AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್​ನಿಂದ ಬಡವರ ಬದುಕು ಸುಧಾರಣೆ: ಅನುರಾಗ್ ಠಾಕೂರ್

Lok Sabha: ಕೇಂದ್ರ ಬಜೆಟ್ ಆಶಾದಾಯಕವಾಗಿದ್ದುಇದು ಭಾರತವನ್ನು ಆರ್ಥಿಕ ಮತ್ತು ಉತ್ಪಾದನಾ ಕ್ಷೇತ್ರವನ್ನಾಗಿ ಮಾಡಲು ದಾರಿ ತೋರಿಸುತ್ತದೆ ಎಂದು ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

Parliament: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್​ನಿಂದ ಬಡವರ ಬದುಕು ಸುಧಾರಣೆ: ಅನುರಾಗ್ ಠಾಕೂರ್
ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 11, 2021 | 8:08 PM

Share

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಸಂಬಂಧಿತ ಚರ್ಚೆಯ ವೇಳೆ ಮಾತನಾಡಿದ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಬಡವರ ಬದುಕು ಸುಧಾರಣೆಯಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ ಆಶಾದಾಯಕವಾಗಿದ್ದು ಇದು ಭಾರತವನ್ನು ಆರ್ಥಿಕ ಮತ್ತು ಉತ್ಪಾದನಾ ಕ್ಷೇತ್ರವನ್ನಾಗಿ ಮಾಡಲು ದಾರಿ ತೋರಿಸುತ್ತದೆ. ಕೆಲವರು ಅವರವರ ನಿಲುವಿನಂತೆ ವಿರೋಧ ವ್ಯಕ್ತಪಡಿಸುತ್ತಾರೆ. ಕೆಲವರು ಗರೀಬಿ ಹಟಾವೋ ಎಂದು ಘೋಷಣೆ ಕೂಗಿದ್ದರು. 5 ತಲೆಮಾರುಗಳಿಂದ ಅಧಿಕಾರ ನಡೆಸಿದರೂ ದೇಶದಲ್ಲಿ ಬಡತನ ನಿರ್ಮೂಲನೆ ಆಗಿಲ್ಲ. ಆದರೆ ಬಡವನೊಬ್ಬನ ಮಗ ಹಲವಾರು ಮಂದಿಯನ್ನು ಬಡತನದಿಂದ ಮೇಲೆತ್ತಿದ್ದಾನೆ. ಕೆಲವು ಜನರು ಚುನಾವಣೆಯ ಪ್ರಣಾಳಿಕೆಯಲ್ಲಿ ಮಾತ್ರ ಭರವಸೆ ನೀಡುತ್ತಾರೆ. ಅದನ್ನು ನಿಭಾಯಿಸುವುದಿಲ್ಲ. ನವ ಭಾರತ ನಿರ್ಮಾಣಕ್ಕಾಗಿ, ಆತ್ಮ ನಿರ್ಭರ್ ಭಾರತಕ್ಕಾಗಿ ಬಜೆಟ್ ಹಾದಿ ತೋರಿಸಿದೆ. ಅದಕ್ಕಾಗಿ ನಾನು ವಿತ್ತ ಸಚಿವರಿಗೆ ಧನ್ಯವಾದಗಳನ್ನು ಹೇಳುತ್ತೇನೆ.

ನನಗಿಂತ ಮುಂಚೆ  ಹಿರಿಯ ಸಂಸದರೊಬ್ಬರು ಮಾತನಾಡಿದ್ದರು. ಅವರಿಗೆ ಸದನದ ನಿಯಮಗಳು ಗೊತ್ತಿರುತ್ತದೆ ಎಂದು ನಾನು  ಅಂದುಕೊಂಡಿದ್ದೆ. ಒಂದು ವಿಷಯ ಈಗಾಗಲೇ ಚರ್ಚೆಯಾಗಿದ್ದರೆ ಅದನ್ನು ಮತ್ತೆ ಚರ್ಚಿಸುವಂತಿಲ್ಲ. ಅವರು ಬಜೆಟ್ ಬಗ್ಗೆ ಮಾತನಾಡಲು  ತಯಾರಿ ನಡೆಸಿಲ್ಲ ಎಂಬುದು ನನಗರ್ಥವಾಯಿತು ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಮಂಡಿಗಳು ಮುಚ್ಚುವುದಿಲ್ಲ ಕೃಷಿ ಕಾಯ್ದೆಯಿಂದಾಗಿ ದೇಶದಲ್ಲಿ ಮಂಡಿ ವ್ಯವಸ್ಥೆ ನಾಶವಾಗುತ್ತದೆ ಎಂದು ಕೇಳಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅನುರಾಗ್ ಠಾಕೂರ್, ಕೃಷಿ ಕಾಯ್ದೆಯ ಯಾವುದೇ ಅಂಶವು ಮಂಡಿಗಳನ್ನು ಮುಚ್ಚಲಿದೆ ಎಂದು ಹೇಳುವುದಿಲ್ಲ. ಇದು ಅವರ (ರಾಹುಲ್ ಗಾಂಧಿ) ಜ್ಞಾನ ಮತ್ತು ಗ್ರಹಿಕೆಯನ್ನು ತೋರಿಸುತ್ತದೆ. ರೈತರ ಹೆಗಲಲ್ಲಿ ಗನ್ ಇಟ್ಟು ಅವರು ಶೂಟ್ ಮಾಡುತ್ತಿದ್ದಾರೆ ಎಂಬ ಸಾಮಾನ್ಯ ಜ್ಞಾನ ಕೂಡಾ ಅವರಿಗಿಲ್ಲ.

ಇದನ್ನೂ ಓದಿ:  Parliament: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಮಂಡಿ ವ್ಯವಸ್ಥೆಯನ್ನು ನಾಶ ಮಾಡಲಿದೆ: ರಾಹುಲ್ ಗಾಂಧಿ

ಯುಪಿಎ ಅವಧಿಯಲ್ಲಿ ಎಂಎಸ್​ಪಿ ಅನುಷ್ಠಾನ ಯಾಕೆ ಮಾಡಿಲ್ಲ? ಯುಪಿಎ ಅಧಿಕಾರವಧಿಯಲ್ಲಿ ಕನಿಷ್ಠ ಬೆಂಬಲ ಬೆಲೆ (MSP) ಯಾಕೆ ಅನುಷ್ಠಾನಕ್ಕೆ ತರಲಿಲ್ಲ ಎಂದು ಕಾಂಗ್ರೆಸ್ ನ್ನು ಪ್ರಶ್ನಿಸಿದ ಠಾಕೂರ್ , ಕಳೆದ ವರ್ಷ E-NAM ಮೂಲಕ ಮೋದಿ ಸರ್ಕಾರ 1000 ಮಂಡಿಗಳನ್ನು ಲಿಂಕ್ ಮಾಡಿದೆ. ಈ ವರ್ಷವೂ ನಾವು 1000 ಮಂಡಿಗಳನ್ನು ಲಿಂಕ್ ಮಾಡಲಿದ್ದೇವೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ನಾವು 1.14 ಲಕ್ಷ ಕೋಟಿ ಅನುದಾನ ನೀಡಿದ್ದೇವೆ ಎಂದಿದ್ದಾರೆ ಠಾಕೂರ್.

Published On - 8:04 pm, Thu, 11 February 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!