AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು

ನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದರು.

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು
ಅಗರ್ವಾಲ್ Image Credit source: NDTV
ನಯನಾ ರಾಜೀವ್
|

Updated on: Jun 19, 2026 | 7:47 AM

Share

ಲೋನಾವಾಲಾ, ಜೂನ್ 19: ತನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರ(Maharashtra)ದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ: ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ, ಆತ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು ಆಳವಾದ ಕಂದಕಕ್ಕೆ ಬಿದ್ದಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಕಂದಕವು ಅತ್ಯಂತ ಆಳ ಹಾಗೂ ಕಡಿದಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ತೀವ್ರ ಸವಾಲಿನಿಂದ ಕೂಡಿತ್ತು. ಆದರೂ ರಕ್ಷಣಾ ತಂಡದ ಸದಸ್ಯರು ಹಗ್ಗಗಳ ಸಹಾಯದಿಂದ ಕಂದಕಕ್ಕೆ ಇಳಿದು, ಸಾಗರ್ ಅವರ ಮೃತದೇಹವನ್ನು ಮೇಲಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಳೆಗಾಲದ ಸಮಯದಲ್ಲಿ ಕೋಟೆಗಳ ಮೇಲ್ಭಾಗದಲ್ಲಿ ಪಾಚಿ ಹಾಗೂ ಜಾರು ಇರುವುದರಿಂದ ಇಂತಹ ಚಾರಣದ ವೇಳೆ ಪ್ರವಾಸಿಗರು ತೀವ್ರ ಜಾಗರೂಕತೆ ವಹಿಸಬೇಕು ಮತ್ತು ಅಪಾಯಕಾರಿ ಅಂಚುಗಳಿಗೆ ಹೋಗಬಾರದು ಎಂದು ಸ್ಥಳೀಯ ಆಡಳಿತ ಮನವಿ ಮಾಡಿದೆ.

ಮತ್ತಷ್ಟು ಓದಿ: ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ

ಪೊಲೀಸರ ಪ್ರಕಾರ, ಕೇತನ್ ಅವರ ತಂದೆ ಉದ್ಯಮಿಯಾಗಿದ್ದು, ಪುಣೆ ಜಿಲ್ಲೆಯ ಲೋನಾವಾಲ ಬಳಿಯ ಮಲವಲಿಯ ಲೋಹಗಡ್ ಕೋಟೆಗೆ ತನ್ನ ಸ್ನೇಹಿತನೊಂದಿಗೆ ಚಾರಣಕ್ಕೆ ಹೋಗಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಕಣಿವೆಗೆ ಜಾರಿದ್ದರು. ಮಾಹಿತಿ ಪಡೆದ ನಂತರ, ಪುಣೆ ಗ್ರಾಮೀಣ ಪೊಲೀಸರು ಸ್ಥಳೀಯ ನಿವಾಸಿಗಳು ಮತ್ತು ಶಿವದೃಗ್ ಮಿತ್ರ ಮತ್ತು ವನ್ಯಜೀವ್ ರಕ್ಷಕ್ ಮಾವಲ್ ಅವರ ರಕ್ಷಣಾ ತಂಡಗಳೊಂದಿಗೆ ಸ್ಥಳಕ್ಕೆ ಬಂದಿದ್ದರು

ಕೇತನ್ ಅವರ ದೇಹವನ್ನು ಕಣಿವೆಯಿಂದ ಮೇಲಕ್ಕೆತ್ತುವಲ್ಲಿ ಯಶಸ್ವಿಯಾದ ನಂತರ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಲೋನಾವಾಲ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ವರದಿ ದಾಖಲಾಗಿದೆ. ತನ್ನ ಕೆಲವು ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಲೋಹಗಢ ಕೋಟೆಗೆ ಹೋಗಿದ್ದರು. ಹೆಚ್ಚಿನ ತನಿಖೆ ನಡೆಯುತ್ತಿದೆ.

ಕೇತನ್ ಮದುೆ ಇದೇ ವರ್ಷವೇ ನೆರವೇರಬೇಕಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರ ಹಠಾತ್ ಸಾವಿನಿಂದ ಅವರ ಕುಟುಂಬ ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?