AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು

ಶವ ತುಂಬಿದ್ದ ಸೂಟ್​ಕೇಸ್ ನದಿಗೆ​ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್​ಕೇಸ್​ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಫಲ್ಗುಣಿ ಘೋಷ್ ಮತ್ತು ಆಕೆಯ ತಾಯಿ ಆರತಿ ಘೋಷ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಮೃತದೇಹವನ್ನು ಫಲ್ಗುಣಿ ಘೋಷ್ ಅವರ ಮಾವನ ಸಹೋದರಿ ಸುಮಿತಾ ಘೋಷ್ (55) ಎಂದು ಗುರುತಿಸಲಾಗಿದೆ.

ಕೋಲ್ಕತ್ತಾ: ನದಿಗೆ ಶವವಿದ್ದ ಸೂಟ್​ಕೇಸ್​ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು
ಬ್ಯಾಗ್ Image Credit source: India Today
ನಯನಾ ರಾಜೀವ್
|

Updated on: Feb 25, 2025 | 3:04 PM

Share

ಕೋಲ್ಕತ್ತಾ, ಫೆಬ್ರವರಿ 25: ಶವ ತುಂಬಿದ್ದ ಸೂಟ್​ಕೇಸ್ ನದಿಗೆ​ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್​ಕೇಸ್​ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಫಲ್ಗುಣಿ ಘೋಷ್ ಮತ್ತು ಆಕೆಯ ತಾಯಿ ಆರತಿ ಘೋಷ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಮೃತದೇಹವನ್ನು ಫಲ್ಗುಣಿ ಘೋಷ್ ಅವರ ಮಾವನ ಸಹೋದರಿ ಸುಮಿತಾ ಘೋಷ್ (55) ಎಂದು ಗುರುತಿಸಲಾಗಿದೆ. ಉತ್ತರ ಕೋಲ್ಕತ್ತಾದ ಕುಮಾರ್ತುಲಿಯ ಗಂಗಾ ನದಿಯ ದಡದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಮಹಿಳೆಯರು ನೀಲಿ ಬಣ್ಣದ ಟ್ರಾಲಿ ಬ್ಯಾಗ್‌ನೊಂದಿಗೆ ಕಾಣಿಸಿಕೊಂಡಿದ್ದರು.

ಸ್ಥಳೀಯರು ಅವರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ಅವರ ಬಳಿ ಕೇಳಿಯೇ ಬಿಡಬೇಕು ಎಂದು ನಿರ್ಧರಿಸಿದರು. ಆರಂಭದಲ್ಲಿ ಮಹಿಳೆಯರು ಬ್ಯಾಗ್ ತೆರೆಯಲು ನಿರಾಕರಿಸಿದರು. ಆಮೇಲೆ ಗಟ್ಟಿ ಧ್ವನಿಯಲ್ಲಿ ಕೇಳಿದ ಬಳಿಕ ತಮ್ಮ ಸಾಕು ನಾಯಿ ಸತ್ತು ಹೋಗಿತ್ತು ಅದರ ದೇಹವನ್ನು ನೀರಿನಲ್ಲಿ ಹಾಕಲು ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದರು. ಇದು ಮತ್ತಷ್ಟು ಅನುಮಾನಕ್ಕೆ ಕಾರಣವಾಯಿತು, ಏನೇ ಆದರೂ ಬ್ಯಾಗ್​ನ ಜಿಪ್​ ತೆಗೆಯಲು ಸಿದ್ಧರಿರಲಿಲ್ಲ.

ಮತ್ತಷ್ಟು ಓದಿ: ಕೇರಳ: ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಫಾನ್

ಈ ಮಧ್ಯೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ಸ್ಥಳಕ್ಕೆ ಬಂದರು. ಟ್ರಾಲಿ ಬ್ಯಾಗ್ ಅನ್ನು ಬಲವಂತವಾಗಿ ತೆರೆದಾಗ ಒಳಗೆ ಮಹಿಳೆಯ ರಕ್ತಸಿಕ್ತ ಶವ ಪತ್ತೆಯಾಗಿದೆ. ನಂತರ ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಬಂಧಿಸಲಾಯಿತು.

ಫಲ್ಗುಣಿ ಹೇಳಿಕೆಯ ಪ್ರಕಾರ, ಮೃತ ಸುಮಿತಾ ತನ್ನ ಮಾವನ ಸಹೋದರಿ. ಅಸ್ಸಾಂನ ಜೋರ್ಹತ್ ಮೂಲದ ಸುಮಿತಾ ತನ್ನ ಪತಿಯಿಂದ ಬೇರ್ಪಟ್ಟಿದ್ದು, ಫೆಬ್ರವರಿ 11 ರಿಂದ ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ತಾಯಿ-ಮಗಳೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸೋಮವಾರ ಸಂಜೆ ಫಲ್ಗುಣಿ ಜೊತೆ ನಡೆದ ತೀವ್ರ ವಾಗ್ವಾದದಲ್ಲಿ ಸುಮಿತಾ ಸಾವನ್ನಪ್ಪಿದ್ದಾರೆ ಎಂದು ಕೋಲ್ಕತ್ತಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಜೆ 4 ಗಂಟೆ ಸುಮಾರಿಗೆ ಜಗಳ ನಡೆದಿತ್ತು. ಫಲ್ಗುಣಿ ಮೃತಳನ್ನು ಗೋಡೆಗೆ ತಳ್ಳಿದ್ದರಿಂದ ಆಕೆ ಪ್ರಜ್ಞೆತಪ್ಪಿ ಬಿದ್ದಿದ್ದಳು. ಪ್ರಜ್ಞೆ ಮರಳಿ ಬಂದಾಗ, ದೊಡ್ಡ ಜಗಳವೇ ನಡೆಯಿತು. ಫಲ್ಗುಣಿ ಅವಳ ಮುಖ ಮತ್ತು ಕುತ್ತಿಗೆಗೆ ಇಟ್ಟಿಗೆಯಿಂದ ಹೊಡೆದ ಕಾರಣ ಆಕೆ ಸಾವನ್ನಪ್ಪಿದ್ದಳು. ನಂತರ ತಾಯಿ-ಮಗಳು ಶವವನ್ನು ಟ್ರಾಲಿ ಬ್ಯಾಗಿನಲ್ಲಿ ಹಾಕಿ ನದಿಗೆ ಎಸೆಯಲು ಪ್ರಯತ್ನಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ