AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಕೊವಿಡ್ ಲಾಕ್​ಡೌನ್ ಮೇ 25ರ ವರೆಗೆ ವಿಸ್ತರಣೆ: ನಿತೀಶ್ ಕುಮಾರ್

Bihar Lockdown : ಲಾಕ್‌ಡೌನ್ ಸಕಾರಾತ್ಮಕ ಪರಿಣಾಮ ಬೀರುತ್ತಿರುವುದನ್ನು ನಾವು ನೋಡಬಹುದು. ಆದ್ದರಿಂದ, 2021 ರ ಮೇ 16-25 ರಿಂದ ರಾಜ್ಯಕ್ಕೆ ಲಾಕ್‌ಡೌನ್ ಅನ್ನು 10 ದಿನಗಳವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ ಎಂದು ನಿತೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಬಿಹಾರದಲ್ಲಿ ಕೊವಿಡ್ ಲಾಕ್​ಡೌನ್ ಮೇ 25ರ ವರೆಗೆ ವಿಸ್ತರಣೆ: ನಿತೀಶ್ ಕುಮಾರ್
ನಿತೀಶ್ ಕುಮಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 13, 2021 | 3:23 PM

Share

ಪಟನಾ: ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕಾಗಿ ಬಿಹಾರದಲ್ಲಿ ಲಾಕ್​ಡೌನ್ ಮೇ 25ರ ವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಈಗಿರುವ ಲಾಕ್​ಡೌನ್ ಗಿಂತ ಹೆಚ್ಚುವರಿ 10 ದಿನ ಲಾಕ್​ಡೌನ್ ಮುಂದುವರಿಸಿದ್ದು ಮೇ 16ರಿಂದ 25ರವೆರೆಗೆ ಲಾಕ್​ಡೌನ್ ವಿಸ್ತರಣೆ ಆಗಿದೆ.  ಬಿಹಾರದಲ್ಲಿ ಈಗಿರುವ ಲಾಕ್‌ಡೌನ್ ಅನ್ನು ಸಚಿವಾಲಯದ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳೊಂದಿಗೆ ಪರಿಶೀಲಿಸಲಾಗಿದೆ.

ಲಾಕ್‌ಡೌನ್ ಸಕಾರಾತ್ಮಕ ಪರಿಣಾಮ ಬೀರುತ್ತಿರುವುದನ್ನು ನಾವು ನೋಡಬಹುದು. ಆದ್ದರಿಂದ, 2021 ರ ಮೇ 16-25 ರಿಂದ ರಾಜ್ಯಕ್ಕೆ ಲಾಕ್‌ಡೌನ್ ಅನ್ನು 10 ದಿನಗಳವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ ಎಂದು ನಿತೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಮೇ 4 ರಂದು ದೈನಂದಿನ ಕೊವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಬಿಹಾರ ಸರ್ಕಾರದ ಬಿಕ್ಕಟ್ಟು ನಿರ್ವಹಣೆ ತಂಡವು ಮೇ 5-15 ರಿಂದ ರಾಜ್ಯದಲ್ಲಿ 10 ದಿನಗಳ ಲಾಕ್​ಡೌನ್ ವಿಧಿಸಲು ನಿರ್ಧರಿಸಿತ್ತು. ಇದಾದ ಮರುದಿನ ಮುಖ್ಯ ಕಾರ್ಯದರ್ಶಿ ತಿರುಪುರಾರಿ ಶರಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರ ಕೈಗೊಂಡ ನಿರ್ಧಾರವು ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಪಟನಾ ಹೈಕೋರ್ಟ್ ಟೀಕೆ ಮಾಡಿತ್ತು.

ಲಾಕ್‌ಡೌನ್‌ನ ಮೊದಲ ಹಂತದಲ್ಲಿ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ಮುಚ್ಚುವಂತೆ ನಿರ್ದೇಶಿಸಲಾಯಿತು. ಆಸ್ಪತ್ರೆಗಳು, ವೈದ್ಯಕೀಯ ಪ್ರಯೋಗಾಲಯಗಳು, ಆಂಬ್ಯುಲೆನ್ಸ್ ಸೇವೆಗಳು ಮತ್ತು ಅಗತ್ಯ ಸೇವೆಗಳಾದ ನಾಗರಿಕ ರಕ್ಷಣಾ, ವಿದ್ಯುತ್ ಸರಬರಾಜು, ನೀರು ಸರಬರಾಜು, ಅಗ್ನಿಶಾಮಕ ಸೇವೆಗಳು, ಪಶುವೈದ್ಯಕೀಯ ಕೆಲಸ, ಅಂಚೆ ಮತ್ತು ದೂರಸಂಪರ್ಕ ಇತ್ಯಾದಿಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿತ್ತು.

ಇದನ್ನೂ ಓದಿ: ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ

ಕೊವಿಡ್ ಪರಿಹಾರ ನಿಧಿಗೆ ಸಚಿವರ 1 ವರ್ಷದ ವೇತನ ನೀಡುವಂತೆ ಸಿಎಂ ಸೂಚನೆ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!