AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್​ನಿಂದ ಬಡವರ ಬದುಕು ಸುಧಾರಣೆ: ಅನುರಾಗ್ ಠಾಕೂರ್

Lok Sabha: ಕೇಂದ್ರ ಬಜೆಟ್ ಆಶಾದಾಯಕವಾಗಿದ್ದುಇದು ಭಾರತವನ್ನು ಆರ್ಥಿಕ ಮತ್ತು ಉತ್ಪಾದನಾ ಕ್ಷೇತ್ರವನ್ನಾಗಿ ಮಾಡಲು ದಾರಿ ತೋರಿಸುತ್ತದೆ ಎಂದು ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

Parliament: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್​ನಿಂದ ಬಡವರ ಬದುಕು ಸುಧಾರಣೆ: ಅನುರಾಗ್ ಠಾಕೂರ್
ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on:Feb 11, 2021 | 8:08 PM

Share

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಸಂಬಂಧಿತ ಚರ್ಚೆಯ ವೇಳೆ ಮಾತನಾಡಿದ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಬಡವರ ಬದುಕು ಸುಧಾರಣೆಯಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ ಆಶಾದಾಯಕವಾಗಿದ್ದು ಇದು ಭಾರತವನ್ನು ಆರ್ಥಿಕ ಮತ್ತು ಉತ್ಪಾದನಾ ಕ್ಷೇತ್ರವನ್ನಾಗಿ ಮಾಡಲು ದಾರಿ ತೋರಿಸುತ್ತದೆ. ಕೆಲವರು ಅವರವರ ನಿಲುವಿನಂತೆ ವಿರೋಧ ವ್ಯಕ್ತಪಡಿಸುತ್ತಾರೆ. ಕೆಲವರು ಗರೀಬಿ ಹಟಾವೋ ಎಂದು ಘೋಷಣೆ ಕೂಗಿದ್ದರು. 5 ತಲೆಮಾರುಗಳಿಂದ ಅಧಿಕಾರ ನಡೆಸಿದರೂ ದೇಶದಲ್ಲಿ ಬಡತನ ನಿರ್ಮೂಲನೆ ಆಗಿಲ್ಲ. ಆದರೆ ಬಡವನೊಬ್ಬನ ಮಗ ಹಲವಾರು ಮಂದಿಯನ್ನು ಬಡತನದಿಂದ ಮೇಲೆತ್ತಿದ್ದಾನೆ. ಕೆಲವು ಜನರು ಚುನಾವಣೆಯ ಪ್ರಣಾಳಿಕೆಯಲ್ಲಿ ಮಾತ್ರ ಭರವಸೆ ನೀಡುತ್ತಾರೆ. ಅದನ್ನು ನಿಭಾಯಿಸುವುದಿಲ್ಲ. ನವ ಭಾರತ ನಿರ್ಮಾಣಕ್ಕಾಗಿ, ಆತ್ಮ ನಿರ್ಭರ್ ಭಾರತಕ್ಕಾಗಿ ಬಜೆಟ್ ಹಾದಿ ತೋರಿಸಿದೆ. ಅದಕ್ಕಾಗಿ ನಾನು ವಿತ್ತ ಸಚಿವರಿಗೆ ಧನ್ಯವಾದಗಳನ್ನು ಹೇಳುತ್ತೇನೆ.

ನನಗಿಂತ ಮುಂಚೆ  ಹಿರಿಯ ಸಂಸದರೊಬ್ಬರು ಮಾತನಾಡಿದ್ದರು. ಅವರಿಗೆ ಸದನದ ನಿಯಮಗಳು ಗೊತ್ತಿರುತ್ತದೆ ಎಂದು ನಾನು  ಅಂದುಕೊಂಡಿದ್ದೆ. ಒಂದು ವಿಷಯ ಈಗಾಗಲೇ ಚರ್ಚೆಯಾಗಿದ್ದರೆ ಅದನ್ನು ಮತ್ತೆ ಚರ್ಚಿಸುವಂತಿಲ್ಲ. ಅವರು ಬಜೆಟ್ ಬಗ್ಗೆ ಮಾತನಾಡಲು  ತಯಾರಿ ನಡೆಸಿಲ್ಲ ಎಂಬುದು ನನಗರ್ಥವಾಯಿತು ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಮಂಡಿಗಳು ಮುಚ್ಚುವುದಿಲ್ಲ ಕೃಷಿ ಕಾಯ್ದೆಯಿಂದಾಗಿ ದೇಶದಲ್ಲಿ ಮಂಡಿ ವ್ಯವಸ್ಥೆ ನಾಶವಾಗುತ್ತದೆ ಎಂದು ಕೇಳಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅನುರಾಗ್ ಠಾಕೂರ್, ಕೃಷಿ ಕಾಯ್ದೆಯ ಯಾವುದೇ ಅಂಶವು ಮಂಡಿಗಳನ್ನು ಮುಚ್ಚಲಿದೆ ಎಂದು ಹೇಳುವುದಿಲ್ಲ. ಇದು ಅವರ (ರಾಹುಲ್ ಗಾಂಧಿ) ಜ್ಞಾನ ಮತ್ತು ಗ್ರಹಿಕೆಯನ್ನು ತೋರಿಸುತ್ತದೆ. ರೈತರ ಹೆಗಲಲ್ಲಿ ಗನ್ ಇಟ್ಟು ಅವರು ಶೂಟ್ ಮಾಡುತ್ತಿದ್ದಾರೆ ಎಂಬ ಸಾಮಾನ್ಯ ಜ್ಞಾನ ಕೂಡಾ ಅವರಿಗಿಲ್ಲ.

ಇದನ್ನೂ ಓದಿ:  Parliament: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಮಂಡಿ ವ್ಯವಸ್ಥೆಯನ್ನು ನಾಶ ಮಾಡಲಿದೆ: ರಾಹುಲ್ ಗಾಂಧಿ

ಯುಪಿಎ ಅವಧಿಯಲ್ಲಿ ಎಂಎಸ್​ಪಿ ಅನುಷ್ಠಾನ ಯಾಕೆ ಮಾಡಿಲ್ಲ? ಯುಪಿಎ ಅಧಿಕಾರವಧಿಯಲ್ಲಿ ಕನಿಷ್ಠ ಬೆಂಬಲ ಬೆಲೆ (MSP) ಯಾಕೆ ಅನುಷ್ಠಾನಕ್ಕೆ ತರಲಿಲ್ಲ ಎಂದು ಕಾಂಗ್ರೆಸ್ ನ್ನು ಪ್ರಶ್ನಿಸಿದ ಠಾಕೂರ್ , ಕಳೆದ ವರ್ಷ E-NAM ಮೂಲಕ ಮೋದಿ ಸರ್ಕಾರ 1000 ಮಂಡಿಗಳನ್ನು ಲಿಂಕ್ ಮಾಡಿದೆ. ಈ ವರ್ಷವೂ ನಾವು 1000 ಮಂಡಿಗಳನ್ನು ಲಿಂಕ್ ಮಾಡಲಿದ್ದೇವೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ನಾವು 1.14 ಲಕ್ಷ ಕೋಟಿ ಅನುದಾನ ನೀಡಿದ್ದೇವೆ ಎಂದಿದ್ದಾರೆ ಠಾಕೂರ್.

Published On - 8:04 pm, Thu, 11 February 21

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ