳ ರಾಜಕೀಯದಲ್ಲಿ ಧಾರ್ಮಿಕ, ಮತ ದ್ವೇಷಗಳಿಗೆ ಜಾಗವಿಲ್ಲ ಎಂಬುದನ್ನು ಈ ಚುನಾವಣೆ ಸಾಬೀತು ಪಡಿಸಿದೆ ಎಂದಿದ್ದಾರೆ ಪಿಣರಾಯಿ.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಮುನ್ನಡೆ ಸಾಧಿಸಿದ LDF, ಕಣ್ಣೂರಿನಲ್ಲಿ ಕಣ್​ಬಿಟ್ಟ BJP

Published On - 7:25 pm, Wed, 16 December 20

ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್