ಲೋಕಸಭೆಯಲ್ಲಿ ಭದ್ರತಾ ಲೋಪ: ಸರ್ವಪಕ್ಷಗಳ ಸಭೆ ಕರೆದ ಸ್ಪೀಕರ್ ಓಂ ಬಿರ್ಲಾ

ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ(Om Birla) ಸರ್ವಪಕ್ಷಗಳ ಸಭೆ(All Party Meeting) ಕರೆದಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಸದನದಲ್ಲಿ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯನ್ನು ಬುಧವಾರ ಸಂಜೆ 4 ಗಂಟೆಗೆ ಮುಂದೂಡಲಾಗಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಕರೆದಿರುವುದಾಗಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಭದ್ರತಾ ಲೋಪ: ಸರ್ವಪಕ್ಷಗಳ ಸಭೆ ಕರೆದ ಸ್ಪೀಕರ್ ಓಂ ಬಿರ್ಲಾ
ಸಂಸತ್

Updated on: Dec 13, 2023 | 3:57 PM

ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ(Om Birla) ಸರ್ವಪಕ್ಷಗಳ ಸಭೆ(All Party Meeting) ಕರೆದಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಸದನದಲ್ಲಿ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯನ್ನು ಬುಧವಾರ ಸಂಜೆ 4 ಗಂಟೆಗೆ ಮುಂದೂಡಲಾಗಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಕರೆದಿರುವುದಾಗಿ ತಿಳಿಸಿದ್ದಾರೆ.

ಇಬ್ಬರು ಜನರು ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಸಭಾಂಗಣಕ್ಕೆ ಜಿಗಿದು ಸ್ಮೋಕ್​ ಕ್ರ್ಯಾಕರ್ ಹಚ್ಚಿದ್ದ ಪರಿಣಾಮ ಗ್ಯಾಲರಿ ತುಂಬಾ ಬಣ್ಣದ ಹೊಗೆ ತುಂಬಿಕೊಂಡಿತ್ತು.

ಬಿಜೆಪಿ ಸಂಸದರ ಪಾಸ್‌ಗಳನ್ನು ಬಳಸಿಕೊಂಡು ಇಬ್ಬರು ವ್ಯಕ್ತಿಗಳು ಆವರಣಕ್ಕೆ ಪ್ರವೇಶಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸದನದಲ್ಲಿ ಆರೋಪಿಸಿದ್ದಾರೆ.

ಇಬ್ಬರು 20 ವರ್ಷ ವಯಸ್ಸಿನ ಯುವಕರು ಇದ್ದಕ್ಕಿದ್ದಂತೆ ಸಂದರ್ಶಕರ ಗ್ಯಾಲರಿಯಿಂದ ಸದನಕ್ಕೆ ಜಿಗಿದರು ಅವರ ಕೈಯಲ್ಲಿ ಡಬ್ಬಿ ಇತ್ತು. ಈ ಡಬ್ಬಿಗಳು ಹಳದಿ ಹೊಗೆಯನ್ನು ಹೊರಸೂಸುವಂಥದ್ದು. ಅವರಲ್ಲಿ ಒಬ್ಬರು ಸ್ಪೀಕರ್ ಕುರ್ಚಿಯತ್ತ ಓಡಲು ಪ್ರಯತ್ನಿಸುತ್ತಿದ್ದರು. ಅವರು ಕೆಲವು ಘೋಷಣೆಗಳನ್ನು ಕೂಗುತ್ತಿದ್ದರು.

ಮತ್ತಷ್ಟು ಓದಿ: ಲೋಕಸಭಾ ಕಲಾಪ ವೇಳೆ ಭದ್ರತಾ ಲೋಪ: ವೀಕ್ಷಕರ ಪಾಸ್​ ನಿಷೇಧಿಸಿದ ಸ್ಪೀಕರ್ ಓಂ ಬಿರ್ಲಾ

ಹೊಗೆ ವಿಷಕಾರಿಯಾಗಿರಬಹುದು ಎಂದಿದ್ದಾರೆ ಕಾರ್ತಿ ಚಿದಂಬರಂ. ಕೆಲವು ಸಂಸದರು ಸದನದಿಂದ ಹೊರಗೆ ಓಡಿದರೆ ಇನ್ನು ಕೆಲವರು ದಾಳಿಕೋರರ ಕಡೆಗೆ ಓಡಿ ಅವರನ್ನು ಹಿಡಿದಿದ್ದಾರೆ.

ಇಬ್ಬರು ವ್ಯಕ್ತಿಗಳನ್ನು ಹಿಡಿದ ಕಾಂಗ್ರೆಸ್ ಸಂಸದ ಗುರ್ಜೀತ್ ಸಿಂಗ್ ಔಜ್ಲಾ, ಅವರ ಕೈಯಲ್ಲಿ ಹಳದಿ ಬಣ್ಣದ ಹೊಗೆ ಹೊರಸೂಸುವ ಏನೋ ಇತ್ತು. ನಾನು ಅದನ್ನು ಕಿತ್ತು ಹೊರಗೆ ಎಸೆದೆ. ಇದು ಪ್ರಮುಖ ಭದ್ರತಾ ಲೋಪವಾಗಿದೆ ಎಂದಿದ್ದಾರೆ.

ಬುಧವಾರ ಮಧ್ಯಾಹ್ನ 1.02 ಗಂಟೆಗೆ ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಇಬ್ಬರು ಅಪರಿಚಿತರ ಹಳದಿ ಹೊಗೆಯನ್ನು ಹೊರಸೂಸುವ ಹೊಗೆ ಡಬ್ಬಿಗಳನ್ನು ಹೊತ್ತೊಯ್ದು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಲೋಕಸಭೆಯ ಸಭಾಂಗಣಕ್ಕೆ ನುಗ್ಗಿದ್ದು ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us